Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೈಕ್​ ಪಾರ್ಕಿಂಗ್​ ವಿಚಾರಕ್ಕೆ ಹತ್ಯೆ ಪ್ರಕರಣ; 15 ದಿನಗಳ ಬಳಿಕ ಆರೋಪಿಗಳನ್ನ ಬಂಧಿಸಿದ ಪೊಲೀಸರು

ಬೈಕ್​ ಪಾರ್ಕಿಂಗ್​ ವಿಚಾರಕ್ಕೆ ಜನಾರ್ದನ ಭಟ್ ಎಂಬಾತನ ಕೊಲೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ, 15 ದಿನಗಳ ಬಳಿಕ ಯಲಹಂಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು: ಬೈಕ್​ ಪಾರ್ಕಿಂಗ್​ ವಿಚಾರಕ್ಕೆ ಹತ್ಯೆ ಪ್ರಕರಣ; 15 ದಿನಗಳ ಬಳಿಕ ಆರೋಪಿಗಳನ್ನ ಬಂಧಿಸಿದ ಪೊಲೀಸರು
ಕೊಲೆ ಮಾಡಿದ ಆರೋಪಿಗಳು
Follow us
ಕಿರಣ್ ಹನುಮಂತ್​ ಮಾದಾರ್
|

Updated on:Apr 15, 2023 | 7:43 AM

ಬೆಂಗಳೂರು: ಬೈಕ್​ ಪಾರ್ಕಿಂಗ್​ ವಿಚಾರಕ್ಕೆ ಜನಾರ್ದನ ಭಟ್ ಎಂಬಾತನ ಕೊಲೆ(Murder) ಪ್ರಕರಣಕ್ಕೆ ಸಂಬಂಧಿಸಿದಂತೆ, 15 ದಿನಗಳ ಬಳಿಕ ಯಲಹಂಕ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ರಿಜ್ವಾನ್, ಸುಲೇಮಾನ್​ ಬಂಧನವಾದ ಆರೋಪಿಗಳು. ಮಾರ್ಚ್​ 29ರಂದು ಯಲಹಂಕದಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ಸಹೋದ್ಯೋಗಿಗಳಿಂದಲೇ ಜನಾರ್ದನ ಭಟ್ ಎಂಬಾತನ ಕೊಲೆ ಆಗಿತ್ತು. ಕೊಲೆ ಬಳಿಕ ಇಬ್ಬರು ಆರೋಪಿಗಳು ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದರು. ಈ ಕುರಿತು ಖಚಿತ ಮಾಹಿತಿ ಆಧರಿಸಿದ ಯಲಹಂಕ ಪೊಲೀಸರು ಕೋಲ್ಕತ್ತಾಗೆ ತೆರಳಿ ಇಬ್ಬರನ್ನು ಬಂಧಿಸಿದ್ದಾರೆ.

ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದ ಮೂವರು

ಹೌದು ಯೂನಾಫ್ ಡಿಜಿಟಲ್ ಸೆಲ್ಯೂಚನ್ ಎಂಬ ಟಿವಿ ರಿಪೇರಿ ಕಂಪನಿಯಲ್ಲಿ ಈ ಮೂವರು ಕೆಲಸಕ್ಕಿದ್ದರು. ಹೀಗಾಗಿ ಕಂಪನಿ ಮಾಲೀಕನೇ ಮೂವರಿಗೂ ಒಂದೇ ಮನೆ ಮಾಡಿ ಇರಿಸಿದ್ದರು. ಯಲಹಂಕದ ಶ್ರೀನಿವಾಸಪುರದ ಮನೆಯಲ್ಲಿ ಕಳೆದ ಆರು ತಿಂಗಳಿಂದ ಒಂದೇ ಮನೆಯಲ್ಲಿ ಮೂವರು ವಾಸವಿದ್ದರು.

ಇದನ್ನೂ ಓದಿ: ನರ್ಸ್​ ನಿಗೂಢ ಹತ್ಯೆ! ಹಂತಕ ಆ ಒಂದು ಸುಳಿವು ನೀಡಿದ ತಕ್ಷಣ, ಚಾಣಾಕ್ಷ ಗದಗ ಪೊಲೀಸರು ಆರೋಪಿಯನ್ನು ಲಾಕ್​ ಮಾಡಿಯೇ ಬಿಟ್ರು!

ಬುದ್ದಿ ಕಲಿಸಲು ಹೋಗಿ ಮಾಡಿಕೊಂಡ ಎಡವಟ್ಟಿಗೆ ನಡೆದಿತ್ತು ಕೊಲೆ

ಒಟ್ಟೆಗೆ ವಾಸವಿದ್ದ ಜನಾರ್ಧನ್, ರಿಜ್ವಾನ್ ಹಾಗೂ ಸುಲೇಮಾನ್, ಆದರೆ ಇತ್ತೀಚಿಗೆ ಜನಾರ್ಧನ್ ಹಾಗೂ ಇಬ್ಬರ ನಡುವೆ ಮನಸ್ತಾಪ ಶುರುವಾಗಿದ್ದು, ಸಣ್ಣಪುಟ್ಟ ವಿಚಾರಕ್ಕೆ ಜಗಳ ಮಾಡಿಕೊಳ್ಳುತ್ತಿದ್ದರು. ಮಾರ್ಚ್​ 29ರಂದು ಕೆಲಸ ಮುಗಿಸಿ ಬೇಗ ರೂಂಗೆ ಬಂದಿದ್ದ ಜನಾರ್ಧನ್​ ಭಟ್ , ಒಳಗಡೆ ಬೈಕ್​ ಪಾರ್ಕ್​ ಮಾಡಿದ್ದ. ಬಳಿಕ ಬಂದ ಇಬ್ಬರು ತಮ್ಮ ಗಾಡಿ ಒಳಗೆ ಹಾಕಬೇಕಾಗಿತ್ತು ಎಂಬ ವಿಚಾರಕ್ಕೆ ರಿಜ್ವಾನ್ ಹಾಗೂ ಸುಲೇಮಾನ್​ ಸೇರಿ ಜನಾರ್ಧನ್​ ಜೊತೆ ಜಗಳ ಮಾಡಲು ಶುರುಮಾಡಿದ್ದಾರೆ. ಇದು ತಾರಕಕ್ಕೇರಿ ಹೊಡೆದಾಟ ಮಾಡಿಕೊಂಡಿದ್ದಾರೆ. ಬಳಿಕ ಇತನಿಗೆ ಬುದ್ದಿ ಕಲಿಸಬೇಕೆಂದು ನಿರ್ಧರಿಸಿದ ಇಬ್ಬರು, ಆತನ ಕೈಕಾಲು ಕಟ್ಟಿ ಹಾಕಿ ಬಾಯಿಗೆ ಟೇಪ್ ಸುತ್ತಿದ್ದು, ಜನಾರ್ಧನ ಉಸಿರುಗಟ್ಟಿ ಸಾವನಪ್ಪಿದ್ದ. ಕೊನೆಗೆ ಆತ ಸಾವನಪ್ಪಿರುವುದು ತಿಳಿದು ಆರೋಪಿಗಳು ಬೆಂಗಳೂರು ಬಿಟ್ಟು ಪರಾರಿಯಾಗಿದ್ದರು. ಸತತ ಕಾರ್ಯಾಚರಣೆ ನಡೆಸಿದ ಯಲಹಂಕ ಪೊಲೀಸರು ಇದೀಗ ಆರೋಪಿಗಳ ಬಂಧಿಸಿದ್ದಾರೆ.

ಅಕ್ರಮವಾಗಿ ರಕ್ತಚಂದನ ತುಂಡುಗಳನ್ನ ಮಾರುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ ಪೊಲೀಸರು

ಬೆಂಗಳೂರು: ಅಕ್ರಮವಾಗಿ ರಕ್ತಚಂದನದ ತುಂಡುಗಳನ್ನು ಮಾರುತ್ತಿದ್ದ ಕೃಷ್ಣ(35)ಎಂಬಾತನನ್ನ ಗಿರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿಯ ವಿದ್ಯಾನಗರ ಬಸ್​ ನಿಲ್ದಾಣ ಬಳಿ ಮಾರಾಟಕ್ಕೆ ಯತ್ನಿಸುತ್ತಿದ್ದಾಗ ಬಂಧಿಸಿದ್ದು, ಬಂಧಿತನಿಂದ 124 ಕೆಜಿಯ 14 ರಕ್ತಚಂದನದ ತುಂಡನ್ನ ವಶಕ್ಕೆ ಪಡೆಯಲಾಗಿದೆ. ಈ ಕುರಿತು ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:24 am, Sat, 15 April 23

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್