AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು

ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ(Teachers appointment) ಹೊರಗುತ್ತಿಗೆಯನ್ನು ಬಿಬಿಎಂಪಿ ಸೆಕ್ಯೂರಿಟಿ ಸಂಸ್ಥೆಗೆ ಟೆಂಡರ್ ನೀಡಿತ್ತು. ಈ ಕುರಿತು ಎಲ್ಲೆಡೆ ಭಾರೀ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸೂಚನೆಯಂತೆ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದು ಮಾಡಿ ಆದೇಶಿಸಿದೆ.

ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು
ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆ ರದ್ದು
ಶಾಂತಮೂರ್ತಿ
ಶಾಂತಮೂರ್ತಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: May 28, 2024 | 9:49 PM

Share

ಬೆಂಗಳೂರು, ಮೇ.28: ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಶಿಕ್ಷಕರ ನೇಮಕಾತಿ(Teachers appointment) ಹೊರಗುತ್ತಿಗೆಯನ್ನು ಬಿಬಿಎಂಪಿ ಸೆಕ್ಯೂರಿಟಿ ಸಂಸ್ಥೆಗೆ ಟೆಂಡರ್ ನೀಡಿತ್ತು. ಇದರಿಂದ ಇದರಿಂದ ರಾಜ್ಯ ಸರ್ಕಾರ ಭಾರೀ ಮುಜುಗರಕ್ಕೆ ಒಳಗಾಗಿತ್ತು. ಮಾಜಿ ಶಿಕ್ಷಣ ಸಚಿವರು ಸೇರಿದಂತೆ ಹಲವರು ಟೀಕೆ ಮಾಡಿದ್ದರು.  ಇದೀಗ ಭಾರೀ ವಿರೋಧದ ಬೆನ್ನಲ್ಲೇ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ಬಿಬಿಎಂಪಿ ಶಿಕ್ಷಣ ಇಲಾಖೆ ರದ್ದು ಮಾಡಿದೆ.

SDMC ಮೂಲಕ ಶಿಕ್ಷಕರ ನೇಮಕಾತಿಗೆ ತಯಾರಿ

ಟಿವಿ9 ವರದಿ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಸೂಚನೆಯಂತೆ ಸೆಕ್ಯೂರಿಟಿ ಕಂಪನಿಗೆ ನೀಡಿದ್ದ ಶಿಕ್ಷಕರ ನೇಮಕಾತಿ ಗುತ್ತಿಗೆಯನ್ನು ರದ್ದು ಮಾಡಿ ಆದೇಶಿಸಿದೆ. ಜೊತೆಗೆ ಏಜೆನ್ಸಿ ಬದಲು SDMC ಮೂಲಕ ಶಿಕ್ಷಕರ ನೇಮಕಾತಿಗೆ ತಯಾರಿ ನಡೆಸಲಾಗಿದೆ.

ಇದನ್ನೂ ಓದಿ:ಸೆಕ್ಯೂರಿಟಿ ಕಂಪನಿಗೆ ಶಿಕ್ಷಕರ ನೇಮಕಾತಿ ಟೆಂಡರ್! ಸುರೇಶ್​ ಕುಮಾರ್​ ಆಕ್ರೋಶ

ಘಟನೆ ವಿವರ

ಪಾಲಿಕೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ 700 ಶಿಕ್ಷಕರನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿತ್ತು. ಅದರಂತೆ ಶಿಕ್ಷಕರ ನೇಮಕಾತಿ ಹೊರಗುತ್ತಿಗೆಯನ್ನು ಪಾಲಿಕೆ ಸೆಕ್ಯೂರಿಟಿ ಸಂಸ್ಥೆಗೆ ನೀಡಿತ್ತು. ಇದರಿಂದ ರಾಜ್ಯ ಸರ್ಕಾರ ನಗೆಪಾಟಲಿಗೆ ಈಡಾಗಿದ್ದಲ್ಲದೆ, ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಅಲ್ಲದೆ ಪೋಷಕರ ಆಕ್ರೋಶಕ್ಕೂ ಕಾರಣವಾಗಿತ್ತು. ಜೊತೆಗೆ ಮಾಜಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಕೂಡ ಆಕ್ರೋಶ ವ್ಯಕ್ತಪಡಿಸಿ, ‘ಶಿಕ್ಷಕರ ಮತ್ತು ಸೇವಾ ಪೂರೈಕೆ ಮಾಡಲು ಸೆಕ್ಯೂರಿಟಿ ಏಜೆನ್ಸಿಗೆ ಗುತ್ತಿಗೆ ನೀಡಲಾಗಿದೆ. ನಮ್ಮ ವ್ಯವಸ್ಥೆ ಎಂತಹ ಸ್ಥಿತಿ ತಲುಪಿತು. ಬಿಬಿಎಂಪಿ ಕೈಗೊಂಡಿರುವ ನಿರ್ಧಾರ ವಿಚಿತ್ರ ವೈಖರಿ ಎಂದು ಶಿಕ್ಷಕರ ಸಾಮಾಜಿಕ ಜಾಲತಾಣದ ಮೂಲಕ ಮಾಜಿ ಸಚಿವ ಸುರೇಶ್​ ಕುಮಾರ್​ ವಾಗ್ದಾಳಿ ನಡೆಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಶಾಂತಮೂರ್ತಿ
ಶಾಂತಮೂರ್ತಿ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!