AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಸಮಿತಿ ರಚನೆ ಮಾಡಿದ ರಾಜ್ಯ ಸರ್ಕಾರ

ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಆಂತರಿಕ ದೂರು ಸಮಿತಿಯೊಂದನ್ನು ರಚನೆ ಮಾಡಿದೆ. ಹಾಗೂ ಇಂತಹ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ರಚಿಸಿದ್ದಾರೆ.

ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಸಮಿತಿ ರಚನೆ ಮಾಡಿದ ರಾಜ್ಯ ಸರ್ಕಾರ
ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಸಮಿತಿ ರಚನೆ ಮಾಡಿದ ರಾಜ್ಯ ಸರ್ಕಾರ
ಪ್ರಸನ್ನ ಗಾಂವ್ಕರ್​
| Edited By: ಕಿರಣ್ ಹನುಮಂತ್​ ಮಾದಾರ್|

Updated on:Oct 08, 2024 | 9:02 PM

Share

ಬೆಂಗಳೂರು, ಅ.08: ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಯೊಂದನ್ನು ರಾಜ್ಯ ಸರ್ಕಾರ ರಚನೆ ಮಾಡಿದೆ. ಮಹಿಳಾ‌ ಅಧಿಕಾರಿ, ಶಿಕ್ಷಕಿಯರು, ಸಿಬ್ಬಂದಿಗೆ ಕಿರುಕುಳ, ಮಾನಸಿಕ ಹಿಂಸೆ, ದುರುದ್ದೇಶಪೂರ್ವಕವಾಗಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಲೈಂಗಿಕ ದೌರ್ಜನ್ಯ ಮುಂತಾದ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ರಚನೆ ಮಾಡಿದ್ದಾರೆ.

ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಹೀಗಾಗಿ ಈ ಆಂತರಿಕ ದೂರು ಸಮಿತಿಯನ್ನು ರಚನೆ ಮಾಡಲಾಗಿದೆ. ಅವರು ಕೆಲಸ ಮಾಡುವ ಸ್ಥಳಗಳಲ್ಲಿ ಯಾವುದೇ ರೀತಿಯ ಅಭದ್ರತೆ ಅನಿಸಿದರೆ, ಕೂಡಲೇ ಈ ಸಮಿತಿಗೆ ದೂರು ನೀಡಬಹುದು. ಇನ್ನು ಕಾಲಕಾಲಕ್ಕೆ ಶಿಕ್ಷಣ ಇಲಾಖೆ ಅಧೀನದ ಮಹಿಳಾ ಅಧಿಕಾರಿ, ಸಿಬ್ಬಂದಿ, ಶಿಕ್ಷಕಿಯರ ದೂರನ್ನು ಈ ಸಮಿತಿ ಪರಿಶೀಲನೆ ನಡೆಸಲಿದೆ.

ಇದನ್ನೂ ಓದಿ:ಸ್ಯಾಂಡಲ್​ವುಡ್​ನಲ್ಲಿ ದೌರ್ಜನ್ಯ ತಡೆಗೆ ಸಮಿತಿ, ಫಿಲಂ ಚೇಂಬರ್​ನಲ್ಲಿ ಚರ್ಚಿಸಲು ನಿರ್ಧಾರ

ಇನ್ನು ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಹಾಗೂ ಇತರೆ ದೌರ್ಜನ್ಯಗಳನ್ನು ಗುರುತಿಸಿ ಅವುಗಳ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲು ಸಮಿತಿಯೊಂದನ್ನು ರಚಿಸಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ನಟ ಚೇತನ್ ಅಹಿಂಸಾ ಹಾಗೂ ಇತರೆ ಕೆಲವು ನಟ-ನಟಿಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಬಗ್ಗೆ ಮಾತುಕತೆ ಆಡಿದ್ದು, ಸಮಿತಿಯೊಂದರ ರಚನೆಗೆ ಒತ್ತಾಯಿಸಿದ್ದರು. ಇದೀಗ ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 pm, Tue, 8 October 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್