ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ, 2 ವರ್ಷಗಳಲ್ಲಿ ಭರ್ತಿ ಮಾಡ್ತೇವೆ -ದಿನೇಶ್ ಗುಂಡೂರಾವ್

ಸರ್ಕಾರಿ ಹುದ್ದೆಗಳಿಗಾಗಿ ಕಾಯುತ್ತಿರುವ ಆಕಾಕ್ಷಿಗಳಿಗೆ ಆರೋಗ್ಯ ಇಲಾಖೆ ಸಚಿವರು ಸಿಹಿ ಸುದ್ದಿ ನೀಡಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನ‌ಹರಿಸುತ್ತೇವೆ. 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದು ತಿಳಿಸಿದ್ದಾರೆ.

ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ, 2 ವರ್ಷಗಳಲ್ಲಿ ಭರ್ತಿ ಮಾಡ್ತೇವೆ -ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
Edited By:

Updated on: Jul 24, 2024 | 3:01 PM

ಬೆಂಗಳೂರು, ಜುಲೈ.24: ಆರೋಗ್ಯ ಇಲಾಖೆಯಲ್ಲಿ (Health Department) ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇನ್ಸ್​ಪೆಕ್ಷನ್ ಆಫೀಸರ್,‌ ಪಿಹೆಚ್​​ಸಿಗಳಲ್ಲಿ ಸಿಬ್ಬಂದಿ ಸೇರಿ‌ದಂತೆ ಇನ್ನೂ‌ ಹಲವು ಹುದ್ದೆಗಳು‌ ಖಾಲಿ ಇವೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದ್ದಾರೆ. ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಗಮನ‌ಹರಿಸುತ್ತೇವೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದೇವೆ. 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದರು.

ವಿಧಾನಸೌಧದಲ್ಲಿ‌ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಿಎಂ ಗಮನಕ್ಕೆ ತಂದು 2 ವರ್ಷಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡ್ತೇವೆ ಎಂದು ತಿಳಿಸಿದರು. ಇದೇ ವೇಳೆ ಇಡಿ ಅಧಿಕಾರಿಗಳ ವಿರುದ್ಧದ ಎಫ್​ಐಆರ್​ಗೆ ಹೈಕೋರ್ಟ್​ ತಡೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದು, ಆ ಅಧಿಕಾರಿ ಯಾರು, ಏನು ಅಂತಾ ನಮಗೆ ಗೊತ್ತಿಲ್ಲ. ಅಧಿಕಾರಿ ಕಲ್ಲೇಶ್​​ರನ್ನು ಇಡಿ ಅಧಿಕಾರಿಗಳೇ ಕರೆಸಿಕೊಂಡಿದ್ದಾರೆ. ಆ ಅಧಿಕಾರಿ ಭ್ರಷ್ಟಾಚಾರ ಮಾಡಿದ್ದಾರೋ ಇಲ್ವೋ ಬೇರೆ ವಿಚಾರ. ಮೊನ್ನೆ ದೂರು ಕೊಡುವ ಮೊದಲೇ ಇಡಿ ಏನು ಅಂತ ಹೇಳಿದ್ದೀವಿ. ಇಡಿಯವರು ಹಲವರಿಗೆ ಒತ್ತಡ ಹಾಕಿದ್ದಾರೆ, ನಮ್ಮ ಬಳಿ ಮಾಹಿತಿ ಇದೆ.

ಇದನ್ನೂ ಓದಿ: ಮುಡಾ ನಿವೇಶನ ವಾಪಸ್ ಕೊಟ್ಟು ತನಿಖೆ ಮಾಡಿಸಿ: ಸಿಎಂ ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಸಲಹೆ

ಸಿಎಂ, ಮಂತ್ರಿಗಳ ಹೆಸರು ಹೇಳುವಂತೆ ಒತ್ತಡಹಾಕಿ ಸಿಲುಕಿಸಲು ಯತ್ನ ನಡೆದಿದೆ. ಬೇರೆಯವರ ಮೇಲೂ ಒತ್ತಡ ಹಾಕಲಾಗಿದೆ, ಯಾರೂ ದೂರು ಕೊಟ್ಟಿಲ್ಲ. ವಿಪಕ್ಷಗಳು ಏನಾದರೂ ಹೇಳಿಕೊಳ್ಳಲಿ, ಇಡಿ ಬಗ್ಗೆ ಎಲ್ಲರಿಗೂ ಗೊತ್ತಿದೆ. ಇಡಿ ಅಧಿಕಾರಿಗಳು ಬಿಜೆಪಿ ಪರ ಇದ್ದಾರೆ. ಸಿಬಿಐ, ಎಸ್​ಐಟಿ ಇರುವಾಗ ಇಡಿ ಬರುವ ಅವಶ್ಯಕತೆ ಏನಿತ್ತು? ನಾಗೇಂದ್ರ ಹೆಸರು ಸಿಬಿಐ ಹಾಗೂ‌ ಎಸ್​​ಐಟಿನಲ್ಲಿ‌ ಎಲ್ಲೂ ಇರಲಿಲ್ಲ. ಇಡಿ ಅಧಿಕಾರಿಗಳು ನೇರವಾಗಿ ಬಂದು ನಾಗೇಂದ್ರರನ್ನು ಬಂಧಿಸಿದ್ರು. ಇಡಿ ಅಧಿಕಾರಿಗಳು ದೇಶಾದ್ಯಂತ ಅನಾಹುತ ಸೃಷ್ಟಿ ಮಾಡುತ್ತಿದ್ದಾರೆ ಎಂದರು.

FIR​ಗೆ ಹೈಕೋರ್ಟ್​ ತಡೆ ನೀಡಲು ತಾಂತ್ರಿಕ ಕಾರಣಗಳಿರಬಹುದು. ಅಧಿಕಾರಿ ಠಾಣೆಗೆ ಬಂದು‌ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ತಮಗೆ ಆದಂತಹ ಘಟನೆ ಆಧಾರದ ಮೇಲೆ‌ ದೂರು ಕೊಟ್ಟಿದ್ದಾರೆ. ಇಡಿ ಅಧಿಕಾರಿಗಳು ಬಂದಿರುವ ಉದ್ದೇಶ ಸ್ಪಷ್ಟವಾಗಿದೆ. ಕಾಂಗ್ರೆಸ್​​ ಸರ್ಕಾರವನ್ನ‌ ತೆಗೆಯಬೇಕು, ಸಿಎಂ ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಹೇಗಾದ್ರೂ ಮಾಡಿ ಕಾಂಗ್ರೆಸ್ ಸರ್ಕಾರ ತೆಗೆಯಬೇಕೆಂಬ ಉದ್ದೇಶವಿದೆ. ದೇಶದ ಹಲವೆಡೆ ಇಡಿ ಬಿಜೆಪಿಯ ಅಂಗಸಂಸ್ಥೆಯಾಗಿ ಕೆಲಸ ಮಾಡ್ತಿದೆ. ಇದು ಬಹಳ‌ ದೊಡ್ಡ ವಿಷಯ, ನಮ್ಮ‌ ಹೋರಾಟ ನಿರಂತರವಾಗಿರುತ್ತೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ