AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಲಪಾಡ್ ವಿರುದ್ಧ ಹಲ್ಲೆ ಆರೋಪ; ಯಾವ ಗಲಾಟೆನೂ ಇಲ್ಲ, ಏನು ಇಲ್ಲ: ಡಿಕೆ ಶಿವಕುಮಾರ್

ಕೆಲಸ ಮಾಡುತ್ತಾ ಇದ್ದಾರೆ ಅಂದರೆ ಅವರ ವಿರುದ್ಧ ಈ ರೀತಿ ಏನೋ ಒಂದು ಆರೋಪ ಕೇಳಿ ಬರುತ್ತಲೇ ಇರುತ್ತದೆ. ನಾನು ಯಾರ ವೈಯಕ್ತಿಕ ಜೀವನದ ಒಳಗೂ ಪ್ರವೇಶ ಮಾಡುವುದಕ್ಕೆ ಇಷ್ಟಪಡುವುದಿಲ್ಲ. ಯಾರೇ ಪಕ್ಷದಲ್ಲಿ ತಪ್ಪು ಮಾಡಿದರೆ ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತೀನಿ ಎಂದು ಡಿ.ಕೆ. ಶಿವಕುಮಾರ್​ .

ನಲಪಾಡ್ ವಿರುದ್ಧ ಹಲ್ಲೆ ಆರೋಪ; ಯಾವ ಗಲಾಟೆನೂ ಇಲ್ಲ, ಏನು ಇಲ್ಲ: ಡಿಕೆ ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್
TV9 Web
| Updated By: preethi shettigar|

Updated on:Jan 20, 2022 | 5:58 PM

Share

ಬೆಂಗಳೂರು: ಮೊಹಮ್ಮದ್ ನಲಪಾಡ್ ವಿರುದ್ಧ ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ (Congress) ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (​DK Shivakumar) ಹೇಳಿಕೆ ನೀಡಿದ್ದಾರೆ. ಯಾವ ಗಲಾಟೆನೂ ಇಲ್ಲ, ಏನು ಇಲ್ಲ. ನಾನು ಕ್ರಾಸ್ ಚೆಕ್ ಮಾಡಿದೆ. ಆ ಥರ ಏನೂ ಇಲ್ಲ. ಯಾವ ಗಲಾಟೆನೂ ಇಲ್ಲ. ಯಾರೋ ಮಿಸ್ ಗೈಡ್ ಮಾಡಿದ್ದಾರೆ. ನಾನು ಸಿದ್ದು ಹಳ್ಳೇಗೌಡರ ಜೊತೆ ಪೋನ್​ನಲ್ಲಿ ಮಾತನಾಡಿದೆ. ನನ್ನ ಪೋನ್ (Phone) ತಗೊಂಡು ಯಾರೋ ಈ ರೀತಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕೆಲಸ ಮಾಡುತ್ತಾ ಇದ್ದಾರೆ ಅಂದರೆ ಅವರ ವಿರುದ್ಧ ಈ ರೀತಿ ಏನೋ ಒಂದು ಆರೋಪ ಕೇಳಿ ಬರುತ್ತಲೇ ಇರುತ್ತದೆ. ನಾನು ಯಾರ ವೈಯಕ್ತಿಕ ಜೀವನದ ಒಳಗೂ ಪ್ರವೇಶ ಮಾಡುವುದಕ್ಕೆ ಇಷ್ಟಪಡುವುದಿಲ್ಲ. ಯಾರೇ ಪಕ್ಷದಲ್ಲಿ ತಪ್ಪು ಮಾಡಿದರೆ ಶಿಸ್ತಿನ ಕ್ರಮ ತೆಗೆದುಕೊಳ್ಳುತ್ತೀನಿ ಎಂದು ನಲಪಾಡ್ ಪರ ಡಿ.ಕೆ. ಶಿವಕುಮಾರ್​  ಬ್ಯಾಟ್​ ಬೀಸಿದ್ದಾರೆ.

ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ವಿಚಾರ

ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದೆ. ಸಿಎಂ ಬೊಮ್ಮಾಯಿ ಇಂದು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಕ್ರಮ ತೆಗೆದುಕೊಳ್ಳುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಆದರೆ ಯಾರ ವಿರುದ್ಧವೂ ಇನ್ನೂ ಕ್ರಮ ತೆಗೆದುಕೊಂಡಿಲ್ಲ. ಕೇವಲ ನಮ್ಮ ವಿರುದ್ಧ ಮಾತ್ರ ಕೊವಿಡ್ ನಿಯಮ ಉಲ್ಲಂಘನೆ ಪ್ರಕರಣ ದಾಖಲಿಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ಯಾವ ಕೇಸ್​ ಕೂಡ ಹಾಕಿಲ್ಲ. ಇದನ್ನೆಲ್ಲಾ ನೋಡಿಕೊಂಡು ನಾವು ಸುಮ್ಮನೆ ಕೂರುವುದಿಲ್ಲ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಿದ್ದರಾಮಯ್ಯಗೆ ಕರೆ ಮಾಡಿ ಈ ಬಗ್ಗೆ ಮಾತನಾಡಿದ್ದೇನೆ. ಕೊವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಆಗಲಿ. ಎಲ್ಲೆಲ್ಲಿ ಕೊವಿಡ್ ನಿಯಮಗಳು ಉಲ್ಲಂಘನೆಯಾಗಿದೆ. ಅಲ್ಲಿ ಕ್ರಮತೆಗೆದುಕೊಳ್ಳಬೇಕು. ಡೆಪ್ಯೂಟಿ ಕಮೀಷನರ್ ಹಾಗೂ ಎಸ್‌ಪಿ ಮೇಲೆ ಕ್ರಮ ತೆಗೆದುಕೊಳ್ಳಲಿ. ಯಾವ ಬಿಜೆಪಿ ನಾಯಕರ ಮೇಲೆ ಕೇಸ್ ಹಾಕಿಲ್ಲ. ಯಾರೋ ಒಬ್ಬರ ಮೇಲೆ ಹಾಕಿದ್ದಾರೆ ಅಷ್ಟೇ. ಎಲ್ಲಾ ಅಧಿಕಾರಿಗಳ ವಿರುದ್ಧ ಹೋರಾಟ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯಗೆ ಟಕ್ಕರ್ ಕೊಡಲು ಡಿಕೆಶಿಯಿಂದ ಪಾದಯಾತ್ರೆ: ಸಚಿವ ಅಶ್ವತ್ಥ್ ನಾರಾಯಣ

ಮೊಹಮ್ಮದ್ ನಲಪಾಡ್ ಹಲ್ಲೆ ಮಾಡಿಲ್ಲ; ಈ ವಿಚಾರ ಸತ್ಯಕ್ಕೆ ದೂರವಾದದ್ದು: ಸಿದ್ದು ಹಳ್ಳೇಗೌಡ

Published On - 5:46 pm, Thu, 20 January 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!