Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದಂತೆ ವ್ಯಾಪಾರ ಮಾಡಿದರೆ ತೊಂದರೆ ಇಲ್ಲ -ಡಿಕೆ ಶಿವಕುಮಾರ್

ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನದಲ್ಲೂ ಇದೆ. ಅವರು ಎರಡು ಮೂರು ಬಾರಿ ನನ್ನನ್ನೂ ಭೇಟಿ‌ ಮಾಡಿದ್ದರು. ಫುಟ್ ಪಾತ್​ಗಳು ಜನರ ಓಡಾಟಕ್ಕೆ ಮುಕ್ತವಾಗಿರಬೇಕು. ಹೈ ಕೋರ್ಟ್ ಆರ್ಡರ್ ಇದೆ. ಅದನ್ನ ಪಾಲಿಸಬೇಕು. ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಎಲ್ಲಾ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದಂತೆ ವ್ಯಾಪಾರ ಮಾಡಿದರೆ ತೊಂದರೆ ಇಲ್ಲ -ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​
Follow us
TV9 Web
| Updated By: ಆಯೇಷಾ ಬಾನು

Updated on: Jan 13, 2024 | 1:09 PM

ಬೆಂಗಳೂರು, ಜ.13: ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವ ಹಿನ್ನೆಲೆ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಸಂಕ್ರಾತಿ ಹಬ್ಬಕ್ಕೆ ನಮ್ಮ ಹೊಟ್ಟೆ ಮೇಲೆ ಹೊಡೆಯ ಬೇಡಿ ಎಂದು ನೂರಾರು ಸಂಖ್ಯೆಯಲ್ಲಿ ವ್ಯಾಪಾರಿಗಳು ಪ್ರತಿಭಟನೆ (Protest) ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇನ್ನು ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar), ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ ಎಂದಿದ್ದಾರೆ.

ಬೀದಿಬದಿ ವ್ಯಪಾರಿಗಳ ಪ್ರತಿಭಟನೆ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ಫುಟ್ ಪಾತ್ ವ್ಯಾಪಾರಿಗಳ ಸಮಸ್ಯೆ ನನ್ನ ಗಮನದಲ್ಲೂ ಇದೆ. ಅವರು ಎರಡು ಮೂರು ಬಾರಿ ನನ್ನನ್ನೂ ಭೇಟಿ‌ ಮಾಡಿದ್ದರು. ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಸರಿಪಡಿಸಬೇಕು. ಫುಟ್ ಪಾತ್​ಗಳು ಜನರ ಓಡಾಟಕ್ಕೆ ಮುಕ್ತವಾಗಿರಬೇಕು. ಹೈ ಕೋರ್ಟ್ ಆರ್ಡರ್ ಇದೆ. ಅದನ್ನ ಪಾಲಿಸಬೇಕು. ಫುಟ್ ಪಾತ್ ವ್ಯಾಪಾರಿಗಳು ಲೈಸೆನ್ಸ್ ಪಡೆದು ಜನರ ಓಡಾಟಕ್ಕೆ ತೊಂದರೆ ಆಗದ ರೀತಿಯಲ್ಲಿ ತಳ್ಳುಗಾಡಿ ಎಲ್ಲಾ ಹಾಕಿಕೊಂಡು ವ್ಯಾಪಾರ ಮಾಡಿದರೆ ತೊಂದರೆ ಇಲ್ಲ. ಫುಟ್ ಪಾತ್ ಓಡಾಟಕ್ಕೆ ತೊಂದರೆ ಆದಾಗ ನಾಗರಿಕರಿಂದ ನಮಗೂ ದೂರುಗಳು ಬಂದಿವೆ. ಕೋರ್ಟ್ ನಿರ್ದೆಶನ ಸಹ ಇದೆ. ಅದನ್ನ ನಾವು ಪಾಲಿಸಬೇಕು ಎಂದರು.

ಇನ್ನು ಇದೇ ವೇಳೆ ಡಿಕೆ ಶಿವಕುಮಾರ್ ಅವರು ಅನೇಕ ವಿಚಾರಗಳ ಸಂಬಂಧ ಮಾತನಾಡಿದರು. ಅನುಭವ ಮಂಟಪಕ್ಕೆ ಅನುದಾನ ಕುರಿತು ಬಸವಕಲ್ಯಾಣ ಶಾಸಕ ಹೇಳಿಕೆ ವಿಚಾರ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಅವ್ರು ಹೊಸ ಶಾಸಕರು. ಹೀಗಾಗಿ ಹಂಗ್ ಮಾತಾಡ್ತಾರೆ. ನಿನ್ನೆ ಶಿವಮೊಗ್ಗದಲ್ಲಿ ಸಿಎಂ ಸಾಹೇಬ್ರು ಬಸವಣ್ಣನವರ ಬಗ್ಗೆ ಮಾತಾಡಿದ್ರು. ಅಲ್ಲಮ ಪ್ರಭುಗಳ ಬಗ್ಗೆ ಮಾತನಾಡಿದ್ರು. ಅವ್ರ ಸರ್ಕಾರ ಇದ್ದಾಗ ಯಾಕ್ ಕೇಳಿಲ್ಲ ಅವ್ರು? ಅನುಭವ ಮಂಟಪಕ್ಕೆ ಅನುದಾನ ಕೊಡ್ತಿರೋದೆ ನಮ್ಮ ಸರ್ಕಾರ ಎಂದು ಡಿಕೆಶಿ ತಿಳಿಸಿದರು.

ಇದನ್ನೂ ಓದಿ: ಲೋಕಸಭಾ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವರೇ? ಗೊತ್ತಿಲ್ಲವೆಂದರು ಜಿ ಪರಮೇಶ್ವರ್

ರಾಷ್ಟ್ರೀಯ ರಸ್ತೆ ಸುರಕ್ಷತಾ ದಿನ ಕಾರ್ಯಕ್ರಮದಲ್ಲಿ ಡಿಕೆಶಿ ಮಾತನಾಡಿ, ಆರ್ಟಿಫಿಶಿಯಲ್ ಇಂಟಲಿಜರನ್ಸ್ ನಿಂದ ಸಂಚಾರಿ ನಿಯಮ ಪಾಲನೆ ಮಾಡಲಿಲ್ಲ ಅಂದ್ರೆ ತುಂಬಾ ಅಪಘಾತಗಳಾಗುತ್ತವೆ. 2023ರಲ್ಲಿ ಅತಿ ಹೆಚ್ಚು ಜೀವ ಕಳೆದುಕೊಂಡಿರೋದು ಬೈಕ್ ಸವಾರರು. ಜೀವ ಕಳಕೊಳ್ಳೋ ಮುಂಚಿತವಾಗಿ ಜೀವ ಕಾಪಾಡಿಕೊಳ್ಳಬೇಕು. ಜೀವನದಲ್ಲಿ ಧೈರ್ಯ ಇರಬೇಕು. ಆದರೆ ಬಂಡತನ ಇರಬಾರದು. ಯುವಕರು ನಿಯಮ ಉಲ್ಲಂಘನೆ ಮಾಡಬಾರದು. ನಮ್ಮ ಪೊಲೀಸ್ ಇಲಾಖೆ ಎಲ್ಲಾ ಸೇರಿ ಉತ್ತಮ ಕೆಲಸ ಮಾಡ್ತಿದ್ದಾರೆ. ಬೆಂಗಳೂರಿನ ದೊಡ್ಡ ಸಮಸ್ಯೆ ಟ್ರಾಫಿಕ್ ಸಮಸ್ಯೆ. ಟ್ರಾಫಿಕ್ ಸಮಸ್ಯೆ ಸರಿ ಪಡಿಸೋ ನಿಟ್ಟಿನಲ್ಲಿ ಬಹಳ ಯೋಜನೆಗಳನ್ನ ಕಾರ್ಯಕ್ರಮಗಳನ್ನ ರೂಪಿಸುತ್ತೀವೆ ಎಂದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್