ಬಗೆಹರಿಯದ 108 ಸಿಬ್ಬಂದಿ ವೇತನ ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ ಚಾಲಕರು

ಕಳೆದ ಮಾರ್ಚ್, ಎಪ್ರಿಲ್, ಮೇ ಹಾಗೂ ಜೂನ್ ಸೇರಿ 4 ತಿಂಗಳಿನಿಂದ 108 ಆ್ಯಂಬುಲೆನ್ಸ್ ಸಿಬ್ಬಂದಿಗಳಿಗೆ ಸಂಬಳ ನೀಡದೇ ಉಚಿತ ಸೇವೆ ಮಾಡಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ ಸಿಬ್ಬಂದಿಗಳು ಜುಲೈ 7 ರವರೆಗೂ ಆರೋಗ್ಯ ಇಲಾಖೆಗೆ ಡೆಡ್​ಲೈನ್​ ನೀಡಿದ್ದಾರೆ.

ಬಗೆಹರಿಯದ 108 ಸಿಬ್ಬಂದಿ ವೇತನ ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ ಚಾಲಕರು
ಪ್ರಾತಿನಿಧಿಕ ಚಿತ್ರ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 28, 2023 | 1:34 PM

ಬೆಂಗಳೂರು: ಜನರಿಗೆ ಅಪಘಾತ ಸೇರಿದಂತೆ ಎಲ್ಲಾ ಅವಘಡಗಳಲ್ಲೂ ಆ್ಯಂಬುಲೆನ್ಸ್(ambulance)  ಸಿಬ್ಬಂದಿಗಳು ನಿಗದಿತ ಸಮಯಕ್ಕೆ ಸ್ಥಳಕ್ಕೆ ಬಂದು, ಅದೆಷ್ಟೋ ಪ್ರಾಣವನ್ನ ಉಳಿಸುವ ಮಹತ್ವದ ಕೆಲಸ ಮಾಡುವ108 ಆ್ಯಂಬುಲೆನ್ಸ್ ನೌಕರರ ವೇತನದ ಸಮಸ್ಯೆ ಮುಗಿಯುವ ಹಾಗೇ ಕಾಣುತ್ತಿಲ್ಲ. ಕಳೆದ ಮಾರ್ಚ್, ಎಪ್ರಿಲ್, ಮೇ ಹಾಗೂ ಜೂನ್ ಸೇರಿ 4 ತಿಂಗಳಿನಿಂದ ಸಂಬಳ ನೀಡದೇ ಉಚಿತ ಸೇವೆ ಮಾಡಿಸಿಕೊಳ್ಳುತ್ತಿದ್ದು, ಈ ಹಿನ್ನೆಲೆ ಸಿಬ್ಬಂದಿಗಳು ಜುಲೈ 7 ರವರೆಗೂ ಆರೋಗ್ಯ ಇಲಾಖೆಗೆ ಡೆಡ್ಲೈನ್ ನೀಡಿದ್ದಾರೆ. ಅಷ್ಟರೊಳಗಾಗಿ ಜಿವಿಕೆ ಸಂಸ್ಥೆ ಬಾಕಿ ಸಂಬಳವನ್ನು ಕೊಡಬೇಕು ಎಂದು ತಾಕೀತು ಹಾಕಿದ್ದು, ಜುಲೈ 7 ರಷ್ಟರಲ್ಲಿ ಸಂಬಳ ನೀಡದೆ ಹೋದರೆ, ಜುಲೈ 8 ರಂದು ರಾಜ್ಯಾದ್ಯಂತ ಕೆಲಸಕ್ಕೆ ಗೈರಾಗಲು ನೌಕರರು ನಿರ್ಧಾರ ಮಾಡಿದ್ದಾರೆ.

ಈ ಆ್ಯಂಬುಲೆನ್ಸ್ ಸಿಬ್ಬಂದಿಗಳು ಪ್ರತಿಯೊಂದಕ್ಕೂ ಹೋರಾಟ ಮಾಡಿಯೇ ಪಡೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ ಎಂದರೇ ತಪ್ಪಾಗಲಾರದು. ಹೌದು ಕಳೆದ 2022ರ ನವಂಬರ್​ನಲ್ಲಿ ರಾಜ್ಯ ಸರ್ಕಾರ ಆ್ಯಂಬುಲೆನ್ಸ್ ನೌಕರರ ವೇತನ ಹೆಚ್ಚಿಸಲು ಜಿವಿಕೆ ಕಂಪನಿಗೆ ಹಣ ಬಿಡುಗಡೆ ಮಾಡಿತ್ತು. ಆಗಲು ಕೂಡ ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ್ತಿಲ್ಲ ಎನ್ನುವ ಹಾಗೇ ಆಗಿತ್ತು. ಆಗಲೂ ಕೂಡ ರಾಜ್ಯಾದ್ಯಂತ ಹೋರಾಟ ಮಾಡುವ ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ:Video: ಆ್ಯಂಬುಲೆನ್ಸ್​​ನಲ್ಲೇ ಹೆರಿಗೆ: ಗಂಡು ಮಗುವಿಗೆ ಜನ್ಮ ನೀಡಿ ಮಹಿಳೆ

ಇದಷ್ಟೇ ಅಲ್ಲ ಜಿವಿಕೆ ಕಂಪನಿಯು ಸತತ14 ವರ್ಷಗಳಿಂದ ನಿರಂತರವಾಗಿ ಸಿಬ್ಬಂದಿಯ ಮೇಲೆ ದಬ್ಬಾಳಿಕೆ ಮಾಡಿಕೊಂಡು ಬಂದಿದೆ. ರಾಜ್ಯ ಸರ್ಕಾರ ಸಂಬಳ ಹೆಚ್ಚಳಕ್ಕೆ ಬಿಡುಗಡೆ ಮಾಡಿದರೂ ಹೈದ್ರಾಬಾದ್ ಹೆಡ್ ಆಫೀಸ್ ನಿಂದ ಅನುಮತಿ ಬೇಕು ಅಂದರೆ ಹೇಗೆ?,.ಹಾಗಾಗಿ, ಕೂಡಲೇ ರಾಜ್ಯ ಸರ್ಕಾರ ಈ ಕಂಪನಿಯನ್ನು ವಜಾ ಮಾಡಲಿ, ನಾವು ಮೂರು ತಿಂಗಳ ಕಾಲ ಉಚಿತ ಸೇವೆ ನೀಡಲು ತಯಾರಿದ್ದೇವೆ ಎಂದು 108 ನೌಕರರ ಸಂಘದ ಉಪಾಧ್ಯಕ್ಷ ಎನ್ ಹೆಚ್ ಪರಮಶಿವ ಅವರು ಹೇಳಿದ್ದರು. ಇದೀಗ ಮತ್ತೆ ಸಂಬಳ ಕುರಿತು ಹೋರಾಟಕ್ಕೆ ಇಳಿಯಲು ಸಿದ್ದರಾಗಿದ್ದಾರೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ