AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ ಮೂಲದ ಕುಖ್ಯಾತ ಕಳ್ಳ ಬೆಂಗಳೂರಲ್ಲಿ ನಿಗೂಢ ಸಾವು: ಸುಳಿವು ನೀಡಿತು ಟ್ಯಾಟೂ

ಬೆಂಗಳೂರಿನಲ್ಲಿ ಕುಖ್ಯಾತ ಕಳ್ಳನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಸಿಕ್ಕಿದೆ. ಅವನ ಮೇಲೆ 30ಕ್ಕೂ ಹೆಚ್ಚು ಕೇಸ್‌ಗಳಿವೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಮೊಬೈಲ್ ಫೋನ್ ಮೂಲಕ ಕೇರಳದಲ್ಲಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ ಪ್ರಕರಣದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸದ್ಯ ಸಾವು ನಿಗೂಢವಾಗಿದೆ.

ಕೇರಳ ಮೂಲದ ಕುಖ್ಯಾತ ಕಳ್ಳ ಬೆಂಗಳೂರಲ್ಲಿ ನಿಗೂಢ ಸಾವು: ಸುಳಿವು ನೀಡಿತು ಟ್ಯಾಟೂ
ಕೇರಳ ಮೂಲದ ಕುಖ್ಯಾತ ಕಳ್ಳ ಬೆಂಗಳೂರಲ್ಲಿ ನಿಗೂಢ ಸಾವು: ಸುಳಿವು ನೀಡಿತು ಟ್ಯಾಟೂ
ರಾಚಪ್ಪಾಜಿ ನಾಯ್ಕ್
| Edited By: |

Updated on:Feb 07, 2025 | 7:36 PM

Share

ಬೆಂಗಳೂರು, ಫೆಬ್ರವರಿ 07: ಆತ ಕುಖ್ಯಾತ ಕಳ್ಳ (Thief). ಅವನ ಮೇಲೆ 30ಕ್ಕೂ ಹೆಚ್ಚು ಕೇಸ್​ಗಳಿವೆ. ಕೇರಳ ಮೂಲದವನಾದ ಆತ ಬೆಂಗಳೂರಲ್ಲಿ ಮೃತಪಟ್ಟಿದ್ದ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿತ್ತು. ಅದೇ ಕೇಸ್ ಬೆಂಗಳೂರು ಪೊಲೀಸರಿಗೆ ತಲೆ‌ ಕೆಡಿಸಿದೆ. ಇದು ಕೊಲೆಯೋ ಇಲ್ಲಾ ಆತ್ಮಹತ್ಯೆಯೋ ಅನ್ನೋದೇ ನಿಗೂಢವಾಗಿದೆ.

ಅದು 2024 ರ ಜನವರಿ 24 ಕನಕಪುರ ರಸ್ತೆ ಕೋಣನಕುಂಟೆ ಕ್ರಾಸ್​ನಲ್ಲಿರುವ ಪ್ರತಿಷ್ಠಿತ ಫ್ಯಾಷನ್ ಫ್ಯಾಕ್ಟರಿ ಬೇಸ್ ಮೆಂಟ್​ನಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿತ್ತು. ತಕ್ಷಣ ಅಲರ್ಟ್ ಆದ ಕೋಣನಕುಂಟೆ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದರು. ಈ ವೇಳೆ ಹೀಗೆ ಸತ್ತವನು ಯಾರು ಅನ್ನೋದು ಗೊತ್ತಾಗಿದೆ. ಅವನೇ ವಿಷ್ಣು ಪ್ರಶಾಂತ್. ಮೂಲತಃ ಕೇರಳದವನಾಗಿದ್ದ ಈತ ಕುಖ್ಯಾತ ಕಳ್ಳನಾಗಿದ್ದ. ಈತನ ಮೇಲೆ ಕೇರಳ, ತಮಿಳುನಾಡು, ಕರ್ನಾಟಕ ಸೇರಿದಂತೆ ಹಲವೆಡೆ 30 ಕ್ಕೂ ಹೆಚ್ಚು ಕೇಸ್ ಗಳಿವೆ ಅನ್ನೋದು ಗೊತ್ತಾಗಿದೆ.

ಇದನ್ನೂ ಓದಿ: ಮಗನ ಸಾವಿಗೆ ಮಾಟ ಮಂತ್ರ ಆರೋಪ: ಒಡ ಹುಟ್ಟಿದ ಅಕ್ಕನಿಗೆ ವಿಷ ಹಾಕಿದ ತಮ್ಮ

ಇತ್ತೀಚೆಗೆ ಜೈಲಿನಿಂದ ಹೊರಬಂದಿದ್ದ ವಿಷ್ಣು ಪ್ರಶಾಂತ್ ಡಿಸಂಬರ್ 15 ರ ವರೆಗೆ ದಕ್ಷಿಣ ವಿಭಾಗದಲ್ಲಿ ಓಡಾಡಿರೋದು ಗೊತ್ತಾಗಿದೆ. ಅದಾದ ಬಳಿಕ ನಿಗೂಢವಾಗಿ ಸಾವನ್ನಪ್ಪಿದ್ದು, ಇದು ಕೊಲೆಯೋ ಇಲ್ಲಾ ಆಕಸ್ಮಿಕವಾಗಿ ಸಂಭವಿಸಿದ ಸಾವೋ ಅನ್ನೋದು ಇನ್ನೂ ನಿಗೂಢವಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಪೊಲೀಸರು ಕಾಯುತ್ತಿದ್ದಾರೆ.

ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಕೋಣನಕುಂಟೆ ಪೊಲೀಸರಿಗೆ ಆರೋಪಿ ಬಳಿ ಮೊಬೈಲ್ ಪತ್ತೆಯಾಗಿತ್ತು. ಮೊಬೈಲ್‌ ಮಾಲೀಕನ ಹುಡುಕಾಟ‌ ನಡೆಸಿದ್ದ ಪೊಲೀಸರು ಶಾಕ್ ಆಗಿದ್ದರು. ಯಾಕಂದ್ರೆ ಮೊಬೈಲ್‌ ಮಾಲೀಕ ಕೇರಳದಲ್ಲಿ ಪತ್ತೆಯಾಗಿದ್ದ. ಆತನ ವಿಚಾರಿಸಿದಾಗ ಮೊಬೈಲ್ ಕಳ್ಳತನವಾಗಿರೋದು ಗೊತ್ತಾಗಿದೆ. ತಕ್ಷಣ ಕೋಣನಕುಂಟೆ ಪೊಲೀಸರು ಕೇರಳ ಪೊಲೀಸರಿಗೆ ಮೃತನ ಫೋಟೋ ಕಳಿಸಿದ್ದರು. ಕೈಮೇಲಿದ್ದ ಟ್ಯಾಟೂ ವಿಷ್ಣು ಪ್ರಶಾಂತ್ ಅನ್ನೋದನ್ನ ಖಾತ್ರಿ ಪಡಿಸಿತ್ತು. ಆತನ ಹಿಸ್ಟರಿ‌ ಕೆದಕಿದಾಗ ಆತನ‌ ಮೇಲೆ‌ 30ಕ್ಕೂ ಹೆಚ್ಚು ಕಳ್ಳತನ ಕೇಸ್ ಇರೋದು ಪತ್ತೆಯಾಗಿದೆ.

ಸಾವಿನ ಬಳಿಕವೂ ಮನೆಯವರಿಗೆ ಬೇಡವಾದ ಕಳ್ಳ

ಕಳ್ಳನಾಗಿದ್ದ ವಿಷ್ಣು ಪ್ರಶಾಂತ್ ಸಾವಿನ ಬಳಿಕವೂ ಮನೆಯವರಿಗೆ ಬೇಡವಾಗಿದ್ದ. ಮೃತದೇಹ ಗುರುತು ಪತ್ತೆಗಾಗಿ ಪೊಲೀಸರು ಕುಟುಂಬಸ್ಥರನ್ನು ಸಂಪರ್ಕಿಸಿದ್ದಾರೆ. ಈ ವೇಳೆ ಕುಟುಂಬಸ್ಥರು ಬೆಂಗಳೂರಿಗೆ ಬರೋದಕ್ಕೆ ನಿರಾಕರಿಸಿದ್ದಾರೆ. ಬಲವಂತವಾಗೆ ಕರಿಸಿಕೊಂಡ ಪೊಲೀಸರಿಗೆ ಶಾಕ್ ಕಾದಿತ್ತು. ಗುರುತು ಪತ್ತೆ ಮಾಡಿ ಹೊರಟು ಹೋಗಿದ್ದರು. ಇತ್ತ ಕೋಣನಕುಂಟೆ ಪೊಲೀಸರೇ ಅಂತ್ಯಕ್ರಿಯೆ ಮಾಡಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆ ವರದಿಗಾಗಿ ಪೊಲೀಸರು ಕಾಯುತ್ತಿದ್ದು, ವರದಿ ಬಳಿಕ ಇದು ಕೊಲೆಯೋ‌ ಅಥವಾ ಆಕಸ್ಮಿಕ ಸಾವೋ ಅನ್ನೋದು ಗೊತ್ತಾಗಲಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:33 pm, Fri, 7 February 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್