AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಣ್ಣಾಮುಚ್ಚಾಲೆ ಆಡೋಣ ಎಂದು ಕರೆದು ಉದ್ಯಮಿ ಮಗನ ಮೈ ಮೇಲಿದ್ದ ಚಿನ್ನಾಭರಣ ಕದ್ದು ಪರಾರಿ

ಆರು ವರ್ಷದ ಬಾಲಕನನ್ನು ಕರೆದು ಚಿನ್ನ ಕದ್ದು ಇಬ್ಬರು ಬೈಕ್​ನಲ್ಲಿ ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉದ್ಯಮಿ ರಾಘವೇಂದ್ರ ಸದ್ಯ ಗೋವಿಂದರಾಜನಗರ ಠಾಣೆಗೆ ದೂರು ನೀಡಿದ್ದಾರೆ.

ಬೆಂಗಳೂರಿನಲ್ಲಿ ಕಣ್ಣಾಮುಚ್ಚಾಲೆ ಆಡೋಣ ಎಂದು ಕರೆದು ಉದ್ಯಮಿ ಮಗನ ಮೈ ಮೇಲಿದ್ದ ಚಿನ್ನಾಭರಣ ಕದ್ದು ಪರಾರಿ
ಉದ್ಯಮಿ ಮಗ, ಚಿನ್ನಾಭರಣ ಕದ್ದು ಪರಾರಿಯಾಗುತ್ತಿರುವ ದೃಶ್ಯ
TV9 Web
| Edited By: |

Updated on:May 23, 2022 | 10:35 AM

Share

ಬೆಂಗಳೂರು: ಕಣ್ಣಾಮುಚ್ಚಾಲೆ ಆಟ ಆಡೋಣ ಎಂದು ಕರೆದು ಪುಸಲಾಯಿಸಿ ಬಾಲಕ (Boy) ಬಳಿಯಿದ್ದ ಚಿನ್ನಾಭರಣವನ್ನು (Jewellery) ಕದ್ದು ಪರಾರಿಯಾಗಿರುವ ಘಟನೆ ಗೋವಿಂದರಾಜನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಉದ್ಯಮಿ ರಾಘವೇಂದ್ರ ಎಂಬುವವರು ಕುಟುಂಬ ಸಮೇತರಾಗಿ ಮಾಗಡಿ ರಸ್ತೆಯ ಸರಸ್ವತಿ ಕನ್ವೆನ್ಶನ್ ಹಾಲ್ ಬಳಿ ಸಂಬಂಧಿಯ ಮದುವೆಗೆಂದು ಬಂದಿದ್ದರು. ಈ ವೇಳೆ ಖದೀಮರು ಉದ್ಯಮಿ ಮಗನ ಮೈ ಮೇಲಿದ್ದ ಮೂರುವರೆ ಲಕ್ಷ ರೂ. ಮೌಲ್ಯದ 79 ಗ್ರಾಂ ಚಿನ್ನಾಭರಣವನ್ನು ಕದ್ದು ಎಸ್ಕೇಪ್ ಆಗಿದ್ದಾರೆ. ಆರು ವರ್ಷದ ಬಾಲಕನನ್ನು ಕರೆದು ಚಿನ್ನ ಕದ್ದು ಇಬ್ಬರು ಬೈಕ್​ನಲ್ಲಿ ಪರಾರಿಯಾಗುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಉದ್ಯಮಿ ರಾಘವೇಂದ್ರ ಸದ್ಯ ಗೋವಿಂದರಾಜನಗರ ಠಾಣೆಗೆ ದೂರು ನೀಡಿದ್ದಾರೆ.

ಟ್ರಾಲಿ ಕಳ್ಳತನ ಮಾಡುತ್ತಿದ್ದ ಇಬ್ಬರು ಅರೆಸ್ಟ್: ಕಲಬುರಗಿ: ಟ್ರ್ಯಾಕ್ಟರ್ ಟ್ರಾಲಿ ಕಳ್ಳತನ ಮಾಡುತ್ತಿದ್ದ ಇಬ್ಬರನ್ನ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಶಹಬಾದ್ ಪೋಲಿಸರ ಬಲೆಗೆ ಖದೀಮರು ಬಿದ್ದಿದ್ದಾರೆ. ಸಿದ್ದಾಥ್೯, ಅನೀಲ್ ರಾಠೋಡ್ ಬಂಧಿತರು. ಬಂಧಿತರು ಕಲಬುರಗಿ ಜಿಲ್ಲೆಯ ನಿವಾಸಿಗಳು. ಈ ಹಿಂದೆ ಕಳ್ಳತನ ಮಾಡಿದ್ದ 4 ಟ್ರ್ಯಾಕ್ಟರ್​ ಟ್ರಾಲಿಗಳನ್ನ ಪೋಲಿಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹಬಾದ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ | ರಷ್ಯಾದ ಯುದ್ಧ ಚಿಹ್ನೆ Z ಮತ್ತು V ಅಕ್ಷರಗಳನ್ನು ನಿಷೇಧಿಸಿದ ಉಕ್ರೇನ್ ಸಂಸತ್ತು

ಇದನ್ನೂ ಓದಿ
Image
ರಷ್ಯಾ-ಉಕ್ರೇನ್ ಯುದ್ಧ | ರಷ್ಯಾದ ಯುದ್ಧ ಚಿಹ್ನೆ Z ಮತ್ತು V ಅಕ್ಷರಗಳನ್ನು ನಿಷೇಧಿಸಿದ ಉಕ್ರೇನ್ ಸಂಸತ್ತು
Image
Liam Livingstone: ಐಪಿಎಲ್ 2022 ಬೆಸ್ಟ್ ಕ್ಯಾಚ್ ಇದೇ ಆಗುತ್ತಾ?: ಲಿವಿಂಗ್​ಸ್ಟೋನ್ ಹಿಡಿದ ರೋಚಕ ಕ್ಯಾಚ್ ನೋಡಿ
Image
ವಿಜಯಪುರ ಜಿಲ್ಲೆಯಲ್ಲಿ ಕಾನೂನು ಬಾಹೀರವಾಗಿ ಮಕ್ಕಳ ಸಾಕಾಣಿಕೆ ದಂಧೆ? ಸ್ಟಾಪ್ ನರ್ಸ್ ವಿರುದ್ಧ ದೂರು ದಾಖಲು
Image
Indian Air Force Recruitment 2022: PUC ಪಾಸಾದವರಿಗೆ ಭಾರತೀಯ ವಾಯುಪಡೆಯಲ್ಲಿ ಉದ್ಯೋಗಾವಕಾಶ

ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್: ಐಷಾರಾಮಿ ಜೀವನಕ್ಕಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಬಂಧನಕ್ಕೊಳಗಾಗಿದ್ದಾರೆ. ಬೆಂಗಳೂರಿನ ಗಿರಿನಗರ ಪೊಲೀಸರು ಆರೋಪಿ ಮನೋರಂಜಿತ್, ಸುಗೇಶ್ ಕುಮಾರ್​ನ ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜೊಂದರಲ್ಲಿ ಬಿಕಾಂ ಓದುತ್ತಿದ್ದಾರೆ. ದಾಳಿ ನಡೆಸಿದ ಗಿರಿನಗರ ಪೊಲೀಸರು 51 ಗ್ರಾಂ ಎಕ್ಸ್ ಟಸಿ ಮಾತ್ರೆಗಳು, ವಿವಿಧ ಬಗೆಯ ಡ್ರಗ್ಸ್​ಗಳು, ಮೊಬೈಲ್ ಫೋನ್, ಕಾರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಕಾರ್ಮಿಕ ಅನುಮಾನಾಸ್ಪದ ಸಾವು: ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಸೂರಳ್ಳಿಯ ಫೌಲ್ಟ್ರಿ ಫಾರಂನಲ್ಲಿ ಕಾರ್ಮಿಕ ಅನುಮಾನಾಸ್ಪವಾಗಿ ಸಾವನ್ನಪ್ಪಿದ್ದಾರೆ. ನೇಣುಬಿಗಿದ ಸ್ಥಿತಿಯಲ್ಲಿ ಶ್ರೀನಿವಾಸ ಶೆಟ್ಟಿ(40) ಶವ ಪತ್ತೆಯಾಗಿದೆ. ಶ್ರೀನಿವಾಸ ಶೆಟ್ಟಿ ಉಮೇಶ್ ಎಂಬುವರಿಗೆ ಸೇರಿದ ಫೌಲ್ಟ್ರಿ ಫಾರಂನಲ್ಲಿ ಒಂದು ವರ್ಷದಿಂದ ಕೆಲಸ ಮಾಡುತ್ತಿದ್ದರು. ಸದ್ಯ ಈ ಪ್ರಕರಣ ನಂಜನಗೂಡು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:37 am, Mon, 23 May 22

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು