AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ; ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ

ಬೀದಿ ನಾಯಿಗಳ (Street Dogs) ಸಂತಾನ ನಿಯಂತ್ರಣ ಕಾನೂನು ಜಾರಿಗೆ ಸರ್ಕಾರ ಮೀನಮೇಷ ಮಾಡುತ್ತಿದೆ. ಈ ಹಿನ್ನಲೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರ ತನ್ನ ನಡತೆ ಸರಿಪಡಿಸಿಕೊಳ್ಳಬೇಕು. ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಶೀಘ್ರವಾಗಿ ಉತ್ತರಿಸಬೇಕಿದೆ. 3 ವಾರದಲ್ಲಿ ಉತ್ತರಿಸದಿದ್ರೆ, ಸರ್ಕಾರದ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ ನೀಡಿದೆ.

ನಾಯಿಗಳ ಸಂತಾನ ನಿಯಂತ್ರಣ ಕಾನೂನು ಜಾರಿಗೆ ಮೀನಮೇಷ; ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ
ಪ್ರಾತಿನಿಧಿಕ ಚಿತ್ರ
Ramesha M
| Edited By: |

Updated on: Oct 05, 2023 | 3:10 PM

Share

ಬೆಂಗಳೂರು, ಅ.05: ಬೀದಿ ನಾಯಿಗಳ (Street Dogs) ಸಂತಾನ ನಿಯಂತ್ರಣ ಕಾನೂನು ಜಾರಿಗೆ ಸರ್ಕಾರ ಮೀನಮೇಷ ಮಾಡುತ್ತಿದೆ. ಈ ಹಿನ್ನಲೆ ಸರ್ಕಾರದ ವಿಳಂಬ ನೀತಿಗೆ ಹೈಕೋರ್ಟ್ (High Court) ಅಸಮಾಧಾನ ವ್ಯಕ್ತಪಡಿಸಿದ್ದು, ಪಿಐಎಲ್​ಗೆ ಉತ್ತರಿಸಲು ಸರ್ಕಾರ ಕಾಲಾವಕಾಶ ಕೋರಿದೆ. ‘ಸರ್ಕಾರ ತಂತ್ರಜ್ಞಾನ ಬಳಕೆಯಲ್ಲಿ‌ ಮುಂಚೂಣಿಯಲ್ಲಿದೆ ಎಂದು ಭಾವಿಸಿದ್ದೆವು. ಆದರೆ, ಖಾತಾ ಎಂಟ್ರಿಗೂ ಜನ ಕೋರ್ಟ್​​ಗೆ ಬರಬೇಕಾದ ಪರಿಸ್ಥಿತಿ ಇದೆ. ಸರ್ಕಾರದ ಐಟಿ, ಬರಿ ತೋರಿಕೆನಾ, ಪರಿಣಾಮಕಾರಿನಾ? ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ.ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ S.ದೀಕ್ಷಿತ್​ರಿದ್ದ ಪೀಠ ಅಸಮಾಧಾನ ತೋರಿದೆ.

3 ವಾರದಲ್ಲಿ ಉತ್ತರಿಸದಿದ್ರೆ ಸರ್ಕಾರ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ

ರಾಜ್ಯ ಸರ್ಕಾರ ತನ್ನ ನಡತೆ ಸರಿಪಡಿಸಿಕೊಳ್ಳಬೇಕು. ಜೊತೆಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಶೀಘ್ರವಾಗಿ ಉತ್ತರಿಸಬೇಕಿದೆ. 3 ವಾರದಲ್ಲಿ ಉತ್ತರಿಸದಿದ್ರೆ, ಸರ್ಕಾರದ ವಿರುದ್ಧ ಸೂಕ್ತ ಆದೇಶದ ಎಚ್ಚರಿಕೆ ನೀಡಿದೆ. ಹೌದು, ಪ್ರಾಣಿ ಕಲ್ಯಾಣ ಮಂಡಳಿಯ ಮಾರ್ಗಸೂಚಿ ಅನುಷ್ಠಾನ ಪಿಐಎಲ್ ಕೋರಿದ್ದು, ವಿಧಾನಸೌಧದ ಗೇಟ್ ಬಳಿ ನಾಯಿ,‌ ಪಕ್ಷಿಗಳಿಗೆ ಆಹಾರ ಹಾಕಲಾಗುತ್ತಿದೆ. ಬೀದಿ ನಾಯಿಗಳಿಗೆ ಆಹಾರ ನೀಡಲು ನಿಗದಿತ ಸ್ಥಳವಿಲ್ಲದಿರುವುದರಿಂದ ಪಾದಚಾರಿಗಳಿಗೆ,‌ ಶಾಲಾ ಮಕ್ಕಳಿಗೆ ತೊಂದರೆಯಾಗುತ್ತಿದೆ. ಜೊತೆಗೆ ನಾಯಿಗಳಿಗೆ ವ್ಯಾಕ್ಸಿನ್, ಸಂತಾನಶಕ್ತಿ ಹರಣದ ಬಗ್ಗೆ ಕ್ರಮಕ್ಕೆ ಮುಂದಾಗುತ್ತಿಲ್ಲ. ಈ ಕುರಿತು ನವೆಂಬರ್ 15ರೊಳಗೆ ಸಮಗ್ರ ಪ್ರತಿಕ್ರಿಯೆ ಸಲ್ಲಿಸಲು ಹೈಕೋರ್ಟ್ ಸೂಚನೆ ನೀಡಿದೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬೀದಿ ನಾಯಿಗಳ ಕಾಟ: ಕಳೆದ 9 ತಿಂಗಳಲ್ಲಿ 5507 ಜನರಿಗೆ ಕಚ್ಚಿದ ಶ್ವಾನಗಳು

ಬೀದಿ ನಾಯಿಗಳ ಸಮೀಕ್ಷೆ ಮಾಡಿದ್ದ ಬಿಬಿಎಂಪಿ

ಇತ್ತೀಚೆಗೆ ಬಿಬಿಎಂಪಿ ಬೀದಿ ನಾಯಿಗಳ ಸಮೀಕ್ಷೆಗೆ ಒಟ್ಟು 50 ತಂಡಗಳನ್ನು ರಚಿಸಿ, ಬೀದಿ ನಾಯಿಗಳ ಸಮೀಕ್ಷೆ ನಡೆಸಿದ್ದರು. ಬೆಂಗಳೂರಲ್ಲಿ ಒಟ್ಟು 2,79,335 ಬೀದಿ ನಾಯಿಗಳನ್ನು ಪಾಲಿಕೆ ಗುರುತಿಸಿತ್ತು. 2019ರ ಸಮೀಕ್ಷೆ ಪ್ರಕಾರ ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಆಗಿದ್ದು, ಸುಮಾರು 32 ಸಾವಿರ ಬೀದಿ ನಾಯಿಗಳು ಕಾಲಕ್ರಮೇಣವಾಗಿ ಕಡಿಮೆಯಾಗಿದೆ. ಹೌದು, ಬೆಂಗಳೂರು ಜನರು ಬೀದಿ ನಾಯಿಗಳ ದಾಳಿಗೆ ಒಳಗಾಗುತ್ತಿದ್ದಾರೆ. ಈ ಹಿನ್ನೆಲೆ ಮೂರು ತಿಂಗಳ ಹಿಂದೆ ಸಮೀಕ್ಷೆ ನಡೆಸುವುದಾಗಿ ಬಿಬಿಎಂಪಿ ಹೇಳಿತ್ತು. ಹಾಗಾಗಿ ಇದೀಗ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ಬೀದಿ ನಾಯಿಗಳ ಸಮೀಕ್ಷೆ ಮಾಡಿ ಮುಗಿಸಿ, ವಲಯವಾರು ಬೀದಿ ನಾಯಿಗಳ ಪಟ್ಟಿಯನ್ನು ಪಾಲಿಕೆ ವಿಶೇಷ ಆಯುಕ್ತ ತ್ರಿಲೋಕ್ ಚಂದ್ರ ಬಿಡುಗಡೆ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ