AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ; ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ

ಬೀದಿ ನಾಯಿಗಳ (Street Dogs) ಸಂತಾನ ನಿಯಂತ್ರಣ ಕಾನೂನು ಜಾರಿಗೆ ಸರ್ಕಾರ ಮೀನಮೇಷ ಮಾಡುತ್ತಿದೆ. ಈ ಹಿನ್ನಲೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ತನ್ನ ನಡತೆ ಸರಿಪಡಿಸಿಕೊಳ್ಳಬೇಕು. ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಶೀಘ್ರವಾಗಿ ಉತ್ತರಿಸಬೇಕಿದೆ. 3 ವಾರದಲ್ಲಿ ಉತ್ತರಿಸದಿದ್ರೆ, ಸರ್ಕಾರದ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ ನೀಡಿದೆ.

ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ; ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ
ಪ್ರಾತಿನಿಧಿಕ ಚಿತ್ರ
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on: Oct 05, 2023 | 3:10 PM

ಬೆಂಗಳೂರು, ಅ.05: ಬೀದಿ ನಾಯಿಗಳ (Street Dogs) ಸಂತಾನ ನಿಯಂತ್ರಣ ಕಾನೂನು ಜಾರಿಗೆ ಸರ್ಕಾರ ಮೀನಮೇಷ ಮಾಡುತ್ತಿದೆ. ಈ ಹಿನ್ನಲೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದ್ದು, ಪಿಐಎಲ್​ಗೆ ಉತ್ತರಿಸಲು ಸರ್ಕಾರ ಕಾಲಾವಕಾಶ ಕೋರಿದೆ. ‘ಸರ್ಕಾರ ತಂತ್ರಜ್ಞಾನ ಬಳಕೆಯಲ್ಲಿ‌ ಮುಂಚೂಣಿಯಲ್ಲಿದೆ ಎಂದು ಭಾವಿಸಿದ್ದೆವು. ಆದರೆ, ಖಾತಾ ಎಂಟ್ರಿಗೂ ಜನ ಕೋರ್ಟ್​​ಗೆ ಬರಬೇಕಾದ ಪರಿಸ್ಥಿತಿ ಇದೆ. ಸರ್ಕಾರದ ಐಟಿ, ಬರಿ ತೋರಿಕೆನಾ, ಪರಿಣಾಮಕಾರಿನಾ? ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ S.ದೀಕ್ಷಿತ್​ರಿದ್ದ ಪೀಠ ಅಸಮಾಧಾನ ತೋರಿದೆ.

3 ವಾರದಲ್ಲಿ ಉತ್ತರಿಸದಿದ್ರೆ ಸರ್ಕಾರ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ

ರಾಜ್ಯ ಸರ್ಕಾರ ತನ್ನ ನಡತೆ ಸರಿಪಡಿಸಿಕೊಳ್ಳಬೇಕು. ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಶೀಘ್ರವಾಗಿ ಉತ್ತರಿಸಬೇಕಿದೆ. 3 ವಾರದಲ್ಲಿ ಉತ್ತರಿಸದಿದ್ರೆ, ಸರ್ಕಾರದ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ ನೀಡಿದೆ. ಹೌದು, ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿ ಅನುಷ್ಠಾನ ಪಿಐಎಲ್ ಕೋರಿದ್ದು, ವಿಧಾನಸೌಧದ ಗೇಟ್ ಬಳಿ ನಾಯಿ,‌ ಪಕ್ಷಿಗಳಿಗೆ ಆಹಾರ ಹಾಕಲಾಗುತ್ತಿದೆ. ಬೀದಿ ನಾಯಿಗಳಿಗೆ ಆಹಾರ ನೀಡಲು ನಿಗದಿತ ಸ್ಥಳವಿಲ್ಲದಿರುವುದರಿಂದ ಪಾದಚಾರಿಗಳಿಗೆ,‌ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಜೊತೆಗೆ ನಾಯಿಗಳಿಗೆ ವ್ಯಾಕ್ಸಿನ್, ಸಂತಾನಶಕ್ತಿ ಹರಣದ ಬಗ್ಗೆ ಕ್ರಮಕ್ಕೆ ಮುಂದಾಗುತ್ತಿಲ್ಲ. ಈ ಕುರಿತು ನವೆಂಬರ್ 15ರೊಳಗೆ ಸಮಗ್ರ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ಕಾಟ: ಕಳೆದ 9 ತಿಂಗಳಲ್ಲಿ 5507 ಜನರಿಗೆ ಕಚ್ಚಿದ ಶ್ವಾನಗಳು

ಬೀದಿ ನಾಯಿಗಳ ಸಮೀಕ್ಷೆ ಮಾಡಿದ್ದ ಬಿಬಿಎಂಪಿ

ಇತ್ತೀಚೆಗೆ ಬಿಬಿಎಂಪಿ ಬೀದಿ ನಾಯಿಗಳ ಸಮೀಕ್ಷೆಗೆ ಒಟ್ಟು 50 ತಂಡಗಳನ್ನು ರಚಿಸಿ, ಬೀದಿ ನಾಯಿಗಳ ಸಮೀಕ್ಷೆ ನಡೆಸಿದ್ದರು. ಬೆಂಗಳೂರಲ್ಲಿ ಒಟ್ಟು 2,79,335 ಬೀದಿ ನಾಯಿಗಳನ್ನು ಪಾಲಿಕೆ ಗುರುತಿಸಿತ್ತು. 2019ರ ಸಮೀಕ್ಷೆ ಪ್ರಕಾರ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಆಗಿದ್ದು, ಸುಮಾರು 32 ಸಾವಿರ ಬೀದಿ ನಾಯಿಗಳು ಕಾಲಕ್ರಮೇಣವಾಗಿ ಕಡಿಮೆಯಾಗಿದೆ. ಹೌದು, ಬೆಂಗಳೂರು ಜನರು ಬೀದಿ ನಾಯಿಗಳ ದಾಳಿಗೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮೂರು ತಿಂಗಳ ಹಿಂದೆ ಸಮೀಕ್ಷೆ ನಡೆಸುವುದಾಗಿ ಬಿಬಿಎಂಪಿ ಹೇಳಿತ್ತು. ಹಾಗಾಗಿ ಇದೀಗ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿ, ವಲಯವಾರು ಬೀದಿ ನಾಯಿಗಳ ಪಟ್ಟಿಯನ್ನು ಪಾಲಿಕೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಬಿಡುಗಡೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!