AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಧ್ಯಕ್ಕೆ ಕಡಿಮೆಯಾಗೋದಿಲ್ಲ ಟೊಮೆಟೊ ಬೆಲೆ; ಇನ್ನೂ 2 ತಿಂಗಳ ಕಾಲ ಶತಕ ಬಾರಿಸಲಿದೆ

ಈಗಾಗಲೇ ಟೊಮೆಟೊ ಶತಕ ಬಾರಿಸಿದೆ. ತರಕಾರಿ ಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಇನ್ನು ಕೆಲವರು ಟೊಮೆಟೊ ಬದಲು ಹುಣಸೆ ಸೇರಿದಂತೆ ಇತರೆ ಪದಾರ್ಥವನ್ನ ಬಳಸಲು ಶುರು ಮಾಡಿದ್ದಾರೆ. ಅದರಂತೆ ಸಧ್ಯಕ್ಕೆ ಹೊಸ ಕ್ರಾಫ್ಟ್ ಬರುವವರೆಗೂ ಟೊಮೆಟೊ ಬೆಲೆ ಕಡಿಮೆ ಆಗೋದಿಲ್ಲವೆಂದು ರೈತರು ಹೇಳುತ್ತಿದ್ದಾರೆ.

ಸಧ್ಯಕ್ಕೆ ಕಡಿಮೆಯಾಗೋದಿಲ್ಲ ಟೊಮೆಟೊ ಬೆಲೆ; ಇನ್ನೂ 2 ತಿಂಗಳ ಕಾಲ ಶತಕ ಬಾರಿಸಲಿದೆ
ಟೊಮೆಟೊ ಬೆಲೆ ಏರಿಕೆ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 11, 2023 | 8:07 AM

Share

ಬೆಂಗಳೂರು: ಈಗಾಗಲೇ ಟೊಮೆಟೊ(Tomato) ಶತಕ ಬಾರಿಸಿದೆ. ತರಕಾರಿ ಕೊಳ್ಳಲು ಜನ ಹಿಂದೇಟು ಹಾಕುತ್ತಿದ್ದಾರೆ. ಇನ್ನು ಕೆಲವರು ಟೊಮೆಟೊ ಬದಲು ಹುಣಸೆ ಸೇರಿದಂತೆ ಇತರೆ ಪದಾರ್ಥವನ್ನ ಬಳಸಲು ಶುರು ಮಾಡಿದ್ದಾರೆ. ಅದರಂತೆ ಸಧ್ಯಕ್ಕೆ ಹೊಸ ಕ್ರಾಫ್ಟ್ ಬರುವವರೆಗೂ ಟೊಮೆಟೊ ಬೆಲೆ ಕಡಿಮೆ ಆಗೋದಿಲ್ಲವೆಂದು ರೈತರು ಹೇಳುತ್ತಿದ್ದಾರೆ. ಹೌದು ಹೊಸ ಬೆಳೆ ಬಂದ ಮೇಲೆ ಮಾತ್ರ ಬೆಲೆ ಕಡಿಮೆಯಾಗುವ ಸಂಭವವಿದ್ದು, ಈ ಹೊಸ ಬೆಳೆ ಬರಬೇಕು ಅಂದ್ರೆ, ಒಂದರಿಂದ ಎರಡು ತಿಂಗಳಾದ್ರು ಬೇಕಾಗುತ್ತದೆ. ಹಾಗಾಗಿ ಅಲ್ಲಿಯವರೆಗೂ ಇದೇ ಬೆಲೆ ಮುಂದುವರಿಯುವ ಸಾಧ್ಯತೆಯಿದೆ.

ಟೊಮೆಟೊ ಬೆಲೆ ಏರಿಕೆಗೆ ಕಾರಣಗಳೇನು? ಇಲ್ಲಿವೆ

ಟೊಮೆಟೊ  ಬೆಲೆ ಏರಿಕೆಗೆ ಪ್ರಮುಖ ಕಾರಣವೆಂದರೆ ಮಳೆ ಕೊರತೆ, ಟೊಮೆಟೊ ಬೆಳೆಯ ವ್ಯವಸಾಯದ ವೇಳೆ ಮಳೆಯ ಕೊರತೆ ಅಧಿಕವಾಗಿತ್ತು. ಇದೇ ವೇಳೆ ಟೊಮೆಟೊದಲ್ಲಿ ಎಲೆರೋಗವು ಕಾಣಿಸಿಕೊಂಡಿತ್ತು. ಈ ಎರಡು ಪ್ರಮುಖ ಕಾರಣಗಳಿಂದ ಈ ಬಾರಿ ಕಡಿಮೆ ಬೆಳೆ ಬೆಳೆದಿದ್ದಾರೆ. ಅಲ್ಲದೇ ಉತ್ತರ ಪ್ರದೇಶ, ಚತ್ತೀಸ್ ಘಡ್, ಡೆಲ್ಲಿಯಲ್ಲಿಯೂ ಟೊಮೆಟೊ  ಬೆಳೆ ಈ ವರ್ಷ ಕಡಿಮೆಯಾಗಿದೆ. ಹೀಗಾಗಿ ಈ ಭಾಗಗಳಿಂದ ನಮ್ಮ‌ ರಾಜ್ಯಕ್ಕೆ ಹೆಚ್ಚಿನ ಬೇಡಿಕೆ ಬಂದಿದ್ದು, ಕರ್ನಾಟಕದಿಂದ ಈ ಭಾಗಗಳಿಗೆ ಟೊಮೆಟೊ  ರಪ್ತು ಮಾಡಲಾಗುತ್ತಿದೆ. ಈ ವರ್ಷ ಟೊಮೆಟೊಗೆ  ಹೊರರಾಜ್ಯಗಳಿಂದಲೂ ಅತ್ಯಧಿಕ ಬೇಡಿಕೆ ಇದ್ದು, ಬೇಡಿಕೆಗೆ ತಕ್ಕಂತೆ ಟೊಮೆಟೊ  ಸಿಗದ ಕಾರಣ ಹೆಚ್ಚಿನ ಬೆಲೆ ನಿಗಧಿ ಪಡಿಸಿ, ವ್ಯಾಪಾರ‌ ಮಾಡಲಾಗುತ್ತಿದೆ. ಅಲ್ಲದೇ ಪ್ರತಿಭಾರಿ ನಮ್ನ ರಾಜ್ಯಕ್ಕೆ ನಾಸಿಕ್ ಇಂದ ಟೊಮೆಟೊ  ಬರುತ್ತಿತ್ತು. ಆದ್ರೆ, ಈ ಬಾರಿ ನಾಸಿಕ್‌ನಲ್ಲಿಯು ಬೆಳೆ ಬಂದಿಲ್ಲ. ಹೀಗಾಗಿ ನಾಸಿಕ್ ,ತಮಿಳುನಾಡು, ಚನೈಗೆ ಕರ್ನಾಟಕದಿಂದ ರಫ್ತು ಮಾಡಲಾಗುತ್ತಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಇದನ್ನೂ ಓದಿ:Tomato Price : ಈ ರಾಜ್ಯದಲ್ಲಿ 250ರೂ.ಗೆ ತಲುಪಿದ ಒಂದು ಕೆಜಿ ಟೊಮೆಟೊ ಬೆಲೆ

ಟೊಮೆಟೊ ಬೆಲೆ ಏರಿಕೆಗೆ ಕಾರಣವಾಯ್ತಾ? ಅಷಾಡ ಮಾಸ

ಸಾಮಾನ್ಯವಾಗಿ ಆಷಾಡ ಮಾಸದಲ್ಲಿ ಪ್ರತಿವರ್ಷ ವ್ಯಾಪಾರ ಕಡಿಮೆಯಾಗುತ್ತೆ. ವರ್ಷ ಅಧಿಕ ಮಾಸ ಬಂದಿರುವ ಹಿನ್ನೆಲೆ ಒಂದು ತಿಂಗಳುಗಳ ಕಾಲ ಯಾವುದೇ ಮದುವೆ, ಕಾರ್ಯಕ್ರಮಗಳು ನಡೆಯೋದಿಲ್ಲ. ಇದನ್ನ ಗಮನದಲ್ಲಿಟ್ಟುಕೊಂಡು ಕಡಿಮೆ ಬೆಳೆ ಬೆಳೆದಿದ್ದಾರಾ ರೈತರು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ, ಪ್ರತಿವರ್ಷ ಜೂನ್ – ಜೂಲೈ ತಿಂಗಳಲ್ಲಿ ಅಷಾಡ ಮಾಸದಲ್ಲಿ ಟೊಮೆಟೊ ಹೆಚ್ಚು ಬೆಳೆದು ನಷ್ಟ ಮಾಡಿಕೊಂಡಿದ್ದೆ ಹೆಚ್ಚು.‌ ಟೋಮಾಟೊ ವ್ಯಾಪಾರವಾಗದೇ ರಸ್ತೆಗೆ ಎಸೆದು ಹೋದ ಎಷ್ಟೋ ಘಟನೆಗಳು ಈ ಹಿಂದೆ ನಡೆದಿವೆ. ಹೀಗಾಗಿ ಈ ವರ್ಷ ಈ ರೀತಿಯಾಗಿ ಆಗಬಾರದು ಎನ್ನುವ ಕಾರಣಕ್ಕೆ ರೈತರು ಹೆಚ್ಚಿನದ್ದಾಗಿ ಬೆಳೆಯದೇ, ಬೇಡಿಕೆಗೆ ತಕ್ಕಷ್ಟು ಟೊಮೆಟೊ ಸಿಗದ ಹಿನ್ನೆಲೆ ಬೆಲೆ ಏರಿಕೆಯಾಗಿರುವ ಸಾಧ್ಯತೆಯಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು