AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಕಳ್ಳತನ, ದೃಶ್ಯ ಸಿಸಿಟಿವಿಯಲ್ಲಿ ಸೆರೆ

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು​​​ ಭಾಗಿಯಾಗಿದ್ದ ಬೆಂಗಳೂರಿನ ರಾಡಿಸನ್ ಬ್ಲೂ ಎಂಬ ಖಾಸಗಿ ಹೋಟೆಲ್​ನ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ಕಳ್ಳತನ ನಡೆದಿದೆ. 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಪರ್ಸ್ ಕದ್ದು ಖದೀಮ ಎಸ್ಕೇಪ್ ಆಗಿದ್ದಾನೆ. ಕಳ್ಳನ ಕೈಚಳಕ ಹೋಟೆಲ್​​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

TV9 Web
| Edited By: ಆಯೇಷಾ ಬಾನು|

Updated on:Nov 09, 2023 | 11:16 AM

Share

ಬೆಂಗಳೂರು, ನ.09: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು​​​ ಭಾಗಿಯಾಗಿದ್ದ ಸಮಾರಂಭದಲ್ಲೇ ಕಳ್ಳತನ (Theft) ನಡೆದಿದೆ. ಬೆಂಗಳೂರಿನ ರಾಡಿಸನ್ ಬ್ಲೂ ಎಂಬ ಖಾಸಗಿ ಹೋಟೆಲ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು​​​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾರ್ತಕ್ರಮದಲ್ಲಿ ಗಣ್ಯತಿ ಗಣ್ಯರು ಕೂಡ ಭಾಗಿಯಾಗಿದ್ದರು. ಇಂತಹ ದೊಡ್ಡ ಕಾರ್ಯಕ್ರಮದಲ್ಲೇ ಕಳ್ಳ ತನ್ನ ಕೈಚಳಕ ತೋರಿಸಿದ್ದಾನೆ. 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಪರ್ಸ್ ಕದ್ದು ಎಸ್ಕೇಪ್ ಆಗಿದ್ದಾನೆ.

ಖಾಸಗಿ ಹೋಟೆಲ್​ನಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಅಜಿತಾ ಎನ್ನುವವರು ಕೂಡ ಬಂದಿದ್ದರು. ಅಜಿತಾ ಅವರು ಫೋಟೋ ತೆಗೆಸಿಕೊಳ್ಳಲು ಹೋದಾಗ ಕಳ್ಳ ಪರ್ಸ್ ಕದ್ದು ಪರಾರಿಯಾಗಿದ್ದಾನೆ. ಪರ್ಸ್​ನಲ್ಲಿ 10 ಸಾವಿರ ಹಣ, ವಜ್ರದ ಕಿವಿಯೋಲೆಗಳಿದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಕಳ್ಳನ ಕೈಚಳಕ ಹೋಟೆಲ್​​ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕಳ್ಳನ ಚಲನ ವಲನದ ಎಲ್ಲಾ ಸಿಸಿಟಿವಿ ವಿಡಿಯೋ ನೀಡಿ ಟ್ವೀಟರ್​ನಲ್ಲಿ ಪೊಲೀಸರಿಗೆ ದೂರು ನೀಡಲಾಗಿದೆ.

ಇದನ್ನೂ ಓದಿ: ಜಾಮೀನು ಸಿಕ್ಕರೂ ಮುರುಘಾಶ್ರೀಗೆ ಶಿಕ್ಷೆ ಆಗೇ ಆಗುತ್ತೆ: ಒಡನಾಡಿ ಸಂಸ್ಥೆಯ ಮುಖ್ಯಸ್ಥ ಸ್ಟ್ಯಾನ್ಲಿ

ಅಡಿಕೆ ತೋಟಗಳಲ್ಲಿ ಅಡಿಕೆ‌ ಕಳವು ಮಾಡ್ತಿದ್ದ ಆರೋಪಿಗಳ ಬಂಧನ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಬೇಗೂರು ಗ್ರಾಮದಲ್ಲಿ ಫಸಲಿಗೆ ಬಂದಿದ್ದ 25 ಕ್ವಿಂಟಾಲ್ ಹಸಿ ಅಡಕೆ ಕದ್ದಿದ್ದ ಮಂಡ್ಯ ಮೂಲದ ರವಿ, ಅಭಿಜಿತ್, ಅಭಿಷೇಕ್, ಬಿ.ಕೆ.ಮಂಜುನಾಥ್, ಮನು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಯೋಗೇಶ್ ಎಂಬುವರು ನೀಡಿದ ದೂರಿನ್ವಯ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 1 ಟಾಟಾ ಏಸ್, 6,000 ರೂ. ನಗದು ಜಪ್ತಿ ಮಾಡಲಾಗಿದೆ. ಖದೀಮರು ಸುಮಾರು ಒಂದೂವರೆ ಲಕ್ಷದ ಅಡಿಕೆಯನ್ನ ಕದ್ದಿದ್ದರು ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಕುಣಿಗಲ್ ಹಾಗೂ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:06 am, Thu, 9 November 23

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ