AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮುದಾಯದ 17 ಶಾಸಕರು ಇದ್ದಾರೆ; ಪಂಚಮಸಾಲಿಯವರಿಗೇ ಸಿಎಂ ಸ್ಥಾನ ಕೊಡಬೇಕು: ಬಸವಜಯ ಮೃತ್ಯುಂಜಯಶ್ರೀ

ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಮುರುಗೇಶ್ ನಿರಾಣಿ ಸಿಎಂ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಜುಲೈ 26ರ ನಂತರ ನಾನು ದೆಹಲಿಗೆ ಹೋಗುತ್ತೇನೆ ಎಂದು ಬೆಂಗಳೂರಿನಲ್ಲಿ ಬಸವಜಯ ಮೃತ್ಯುಂಜಯಶ್ರೀ ಹೇಳಿಕೆ ನೀಡಿದ್ದಾರೆ.

ಪಂಚಮಸಾಲಿ ಸಮುದಾಯದ 17 ಶಾಸಕರು ಇದ್ದಾರೆ; ಪಂಚಮಸಾಲಿಯವರಿಗೇ ಸಿಎಂ ಸ್ಥಾನ ಕೊಡಬೇಕು:  ಬಸವಜಯ ಮೃತ್ಯುಂಜಯಶ್ರೀ
ಬಸವಜಯ ಮೃತ್ಯುಂಜಯಶ್ರೀ ಸ್ವಾಮೀಜಿ
TV9 Web
| Edited By: |

Updated on:Jul 24, 2021 | 2:15 PM

Share

ಬೆಂಗಳೂರು: ಪಂಚಮಸಾಲಿ ಸಮುದಾಯದವರಿಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕು. ಪಂಚಮಸಾಲಿ ಸಮುದಾಯದ 17 ಶಾಸಕರು ಇದ್ದಾರೆ. ಅದರಲ್ಲಿ ಮೂವರು ಮುಖ್ಯಮಂತ್ರಿ ರೇಸ್‌ನಲ್ಲಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್ ಮುರುಗೇಶ್ ನಿರಾಣಿ ಸಿಎಂ ಸ್ಥಾನದ ಸ್ಪರ್ಧೆಯಲ್ಲಿದ್ದಾರೆ. ಜುಲೈ 26ರ ನಂತರ ನಾನು ದೆಹಲಿಗೆ ಹೋಗುತ್ತೇನೆ. ವರಿಷ್ಠರು ಕೇಳಿದರೆ ನನ್ನ ಅಭಿಪ್ರಾಯವನ್ನು ತಿಳಿಸುತ್ತೇನೆ ಎಂದು ಬೆಂಗಳೂರಿನಲ್ಲಿ ಬಸವಜಯ ಮೃತ್ಯುಂಜಯಶ್ರೀ ಹೇಳಿಕೆ ನೀಡಿದ್ದಾರೆ.

ಪಕ್ಷದ ಆಂತರಿಕ ವಿಚಾರವನ್ನು ನಾವು ಪ್ರಶ್ನೆ ಮಾಡಲ್ಲ. ನರೇಂದ್ರ ಮೋದಿ ಯಾರನ್ನು ಸಿಎಂ ಮಾಡಿದರೂ ಸ್ವಾಗತಿಸುತ್ತೇವೆ. ನಾವು ಕೇವಲ ಸಲಹೆಯನ್ನು ಮಾತ್ರ ಕೊಡುತ್ತೇವೆ ಅಷ್ಟೇ. ನಾ‍ವು ಯಾರಿಗೂ ಬ್ಲ್ಯಾಕ್‌ಮೇಲ್ ಮಾಡಲು ಹೋಗಲ್ಲ. ಬೇರೆ ಸಮುದಾಯದವರಿಗೆ ಕೊಟ್ರೂ ವಿರೋಧಿಸಲ್ಲ ಎಂದು ಬಸವಜಯ ಮೃತ್ಯುಂಜಯಶ್ರೀ ತಿಳಿಸಿದ್ದಾರೆ.

ಆಗಸ್ಟ್ 30ರಿಂದ ಸೆಪ್ಟೆಂಬರ್ 15ರವರೆಗೆ ಹೋರಾಟ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಪ್ರತಿಜ್ಞಾ ಪಂಚಾಯಿತಿ ಘೋಷಣೆಯಡಿ, ಆಗಸ್ಟ್ 30ರಿಂದ ಸೆಪ್ಟೆಂಬರ್ 15ರವರೆಗೆ ತಾಲೂಕು ಮಟ್ಟದಲ್ಲಿ ಹೋರಾಟ ಮಾಡಲಾಗುವುದು ಎಂದು ಬೆಂಗಳೂರಿನಲ್ಲಿ ಬಸವಜಯ ಮೃತ್ಯುಂಜಯಶ್ರೀ ತಿಳಿಸಿದ್ದಾರೆ.

ಬಸವಜಯ ಮೃತ್ಯುಂಜಯಶ್ರೀ ನೇತೃತ್ವದಲ್ಲಿ ಸಭೆ ಸಿಎಂ ರಾಜೀನಾಮೆ ಕೊಡುವುದಕ್ಕೂ ಮುನ್ನ ವಿಶೇಷ ಸಂಪುಟ ಸಭೆ ನಡೆಸಿ, ಈ ಸಭೆಯಲ್ಲಿ 4 ಪ್ರಮುಖ ನಿರ್ಣಯಗಳನ್ನು ತೆಗೆದುಕೊಳ್ಳಬೇಕು. ಮೊದಲ ನಿರ್ಣಯ, ರಾಜೀನಾಮೆ ಕೊಡುವ ಮುನ್ನ ವಿಶೇಷ ಸಂಪುಟ ಸಭೆ ನಡೆಸಿ ಪಂಚಮಸಾಲಿ ಸಮುದಾಯಕ್ಕೆ 2A ಶಿಫಾರಸ್ಸು ಘೋಷಿಸಬೇಕು. ಎರಡನೆ ನಿರ್ಣಯ, ಅಕ್ಟೋಬರ್ 1 ರಿಂದ ಪುನಃ ಪಂಚಮಸಾಲಿ ಸಮುದಾಯದ 2A ಮೀಸಲು ಹೋರಾಟ ಆರಂಭ. ಮೂರನೆ ನಿರ್ಣಯ, ಆಗಸ್ಡ್ 15 ರಿಂದ ಸೆಪ್ಟಂಬರ್ 30 ರವರೆಗೆ ಪಂಚಮಸಾಲಿ ಪ್ರತಿಜ್ಞಾ ಪೂಜೆ ಅಭಿಯಾನ ರಾಜ್ಯದ ಉದ್ದಗಲಕ್ಕೆ ಅಭಿಯಾನಕ್ಕೆ ತೀರ್ಮಾನ. ನಾಲ್ಕನೆ ನಿರ್ಣಯ, ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಆದರೆ ಉತ್ತರ ಕರ್ನಾಟಕದ ಪಂಚಮಸಾಲಿ ಲಿಂಗಾಯತರನ್ನೆ ಮುಂದಿನ ಸಿಎಂ ಮಾಡಬೇಕು ಎಂದು ಒತ್ತಾಯಿಸಲು ಸಭಾ ನಿರ್ಣಯ ಎಂದು ಬಸವಜಯ ಮೃತ್ಯುಂಜಯಶ್ರೀ ಹೇಳಿದ್ದಾರೆ.

ಇದನ್ನೂ ಓದಿ: ತವರು ಜಿಲ್ಲೆ ಶಿವಮೊಗ್ಗಕ್ಕೆ ಬಂಪರ್ ಕೊಡುಗೆ ನೀಡಿದ ಸಿಎಂ ಯಡಿಯೂರಪ್ಪ; 1800 ಕೋಟಿ ರೂ. ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ

ಯಡಿಯೂರಪ್ಪರನ್ನು ಬದಲಾವಣೆ ಮಾಡಿದ್ರೆ ಕೋಟಾ ಶ್ರೀನಿವಾಸ ಪೂಜಾರಿಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು: ಪ್ರಣವಾನಂದ ಸ್ವಾಮೀಜಿ ಒತ್ತಾಯ

Published On - 1:45 pm, Sat, 24 July 21

ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?