AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರೆಂದು ಹೇಳಿ ಮನೆಗೆ ನುಗ್ಗಿದ ಖದೀಮರು; ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ ಕಳ್ಳರು

ಮಹಾನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿರುವ ಯುವಕರೇ ಹುಷಾರು, ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದೆ. ಹೌದು ನಾವು ಪೊಲೀಸರೆಂದು ಹೇಳಿ ಯುವಕರಿದ್ದ ಬಾಡಿಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪೊಲೀಸರೆಂದು ಹೇಳಿ ಮನೆಗೆ ನುಗ್ಗಿದ ಖದೀಮರು; ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ  ಕಳ್ಳರು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 14, 2023 | 10:27 AM

Share

ಬೆಂಗಳೂರು: ಮಹಾನಗರಕ್ಕೆ ಬಂದು ಬಾಡಿಗೆ ಮನೆಯಲ್ಲಿರುವ ಯುವಕರೇ ಹುಷಾರು, ನಕಲಿ ಪೊಲೀಸರ ಹಾವಳಿ ಹೆಚ್ಚಾಗಿದೆ. ಹೌದು ನಾವು ಪೊಲೀಸರೆಂದು ಹೇಳಿ ಯುವಕರಿದ್ದ ಬಾಡಿಗೆ ಮನೆಗೆ ನುಗ್ಗಿ ಸುಲಿಗೆ ಮಾಡಿದ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ (Vidyaranyapura Police Station) ವ್ಯಾಪ್ತಿಯಲ್ಲಿ ನಡೆದಿದೆ. ನಿಮ್ಮ ರೂಂನಲ್ಲಿ ಡ್ರಗ್ಸ್​​ ಸೇವಿಸುವ ಬಗ್ಗೆ ಮಾಹಿತಿಯಿದೆ, ಪರಿಶೀಲನೆ ನಡೆಸಬೇಕೆಂದು ಒಳಗಡೆ ಬಂದಿದ್ದಾರೆ. ಮನೆಯಲ್ಲಿ ಏನೂ ಬೆಲೆ ಬಾಳುವ ವಸ್ತುಗಳು ಸಿಗದ ಕಾರಣ ನಾಲ್ವರು ಯುವಕರಿಗೆ ಚಾಕು ತೋರಿಸಿ ಕೈಯಲ್ಲಿದ್ದ ಉಂಗುರ, ಇತರೆ ವಸ್ತುಗಳನ್ನು ದೋಚಿದ್ದಾರೆ. ಅಷ್ಟೇ ಅಲ್ಲದೆ ಫೋನ್​ ಪೇ ಮೂಲಕ 13 ಸಾವಿರ ಹಣವನ್ನ ಅಕೌಂಟ್​ಗೆ ಹಾಕಿಸಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ಖದೀಮರಿಗಾಗಿ ಬಲೆ ಬೀಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮೂವರು ಯುವಕರು

ಇನ್ನು ಈ ಮೂವರು ಯುವಕರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೇ, ಓರ್ವ ಯುವಕ ವ್ಯಾಸಂಗ ಮಾಡುತ್ತಿದ್ದ. ಇಂದು(ಜು.14) ಬೆಳಗ್ಗಿನ ಜಾವ ಮನೆಯ ಬಾಗಿಲು ತಟ್ಟಿದ್ದ ಸುಲಿಗೆಕೋರರು. ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ಒಳ ನುಗ್ಗಿ, ಯುವಕರಿಗೆ ಚಾಕು ತೋರಿಸಿ ಸುಲಿಗೆ ಮಾಡಿದ್ದಾರೆ. ಆರೋಪಗಳಿಗಾಗಿ ವಿದ್ಯಾರಣ್ಯಪುರ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಹಲವು ಪೊಲೀಸರಿಗೆ ವಂಚಿಸಿದ್ದ ನಕಲಿ ಐಪಿಎಸ್ ಅರ್ಜುನ್ ಅರೆಸ್ಟ್

ಪೇಂಟ್ ಅಂಡ್ ಹಾರ್ಡ್ ವೇರ್ ಅಂಗಡಿಯಲ್ಲಿ ‌ಕಳ್ಳನ ಕರಾಮತ್ತು

ಮಂಡ್ಯ: ಪೇಂಟ್ ಅಂಡ್ ಹಾರ್ಡ್ ವೇರ್ ಅಂಗಡಿಯಲ್ಲಿ ಕಳ್ಳ ತನ್ನ ಕರಾಮತ್ತು ತೋರಿಸಿದ್ದಾನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಿಕ್ಕೆರೆ ಗ್ರಾಮದ ರಾಮಲಿಂಗಯ್ಯ ಎಂಬುವವರ ಸೇರಿದ ಅಂಗಡಿ ಇದಾಗಿದ್ದು, ಅಂಗಡಿಗೆ ನುಗ್ಗಿದ ಖತರ್ನಾಕ್ ಕಳ್ಳ, ಕ್ಯಾಶ್ ಕೌಂಟರ್ ಡ್ರಾಯರ್​ನಿಂದ ಹತ್ತು ಸಾವಿರ ಹಣ ಎಗರಿಸಿದ್ದಾನೆ. ಕಳ್ಳತನ ಕರಾಮತ್ತು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ