AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮಳೆ ಆರ್ಭಟ! ಹೆಚ್ಚಾಯ್ತು ಮನೆಗಳು ಕುಸಿಯುವ ಭೀತಿ

ತಡೆಗೋಡೆ ಕುಸಿದ ಪರಿಣಾಮ ಮನೆಯ ಪಾಯಕ್ಕೆ ಸೇರಿದ ಮಣ್ಣು ಕೂಡ ಕುಸಿದಿದೆ. ಹೀಗಾಗಿ ಮೂರುಮನೆಗಳು ಕುಸಿಯುವ ಭೀತಿ ಎದುರಾಗಿದೆ. ಮನೆಯೊಳಗೆ ಗೋಡೆಗಳು ಬಿರುಕು ಬಿಟ್ಟಿದೆ.

ಬೆಂಗಳೂರಿನಲ್ಲಿ ಮಳೆ ಆರ್ಭಟ! ಹೆಚ್ಚಾಯ್ತು ಮನೆಗಳು ಕುಸಿಯುವ ಭೀತಿ
ಕುಸಿಯುವ ಆತಂಕದಲ್ಲಿರುವ ಮನೆ
TV9 Web
| Edited By: |

Updated on:Oct 18, 2021 | 2:40 PM

Share

ಬೆಂಗಳೂರು: ನಗರದಲ್ಲಿ ಸತತ ಮಳೆಯ ಆರ್ಭಟದಿಂದ ಮೂರು ಮನೆಗಳು ಕುಸಿಯುವ ಭೀತಿಯಲ್ಲಿವೆ. ಹೆಸರಘಟ್ಟ ರಸ್ತೆಯ ಚಿಮನಿ ಹಿಲ್ಸ್‌ನ ಸೌಂದರ್ಯ ಲೇಔಟ್  ನಿರ್ಮಾಣಕ್ಕಾಗಿ ಭೂಮಿ ಅಗೆಯಲಾಗಿತ್ತು. ಶ್ರೀನಿವಾಸ್, ಸುರೇಶ್, ನಾಗರಾಜ್, ಗುಂಡಪ್ಪ ನಾಲ್ವರು ಸೇರಿ ಚಿಮಣಿ ಹಿಲ್ಸ್ ಲೇಔಟ್ ನಿರ್ಮಿಸಿದ್ದರು. 2014 ರಲ್ಲಿ ಚಿಮಣಿ ಹಿಲ್ಸ್ ಲೇಔಟ್ ನಿರ್ಮಾಣವಾಗಿತ್ತು. ಲೇಔಟ್​ಗಾಗಿ ನಿರ್ಮಾಣವಾಗಿರುವ ಮನೆಯ ಪಕ್ಕದಲ್ಲಿ ಹೆಚ್ಚು ಮಣ್ಣು ಅಗೆಯಲಾಗಿದೆ. ಮನೆಯ ಪಕ್ಕದಲ್ಲೇ ಬೇಕಾಬಿಟ್ಟಿಯಾಗಿ ಮಾಲೀಕರು ಲೇಔಟ್ ನಿರ್ಮಿಸಿದ್ದರು. ಆದರೆ ಕಳಪೆ ಕಾಮಗಾರಿಯಿಂದ ಮಳೆಯ ಹೊಡೆತಕ್ಕೆ ತಡೆಗೋಡೆ ಕುಸಿದಿದೆ.

ತಡೆಗೋಡೆ ಕುಸಿದ ಪರಿಣಾಮ ಮನೆಯ ಪಾಯಕ್ಕೆ ಸೇರಿದ ಮಣ್ಣು ಕೂಡ ಕುಸಿದಿದೆ. ಹೀಗಾಗಿ ಮೂರುಮನೆಗಳು ಕುಸಿಯುವ ಭೀತಿ ಎದುರಾಗಿದೆ. ಮನೆಯೊಳಗೆ ಗೋಡೆಗಳು ಬಿರುಕು ಬಿಟ್ಟಿದೆ. ಮನೆಯ ಮಾಲೀಕರು ಜೀವ ಭಯದಲ್ಲಿ ಬದುಕುವಂತಾಗಿದೆ. ಸ್ಥಳಕ್ಕೆ ಬಂದ ಬಿಬಿಎಂಪಿ ಅಧಿಕಾರಿಗಳು ಮನೆ ಖಾಲಿ ಮಾಡಿ ಎಂದು ನೋಟಿಸ್ ನೀಡಿದ್ದಾರೆ.

ನಿರಂತರ ಮಳೆಯಿಂದ ಕುಸಿದುಬಿದ್ದ ಕಾಂಪೌಂಡ್​ ತೆರವುಗೊಳಿಸಲಾಗಿದೆ. ಹಾನಿಯಾಗಿರುವ ಗೋಡೆಯನ್ನು ತೆರವು ಮಾಡಿ, ಹೊಸದಾಗಿ ಗೋಡೆ ನಿರ್ಮಾಣ ಮಾಡುವುದಕ್ಕೆ ನಿರ್ಧಾರ ಮಾಡಲಾಗಿದೆ.

ಹೈರೇಜ್ ಬಿಲ್ಡಿಂಗ್ ಮಾಲೀಕರಿಗೆ ನಡುಕ ಶುರು ಬಿಬಿಎಂಪಿಗೆ ಮೋಸ ಮಾಡಿ ಬಿಲ್ಡಿಂಗ್ ಕಟ್ಟಿದವರಿಗೆ ಶಾಕ್ ಎದುರಾಗಿದೆ. ನಾಲ್ಕು ಅಂತಸ್ತಿಗೆ ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆದು ತಮಗಿಷ್ಟ ಬಂದಂತೆ  ಮಾಲೀಕರು ಕಟ್ಟಡ ನಿರ್ಮಿಸಿಕೊಂಡಿದ್ದಾರೆ. ಅಂದಾಜು 5,000 ಕಟ್ಟಡ ಅನಧಿಕೃತವಾಗಿರುವ ಮಾಹಿತಿ ಇದೆ. ಹೈರೇಜ್ ಬಿಲ್ಡಿಂಗ್​ಗಳ ನೆಲಸಮಕ್ಕೆ ಬಿಬಿಎಂಪಿ ನಿರ್ಧರಿಸಿದೆ.

ಇದನ್ನೂ ಓದಿ

Duplicate Fertilizer: ಮಣ್ಣಿಗೆ ರೆಡ್ ಆಕ್ಸೈಡ್​ ಬಣ್ಣ ಬೆರೆಸಿ ನಕಲಿ ಗೊಬ್ಬರ ತಯಾರಿ – 85 ಮೂಟೆ ಜಪ್ತಿ

ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳ ಸರ್ವೆ ವಿಚಾರ; ಸರ್ಕಾರದ ನಿಲುವಿಗೆ ಬೆಂಗಳೂರಿನ ಆರ್ಚ್ ಬಿಷಪ್ ಆಕ್ಷೇಪ

Published On - 2:34 pm, Mon, 18 October 21

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ