AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ, ಕಾಂಗ್ರೆಸ್​​​ ಸುಳ್ಳು ಆರೋಪ ಮಾಡುತ್ತಿದೆ: ಅಶ್ವತ್ಥ್​ ನಾರಾಯಣ ಸ್ಪಷ್ಟನೆ

ಕಾಂಗ್ರೆಸ್​ ನಾಯಕರಿಂದ ಸುಳ್ಳು ಆರೋಪ ಮಾಡುತ್ತಿದೆ. ಈ ಸಂಸ್ಥೆಗಳಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಈ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ ಎಂದು ಸಚಿವ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ, ಕಾಂಗ್ರೆಸ್​​​ ಸುಳ್ಳು ಆರೋಪ ಮಾಡುತ್ತಿದೆ: ಅಶ್ವತ್ಥ್​ ನಾರಾಯಣ ಸ್ಪಷ್ಟನೆ
ಸಚಿವ ಡಾ.ಸಿ.ಎನ್.ಅಶ್ವತ್ಥ್​ ನಾರಾಯಣ
TV9 Web
| Edited By: |

Updated on:Nov 17, 2022 | 4:21 PM

Share

ಬೆಂಗಳೂರು: ಕಾಂಗ್ರೆಸ್​ ನಾಯಕರಿಂದ ಸುಳ್ಳು ಆರೋಪ ಮಾಡಲಾಗುತ್ತಿದೆ. ಈ ಸಂಸ್ಥೆಗಳಿಗೂ ರಾಜ್ಯ ಸರ್ಕಾರಕ್ಕೂ ಯಾವುದೇ ಸಂಬಂಧ ಇಲ್ಲ. ಕಾಂಗ್ರೆಸ್ (congress)​ ನಾಯಕರು ಏನೋ ಹೇಳಿಕೆ ಕೊಡಬೇಕಿತ್ತು ಕೊಟ್ಟಿದ್ದಾರೆ. ಯಾರು ಏನು ಮಾಡಿದ್ದಾರೋ ಗೊತ್ತಿಲ್ಲ, ತಪ್ಪು ಮಾಡಿದ್ದರೆ ತಪ್ಪೇ ಎಂದು ನಗರದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ ಹೇಳಿದರು. ವೋಟರ್​ ಐಡಿ (voter id) ಅಕ್ರಮದ ಹಿಂದೆ ಸಚಿವ ಅಶ್ವತ್ಥ್ ಕೈವಾಡ ಆರೋಪಕ್ಕೆ ಅವರು ತಿರುಗೇಟು ನೀಡಿದರು. ಕಾಂಗ್ರೆಸ್​ ನಾಯಕರು ಭ್ರಷ್ಟಾಚಾರದಲ್ಲೇ ತುಂಬಿ ತುಳುಕಿದ್ದಾರೆ. ಈ ರೀತಿ ಆರೋಪ ಮಾಡಲು ಕಾಂಗ್ರೆಸ್​ ನಾಯಕರಿಗೆ ನೈತಿಕತೆ ಇಲ್ಲ. ಹೊಂಬಾಳೆ ಸಂಸ್ಥೆಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ. ಇವರಂತೂ ಒಳ್ಳೆ ಕೆಲಸ ಮಾಡಿಲ್ಲ, ಮಾಡುವುದಕ್ಕೂ ಬಿಡಲ್ಲ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಸಚಿವ ಅಶ್ವತ್ಥ್ ನಾರಾಯಣ ಕಿಡಿಕಾರಿದರು.

ಪ್ರತಿ ಬಾರಿಯೂ ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ: ಸಚಿವ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ 

ಈ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ. ರವಿಕುಮಾರ್ ಅನ್ನೋರು ನನಗೆ ಗೊತ್ತು. ಅವರು ನಮ್ಮ ಕ್ಷೇತ್ರದವರು. ಚಿಲುಮೆ ಸಂಸ್ಥೆಯವರು ಏನು ಅಕ್ರಮ ಮಾಡಿದ್ದಾರೆ ಗೊತ್ತಿಲ್ಲ. ಚಿಲುಮೆ ಸಂಸ್ಥೆಗೆ ಅವಕಾಶ ಕೊಟ್ಟಿದ್ದು ಚುನಾವಣಾ ಆಯೋಗ. ಈ ಕುರಿತಾಗಿ ತನಿಖೆ ಮಾಡಿಸಲು ಹೇಳಲು ನಾವು ಯಾರು ಎಂದು ಪ್ರಶ್ನಿಸಿದರು. ಇದು ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ವಿಚಾರ. ಪ್ರತಿ ಬಾರಿಯೂ ನನ್ನ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. ಎಲ್ಲಾ ರೀತಿಯಲ್ಲೂ ಕಾನೂನು ಉಲ್ಲಂಘನೆ ಮಾಡಿದ್ದು ಕಾಂಗ್ರೆಸ್ಸಿಗರು. ಕಾಂಗ್ರೆಸ್ ನಾಯಕರು ಸುಮ್ಮನೇ ಗಾಳಿ ಸುದ್ದಿ ಹಬ್ಬಿಸುತ್ತಿದ್ದಾರೆ. ನನ್ನನ್ನು ಕಂಡರೆ ಡಿ.ಕೆ.ಶಿವಕುಮಾರ್​ಗೆ​ ಬಹಳ ಪ್ರೀತಿ. ಯಾರೇ ತಪ್ಪು ಮಾಡಿದರೂ ಕಾನೂನಿನ ಅಡಿ ಶಿಕ್ಷೆ ಆಗಬೇಕು ಎಂದು ಹೇಳಿದರು.

ಪ್ರಕರಣದ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ: ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪ 

ವೋಟರ್​ ಐಡಿ ಅಕ್ರಮದ ಕುರಿತಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದು, ಮತದಾರರ ಮಾಹಿತಿ ಕಳ್ಳತನ ಪ್ರಕರಣದ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಎಂದು ನೇರವಾಗಿ ಗಂಭೀರ ಆರೋಪ ಮಾಡಿದ್ದಾರೆ. 20-08-2022ರಲ್ಲಿ ಚಿಲುಮೆ ಸಂಸ್ಥೆ ಗೆ BBMP ಕಮಿಷನರ್ ಆದೇಶ ನೀಡಿತ್ತು. ಇದೊಂದು ಸಿಎಂ ಮತ್ತು ಬಿಬಿಎಂಪಿ ಎಲೆಕ್ಷನ್ ಕಮಿಷನರ್ ಎಲ್ಲಾ ಸೇರಿ ಮಾಡಿದ ಸಂಚು ಅನಿಸುತ್ತದೆ. ಜಾಹೀರಾತು ನೀಡದೆ ಖಾಸಗಿ ಕಂಪನಿಗೆ ಮತದಾರರ ಪಟ್ಟಿ ಸಂಸ್ಕರಣೆ ಮಾಡಿ ಡಿಲಿಷನ್ ಅಡಿಷನ್ ಮಾಡುತ್ತಾರೆ. ಚುಲುಮೆ ಸಂಸ್ಥೆಯವರಿಗೆ ಅನುಭವವೂ ಇಲ್ಲ. ಬಿಎಲ್ಓ- ಬೂತ್ ಲೆವೆಲ್ ಆಫೀಸರ್ ಅಂತ ಅವರಿಗೆ ಐಡಿ ಕಾರ್ಡ್ ನೀಡಿದ್ದಾರೆ. ಪೀಪಲ್ಸ್ ರೆಪ್ರೆಸೆಂಟೇಷನ್ ಆ್ಯಕ್ಟ್ ಪ್ರಕಾರ ಸರ್ಕಾರಿ ನೌಕರರು ಅಲ್ಲದಿರುವವರು ಯಾರೂ ಬಿಲ್ ಓ ಆಗುವುದಕ್ಕೆ ಸಾಧ್ಯವಿಲ್ಲ. ಈ ಕೃಷ್ಣಪ್ಪ ರವಿಕುಮಾರ್ ಅಕ್ರಮವಾಗಿ ಐಡಿ ಕಾರ್ಡ್ ಕೊಟ್ಟು ನೇಮಕ ಮಾಡಿಕೊಂಡಿದ್ದಾನೆ. ಸೋಗು ಹಾಕಿಕೊಂಡು ಮಾಡಿದ ವಂಚನೆ ಅಕ್ರಮ ದುರ್ಬಳಕೆ ಇದು ಎಂದು ಸಿದ್ದರಾಮಯ್ಯ ವಾಗ್ದಾಳಿ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಈ ಅಕ್ರಮದ ಹಿಂದಿದ್ದಾರೆ. ನೇರವಾಗಿ ಬೊಮ್ಮಾಯಿಯವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಭ್ರಷ್ಟಾಚಾರ ಕೇವಲ ಗುತ್ತಿಗೆದಾರರ ವಿಷಯದಲ್ಲಿ ಮಾತ್ರ ನಡೆಯುತ್ತಿಲ್ಲ. ಚುನಾವಣೆಯನ್ನು ವಾಮ ಮಾರ್ಗದಲ್ಲಿ ಗೆಲ್ಲಬೇಕು ಅಂತ ಬೊಮ್ಮಾಯಿ ಏನೆಲ್ಲ ಆಟ ಆಡೋದಕ್ಕೆ ಶುರು ಮಾಡಿದ್ದಾರೆ ನೋಡಿ. ಓಟರ್ ಐಡಿ ತಿದ್ದುಪಡಿ‌ ಮಾಡಿರುವುದು ಅಕ್ಷಮ್ಯ ಅಪರಾಧ. ಬೊಮ್ಮಾಯಿ ಸಿಎಂ ಆಗಿ ಹೇಗೆ ಮುಂದುವರಿತಾರೆ? ತಕ್ಷಣ ಅವರು ರಾಜೀನಾಮೆ ನೀಡಬೇಕು. ಬೊಮ್ಮಾಯಿಯನ್ನು ಅರೆಸ್ಟ್ ಮಾಡಬೇಕು. ಎಫ್ಐಆರ್ ದಾಖಲಾಗದಿದ್ದರೆ ಮುಂದಿನ ಕ್ರಮ ನಾವು ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಆರೋಪ ಮಾಡಿದ್ದು ರಾಜೀನಾಮೆಗೆ ಆಗ್ರಹಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:01 pm, Thu, 17 November 22

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ