AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಗೆಹರಿಯದ 108 ಸಿಬ್ಬಂದಿ ವೇತನ ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ ಚಾಲಕರು

ಕಳೆದ ಮಾರ್ಚ್, ಎಪ್ರಿಲ್, ಮೇ ಹಾಗೂ ಜೂನ್ ಸೇರಿ 4 ತಿಂಗಳಿನಿಂದ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಸಂಬಳ ನೀಡದೇ ಉಚಿತ ಸೇವೆ ಮಾಡಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ ಸಿಬ್ಬಂದಿಗಳು ಜುಲೈ 7 ರವರೆಗೂ ಆರೋಗ್ಯ ಇಲಾಖೆಗೆ ಡೆಡ್​ಲೈನ್​ ನೀಡಿದ್ದಾರೆ.

ಬಗೆಹರಿಯದ 108 ಸಿಬ್ಬಂದಿ ವೇತನ ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ ಚಾಲಕರು
ಪ್ರಾತಿನಿಧಿಕ ಚಿತ್ರ
Vinay Kashappanavar
| Updated By: ಕಿರಣ್ ಹನುಮಂತ್​ ಮಾದಾರ್|

Updated on: Jun 28, 2023 | 1:34 PM

Share

ಬೆಂಗಳೂರು: ಜನರಿಗೆ ಅಪಘಾತ ಸೇರಿದಂತೆ ಎಲ್ಲಾ ಅವಘಡಗಳಲ್ಲೂ ಆ್ಯಂಬುಲೆನ್ಸ್(ambulance)  ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಸ್ಥಳಕ್ಕೆ ಬಂದು, ಅದೆಷ್ಟೋ ಪ್ರಾಣವನ್ನ ಉಳಿಸುವ ಮಹತ್ವದ ಕೆಲಸ ಮಾಡುವ108 ಆ್ಯಂಬುಲೆನ್ಸ್ ನೌಕರರ ವೇತನದ ಸಮಸ್ಯೆ ಮುಗಿಯುವ ಹಾಗೇ ಕಾಣುತ್ತಿಲ್ಲ. ಕಳೆದ ಮಾರ್ಚ್, ಎಪ್ರಿಲ್, ಮೇ ಹಾಗೂ ಜೂನ್ ಸೇರಿ 4 ತಿಂಗಳಿನಿಂದ ಸಂಬಳ ನೀಡದೇ ಉಚಿತ ಸೇವೆ ಮಾಡಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ ಸಿಬ್ಬಂದಿಗಳು ಜುಲೈ 7 ರವರೆಗೂ ಆರೋಗ್ಯ ಇಲಾಖೆಗೆ ಡೆಡ್ಲೈನ್ ನೀಡಿದ್ದಾರೆ. ಅಷ್ಟರೊಳಗಾಗಿ ಜಿವಿಕೆ ಸಂಸ್ಥೆ ಬಾಕಿ ಸಂಬಳವನ್ನು ಕೊಡಬೇಕು ಎಂದು ತಾಕೀತು ಹಾಕಿದ್ದು, ಜುಲೈ 7 ರಷ್ಟರಲ್ಲಿ ಸಂಬಳ ನೀಡದೆ ಹೋದರೆ, ಜುಲೈ 8 ರಂದು ರಾಜ್ಯಾದ್ಯಂತ ಕೆಲಸಕ್ಕೆ ಗೈರಾಗಲು ನೌಕರರು ನಿರ್ಧಾರ ಮಾಡಿದ್ದಾರೆ.

ಈ ಆ್ಯಂಬುಲೆನ್ಸ್ ಸಿಬ್ಬಂದಿಗಳು ಪ್ರತಿಯೊಂದಕ್ಕೂ ಹೋರಾಟ ಮಾಡಿಯೇ ಪಡೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದರೇ ತಪ್ಪಾಗಲಾರದು. ಹೌದು ಕಳೆದ 2022ರ ನವಂಬರ್​ನಲ್ಲಿ ರಾಜ್ಯ ಸರ್ಕಾರ ಆ್ಯಂಬುಲೆನ್ಸ್ ನೌಕರರ ವೇತನ ಹೆಚ್ಚಿಸಲು ಜಿವಿಕೆ ಕಂಪನಿಗೆ ಹಣ ಬಿಡುಗಡೆ ಮಾಡಿತ್ತು. ಆಗಲು ಕೂಡ ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ್ತಿಲ್ಲ ಎನ್ನುವ ಹಾಗೇ ಆಗಿತ್ತು. ಆಗಲೂ ಕೂಡ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:Video: ಆ್ಯಂಬುಲೆನ್ಸ್​​ನಲ್ಲೇ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿ ಮಹಿಳೆ

ಇದಷ್ಟೇ ಅಲ್ಲ ಜಿವಿಕೆ ಕಂಪನಿಯು ಸತತ14 ವರ್ಷಗಳಿಂದ ನಿರಂತರವಾಗಿ ಸಿಬ್ಬಂದಿಯ ಮೇಲೆ ದಬ್ಬಾಳಿಕೆ ಮಾಡಿಕೊಂಡು ಬಂದಿದೆ. ರಾಜ್ಯ ಸರ್ಕಾರ ಸಂಬಳ ಹೆಚ್ಚಳಕ್ಕೆ ಬಿಡುಗಡೆ ಮಾಡಿದರೂ ಹೈದ್ರಾಬಾದ್ ಹೆಡ್ ಆಫೀಸ್ ನಿಂದ ಅನುಮತಿ ಬೇಕು ಅಂದರೆ ಹೇಗೆ?,.ಹಾಗಾಗಿ, ಕೂಡಲೇ ರಾಜ್ಯ ಸರ್ಕಾರ ಈ ಕಂಪನಿಯನ್ನು ವಜಾ ಮಾಡಲಿ, ನಾವು ಮೂರು ತಿಂಗಳ ಕಾಲ ಉಚಿತ ಸೇವೆ ನೀಡಲು ತಯಾರಿದ್ದೇವೆ ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಎನ್ ಹೆಚ್ ಪರಮಶಿವ ಅವರು ಹೇಳಿದ್ದರು. ಇದೀಗ ಮತ್ತೆ ಸಂಬಳ ಕುರಿತು ಹೋರಾಟಕ್ಕೆ ಇಳಿಯಲು ಸಿದ್ದರಾಗಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ