ಪತ್ನಿಗೆ ಕುಡಿತದ ಚಟ ಬಿಡಿಸಲು ರಿಹ್ಯಾಬ್​​ ಕೇಂದ್ರಕ್ಕೆ ಸೇರಿಸಿದ ಗಂಡ: ಹೆಂಡತಿ ಕೆಲಸಗಾರನ ಜೊತೆ ಓಡಿಹೋದಳು!

ಗಂಡನ ಕುಡಿತ ಬಿಡಿಸಲು ಹೆಂಡತಿ ಪರದಾಡುವುದನ್ನ ನೋಡಿದ್ದೇವೆ. ಆದರೆ, ಇಲ್ಲಿ ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ರಿಹ್ಯಾಬ್​​ ಕೇಂದ್ರಕ್ಕೆ ಪತಿಯೇ ಸೇರಿಸಿದ್ದು, ದುರಂತ ಎಂಬಂತೆ ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಈ ಕುರಿತು ಒಂದು ಸ್ಟೋರಿ ಇಲ್ಲಿದೆ.

ಪತ್ನಿಗೆ ಕುಡಿತದ ಚಟ ಬಿಡಿಸಲು ರಿಹ್ಯಾಬ್​​ ಕೇಂದ್ರಕ್ಕೆ ಸೇರಿಸಿದ ಗಂಡ: ಹೆಂಡತಿ ಕೆಲಸಗಾರನ ಜೊತೆ ಓಡಿಹೋದಳು!
ಗಂಡ-ಹೆಂಡತಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 24, 2024 | 5:28 PM

ಬೆಂಗಳೂರು, ಆ.24: ಪತ್ನಿಯ ಕುಡಿತದ ಚಟ ಬಿಡಿಸುವ ಸಲುವಾಗಿ ಪತ್ನಿಯನ್ನ ರಿಹ್ಯಾಬ್​​ ಕೇಂದ್ರಕ್ಕೆ ಪತಿ ಸೇರಿಸಿದ್ದ. ಆದರೆ, ರಿಹ್ಯಾಬ್​​ ಕೇಂದ್ರದ ಕೆಲಸಗಾರನ ಜೊತೆಯೇ ಹೆಂಡತಿ ಪರಾರಿಯಾಗಿದ್ದಾಳೆ. ಹೌದು, ಈ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿ ನಡೆದಿದೆ. ಕೆಲಸ ಮಾಡುತ್ತಿದ್ದ ಸುನೀಲ್ ಎಂಬಾತನ ಜೊತೆ ಪರಾರಿಯಾಗಿದ್ದಾರೆ ಎಂದು  ಪತಿ ಗಂಗರಾಜು ಆರೋಪಿಸಿದ್ದು, ‘ನನ್ನ ಪತ್ನಿಯನ್ನು ಹುಡುಕಿ ಕೊಡಿ ಎಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

11 ವರ್ಷದ ಮಗನನ್ನು ಬಿಟ್ಟು ಹೋಗಿರುವ ಮಹಿಳೆ; ಆಗಿದ್ದೇನು?

ನೆಲಮಂಗಲ ತಾಲ್ಲೂಕಿನ ದಿಣ್ಣೆಪಾಳ್ಯ ಗ್ರಾಮದ ದಂಪತಿಯಾದ ಇವರು, 13 ವರ್ಷಗಳ ಹಿಂದೆ ಮದುವೆಯಾಗಿದ್ದ ಬೆಂಗಳೂರಿನ ಬಾಗಲಗುಂಟೆ ಬಳಿಯ ಮಂಜುನಾಥನಗರದಲ್ಲಿರು. ಇದೀಗ 11 ವರ್ಷದ ಮಗನನ್ನ ಬಿಟ್ಟು ಹೋಗಿದ್ದಾಳೆ. ವಿಪರೀತ ಕುಡಿತ ಹಿನ್ನೆಲೆ ಬಿಡಿಸುವ ಸಲುವಾಗಿ ಶ್ರೀ ಸಾಯಿ ಫೌಂಡೇಶನ್ ಹೆಸರಿನ ರಿಹ್ಯಾಬ್​​ ಕೇಂದ್ರಕ್ಕೆ ಮೇ4 ರಂದು ಸೇರಿಸಿದ್ದ ಪತಿ, ಬಳಿಕ ಆಗಸ್ಟ್ 10ನೇ ತಾರೀಖು ಮನೆಗೆ ಪತ್ನಿಯನ್ನ ಕರೆದುಕೊಂಡು ಬಂದಿದ್ದ. ನಂತರ 22ನೇ ತಾರೀಖು ಮಗನ ಪಿಜಿಯಲ್ಲಿ ಇರುವುದಾಗಿ ಹೇಳಿ ಹೋದವಳು ನಾಪತ್ತೆಯಾಗಿದ್ದಾಳೆ.

ಇದನ್ನೂ ಓದಿ:ನೆಲಮಂಗಲ: ಯುವತಿಯ ಎದೆ ಭಾಗ ಮುಟ್ಟಿ ಪರಾರಿಯಾಗಿದ್ದ ಆರೋಪಿ ಬಂಧನ

ಪತ್ನಿ ಹುಡುಕಿಕೊಡುವಂತೆ ಪತಿ ಮನವಿ

ಇನ್ನು ಪತಿ ಗಂಗರಾಜ್ ಬಿಎಂಟಿಸಿ ಕಂಡಕ್ಟರ್ ಆಗಿದ್ದ. ಎಂದಿನಂತೆ ಕರ್ತವ್ಯ ಮುಗಿಸಿ ಮನೆಗೆ ಬಂದು ನೋಡಿದಾಗ ಪತ್ನಿ ನಾಪತ್ತೆಯಾಗಿದ್ದಾಳೆ. ಇದೀಗ ರಿಹ್ಯಾಬ್​​ ಕೇಂದ್ರದ ಕೆಲಸಗಾರ ಸುನೀಲ್ ಎಂಬಾತನ ಜೊತೆಯೇ ಹೋಗಿದ್ದಾಳೆ ಎಂದು ಅರೋಪಿಸಿ ಬಾಗಲಗುಂಟೆ ಪೊಲೀಸ್ ಠಾಣೆಗೆ ದೂರು ದಾಖಲಿಸಿ, ಪತ್ನಿಯನ್ನು ಹುಡುಕಿಕೊಡುವಂತೆ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಮಿಸ್ಸಿಂಗ್ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಹುಡುಕಾಟ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!