AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್! ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ

ರಾಜ್ಯ ಗುತ್ತಿಗೆದಾರರ ಸಂಘವೂ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದ್ದು, ಈ ಕುರಿತು ‘ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಕಾಮಗಾರಿ ಪೂರ್ಣ ಮಾಡಲು ಕಷ್ಟವಾಗುತ್ತೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಮಗಾರಿ ನಿಲ್ಲಿಸುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್! ಕಾಮಗಾರಿ ಸ್ಥಗಿತಕ್ಕೆ ರಾಜ್ಯ ಗುತ್ತಿಗೆದಾರರ ಸಂಘ ಚಿಂತನೆ
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ
Anil Kalkere
| Edited By: |

Updated on:Aug 20, 2023 | 9:31 PM

Share

ಬೆಂಗಳೂರು, ಆ.20: ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಗುತ್ತಿಗೆದಾರರ ಸಂಘ (Karnataka Contractors Association) ಸಮರ ಸಾರಲು ಮುಂದಾಗಿದೆ. ಹೌದು, ಕಾಮಗಾರಿ ಬಿಲ್ ಬಾಕಿ ಇರಿಸಿದ ಕಾಂಗ್ರೆಸ್ ಸರ್ಕಾರಕ್ಕೆ ಶಾಕ್ ನೀಡಲು ಕಾಮಗಾರಿ ಸ್ಥಗಿತಕ್ಕೆ ಚಿಂತನೆ ನಡೆಸಿದೆ. ಈಗಾಗಲೇ ಬಿಬಿಎಂಪಿ ಗುತ್ತಿಗೆದಾರರ (Contractors)ಸಂಘ ಸಚಿವರ ವಿರುದ್ಧ ಕಮಿಷನ್​​ ಆರೋಪ ಮಾಡಿದೆ. ಇದರ ಮಧ್ಯೆ ಇದೀಗ ರಾಜ್ಯ ಗುತ್ತಿಗೆದಾರರ ಸಂಘವೂ ಸರ್ಕಾರಕ್ಕೆ ಶಾಕ್ ಕೊಡಲು ಮುಂದಾಗಿದ್ದು, ಈ ಕುರಿತು ‘ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಕಾಮಗಾರಿ ಪೂರ್ಣ ಮಾಡಲು ಕಷ್ಟವಾಗುತ್ತೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಕಾಮಗಾರಿ ನಿಲ್ಲಿಸುವ ಬಗ್ಗೆ ಪರೋಕ್ಷವಾಗಿ ಸುಳಿವು ನೀಡಿದ್ದಾರೆ.

ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಕೆಲಸ ನಿಲ್ಲಿಸುವುದು ಅನಿವಾರ್ಯ

ಹೌದು, ಸರ್ಕಾರವು 7ಕ್ಕೂ ಹೆಚ್ಚು ಇಲಾಖೆಗಳಿಂದ 25 ಸಾವಿರ ಕೋಟಿಗೂ ಹೆಚ್ಚು ಬಿಲ್ ಬಾಕಿ ಉಳಿಸಿಕೊಂಡಿದ್ದು, ಬಾಕಿ ಹಣ ಬಿಡುಗಡೆ ಮಾಡದಿದ್ದರೆ ಕೆಲಸ ನಿಲ್ಲಿಸುವುದು ಅನಿವಾರ್ಯವಾಗಲಿದೆ. ಈ ಹಿನ್ನಲೆ ಆಗಸ್ಟ್​ 31ರೊಳಗೆ ಸರ್ಕಾರ ಬಾಕಿ ಬಿಲ್ ಬಿಡುಗಡೆ ಮಾಡದಿದ್ದರೆ ಸಭೆ ನಡೆಸಲಿದ್ದು, 61 ವಿವಿಧ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಕೆಂಪಣ್ಣ ಹೇಳಿದ್ದಾರೆ. ಇನ್ನು ಗುತ್ತಿಗೆದಾರರ ಸಂಘ ಈಗಾಗಲೇ ಬಾಕಿ ಬಿಲ್ ಕ್ಲಿಯರ್ ಮಾಡಲು ಸಂಬಂಧಪಟ್ಟ ಇಲಾಖೆ ಸಚಿವರಿಗೂ ಸೇರಿ ಸಿಎಂ, ಡಿಸಿಎಂಗೆ ಮನವಿ ಸಲ್ಲಿಸಿದರೂ, ಪ್ರಯೋಜನ ಆಗಿಲ್ಲ.

ಇದನ್ನೂ ಓದಿ:ನಾವೂ ಯಾವುದೇ ರೀತಿ ಕಮೀಷನ್ ಆರೋಪ ಮಾಡಿಲ್ಲ: ಸ್ಪಷ್ಟಪಡಿಸಿದ ಬಿಬಿಎಂಪಿ ಗುತ್ತಿಗೆದಾರರ ಸಂಘ

ಸರ್ಕಾರ ಕೊಡುತ್ತಿರುವ ಕಾರಣಗಳೇನು?

ಕಳೆದ 3 ವರ್ಷಗಳಿಂದ ಬಾಕಿ ಬಿಲ್ ಬಿಡುಗಡೆಗೆ ಗುತ್ತಿಗೆದಾರರು ಸರ್ಕಸ್ ಮಾಡುತ್ತಿದ್ದು, ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿದೆ. ಹಾಗಾದರೆ, ಸರ್ಕಾರ ಕೊಡುತ್ತಿರುವ ಕಾರಣಗಳೇನು? ಇಲ್ಲಿದೆ ನೋಡಿ.

1) ಗ್ಯಾರೆಂಟಿ ಯೋಜನೆಗಳಿಗೆ ಎಲ್ಲ ಹಣ ಖರ್ಚು.

2) ಸರ್ಕಾರ ಬಂದು 3 ತಿಂಗಳಾಗಿದೆ, ಸ್ಟೇಬಲ್ ಆಗಲು ಟೈಂ ಕೊಡಿ ಅಂತಿದ್ಯಂತೆ.

3) ಬಿಜೆಪಿ ಸರ್ಕಾರದ ಅವಧಿಯಲ್ಲೇ ಯಾಕೆ ಬಿಡುಗಡೆ ಮಾಡಿಸಿಕೊಂಡಿಲ್ಲ ಎಂದು ಗುತ್ತಿಗೆದಾರರಿಗೆ ಪ್ರಶ್ನೆ.

ಈ ರೀತಿಯಾಗಿ ಕಾರಣಗಳನ್ನು ಸರ್ಕಾರ ಕೊಡುತ್ತಿದೆ. ಇನ್ನು ಈ ಹಿಂದೆ ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡಿ, ಅಂದು ಕಾಂಗ್ರೆಸ್ ಪಕ್ಷದ ಜೊತೆ ಕೈ ಜೋಡಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರವೇ ಗುತ್ತಿಗೆದಾರರ ಬಾಕಿ ಬಿಲ್​ ಪಾವತಿಸದೇ ಪೆಂಡಿಂಗ್ ಇಟ್ಟಿದೆ.

​ಮತ್ತಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:30 pm, Sun, 20 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?