AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2011ನೇ ಸಾಲಿನ ವಿವಾದಿತ ನೇಮಕಾತಿ ಸಿಂಧುಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ

ಇಂದು( ಫೆಬ್ರವರಿ 18) ವಿಧಾನಸಭೆಯಲ್ಲಿ ಸರ್ಕಾರ ವಿಧೇಯಕ ಮಂಡನೆ ಮಾಡಲಿದೆ. 2022ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ 2011 ನೇ ಸಾಲಿನ ಗೆಜೆಟೆಡ್ ಪ್ರೋಬೇಷನರಿ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ ವಿಧೇಯಕ ಮಂಡನೆ, ವಿಧೇಯಕಕ್ಕೆ ಅನುಮೋದನೆ ಪಡೆಯುವ ಮೂಲಕ 362 ಅಧಿಕಾರಿಗಳ ನೇಮಕಾತಿ ಸಕ್ರಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ.

2011ನೇ ಸಾಲಿನ ವಿವಾದಿತ ನೇಮಕಾತಿ ಸಿಂಧುಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರ
ವಿಧಾನಸೌಧ
TV9 Web
| Edited By: |

Updated on:Feb 18, 2022 | 1:08 PM

Share

ಬೆಂಗಳೂರು: 2011ನೇ ಸಾಲಿನಲ್ಲಿ ನೇಮಕವಾದ ಗೆಜೆಟೆಡ್ ಪ್ರೋಬೆಷನರಿ ಅಧಿಕಾರಿಗಳ ನೇಮಕಾತಿ ಸಿಂಧುಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ. ವಿಶೇಷ ಕಾಯಿದೆ ಮೂಲಕ ನೇಮಕಾತಿಯನ್ನು ಸಕ್ರಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಇಂದು( ಫೆಬ್ರವರಿ 18) ವಿಧಾನಸಭೆಯಲ್ಲಿ ಸರ್ಕಾರ ವಿಧೇಯಕ ಮಂಡನೆ ಮಾಡಲಿದೆ. 2022ನೇ ಸಾಲಿನ ಕರ್ನಾಟಕ ಸಿವಿಲ್ ಸೇವೆಗಳ 2011 ನೇ ಸಾಲಿನ ಗೆಜೆಟೆಡ್ ಪ್ರೋಬೇಷನರಿ ಆಯ್ಕೆ ಮತ್ತು ನೇಮಕಾತಿ ಸಿಂಧುಗೊಳಿಸುವಿಕೆ ವಿಧೇಯಕ ಮಂಡನೆ, ವಿಧೇಯಕಕ್ಕೆ ಅನುಮೋದನೆ ಪಡೆಯುವ ಮೂಲಕ 362 ಅಧಿಕಾರಿಗಳ ನೇಮಕಾತಿ ಸಕ್ರಮ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ. ಈ ಕುರಿತು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.

ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಕಾಗೇರಿ ಕಸರತ್ತು

ವಿಧಾನಸಭೆಯಲ್ಲಿ ಕಾಂಗ್ರೆಸ್​ನಿಂದ​ ಅಹೋರಾತ್ರಿ ಧರಣಿ ಹಿನ್ನೆಲೆ ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಕಾಗೇರಿ ಕಸರತ್ತು ಮಾಡುವಂತಾಗಿದೆ. ಧರಣಿ ಬಿಟ್ಟು ಕಲಾಪದಲ್ಲಿ ಭಾಗಿಯಾಗುವಂತೆ ಸ್ಪೀಕರ್​ ಮನವಿ ಮಾಡಿದ್ದಾರೆ. ಸಿಎಂ, ಮಾಜಿ ಸಿಎಂ ಮಾತಿಗೂ ಕಾಂಗ್ರೆಸ್ ನಾಯಕರು ಜಗ್ಗದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕರ ಮನವೊಲಿಕೆಗೆ ಸ್ಪೀಕರ್ ಮುಂದಾಗಿದ್ದಾರೆ. ಸ್ಪೀಕರ್ ನೇತೃತ್ವದ ಸಭೆಯಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​, ಸಚಿವ ಈಶ್ವರಪ್ಪ ಅವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.

ವಿಧಾನಸಭೆ: ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡ ಸ್ಪೀಕರ್

ಸದನದಲ್ಲಿ ವಿಪಕ್ಷ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದ್ದು, ಸ್ಪೀಕರ್ ಪ್ರಶ್ನೋತ್ತರ ಕಲಾಪ ಕೈಗೆತ್ತಿಕೊಂಡಿದ್ದಾರೆ. ಸದನದಲ್ಲಿ ಗದ್ದಲ, ಕೋಲಾಹಲ ಮುಂದುವರಿದಿದ್ದು, ಗದ್ದಲದ ನಡುವೆಯೇ ಪ್ರಶ್ನೋತ್ತರ ‌ಕಲಾಪ ಶುರುವಾಗಿದೆ.

ಕಲಾಪ ನಡೆಯಲು ಬಿಡಲ್ಲ ಎನ್ನುವುದು ಸರಿಯಲ್ಲ: ಸಚಿವ ಜೆ.ಸಿ.ಮಾಧುಸ್ವಾಮಿ

ಕಲಾಪ ನಡೆಯಲು ಬಿಡಲ್ಲ ಎನ್ನುವುದು ಸರಿಯಲ್ಲ. ನಾವು ಹೇಳಿದ್ದೇ ನಡೆಯಬೇಕು ಎನ್ನುವುದು ಸರಿಯಲ್ಲ. ವಿಧಾನಸಭೆ ಪ್ರಜಾಪ್ರಭುತ್ವದ ದೇವಸ್ಥಾನವಾಗಿದೆ. ಸದನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಬೇಕು. ಅದನ್ನು ಬಿಟ್ಟು ಸಚಿವರ ರಾಜೀನಾಮೆಗೆ ಆಗ್ರಹಿಸಿ ಧರಣಿ, ವಿಧಾನಸಭೆಯಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಪ್ರತಿಭಟನೆ ಮಾಡುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು. ಆದರೆ ಸದನದ ಹೊರಗೆ ಎಲ್ಲಿಬೇಕಾದರೂ ಪ್ರತಿಭಟನೆ ಮಾಡಿ. ಒಂದು ವಿಚಾರಕ್ಕಾಗಿ ಕಲಾಪ ಹಾಳುಮಾಡುವುದು ಸರಿಯಲ್ಲ. ಇದನ್ನು ನಿಯಂತ್ರಿಸಲು ಕ್ರಮಕೈಗೊಳ್ಳಿ ಎಂದು ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವಿಧಾನಸಭೆಯಲ್ಲಿ ಸಚಿವ ಜೆ.ಸಿ.ಮಾಧುಸ್ವಾಮಿ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: ವಿಧಾನಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದ ಸಿಎಂ ಬಸವರಾಜ ಬೊಮ್ಮಾಯಿ: ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ

ಮುಂದಿನ ವಿಧಾನ ಸಭೆ ಚುನಾವಣೆಯನ್ನು ಬಿಜೆಪಿ ಮುಖ್ಯಮಂತ್ರಿ ಬೊಮ್ಮಾಯಿಯವರ ನೇತೃತ್ವದಲ್ಲಿ ಎದುರಿಸಲಿದೆ: ರಮೇಶ್ ಜಾರಕಿಹೊಳಿ

Published On - 11:54 am, Fri, 18 February 22

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!