AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10ನೇ ವಯಸ್ಸಿಗೆ ಕಳ್ಳತನಕ್ಕೆ ಎಂಟ್ರಿ; ಐಷಾರಾಮಿ ಜೀವನಕ್ಕೆ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಖದೀಮ ಅರೆಸ್ಟ್​

ಹತ್ತನೇ ವಯಸ್ಸಿಗೆ ಕಳ್ಳತನಕ್ಕೆ ಎಂಟ್ರಿ ಕೊಟ್ಟ ಖದೀಮನೊಬ್ಬ, ಐಷಾರಾಮಿ ಜೀವನಕ್ಕಾಗಿ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ. ಇದೀಗ ಆತನನ್ನ ಬಂಧಿಸಲಾಗಿದೆ. ರಫೀಕ್ (29) ಬಂಧಿತ ಆರೋಪಿ.

10ನೇ ವಯಸ್ಸಿಗೆ ಕಳ್ಳತನಕ್ಕೆ ಎಂಟ್ರಿ; ಐಷಾರಾಮಿ ಜೀವನಕ್ಕೆ ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದ ಖದೀಮ ಅರೆಸ್ಟ್​
ಆರೋಪಿ ರಫೀಕ್​
ಜಗದೀಶ ಬಿ.
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jul 23, 2023 | 11:10 AM

Share

ತುಮಕೂರು: ಹತ್ತನೇ ವಯಸ್ಸಿಗೆ ಕಳ್ಳತನಕ್ಕೆ ಎಂಟ್ರಿ ಕೊಟ್ಟ ಖದೀಮನೊಬ್ಬ, ಐಷಾರಾಮಿ ಜೀವನಕ್ಕಾಗಿ ಕಳ್ಳತನ (Theft)ವನ್ನೇ ವೃತ್ತಿ ಮಾಡಿಕೊಂಡಿದ್ದ. ಇದೀಗ ಆತನನ್ನ ಬಂಧಿಸಲಾಗಿದೆ. ರಫೀಕ್ (29) ಬಂಧಿತ ಆರೋಪಿ. ಮೂಲತಃ ತುಮಕೂರು(Tumakuru) ಮೂಲದವನಾದ ಇತ, ಕಳೆದ ಒಂದು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದನು. ಜೈಲಿಗೆ ಹೋದರೂ ಬುದ್ದಿ ಕಲಿಯದ ರಫೀಕ್​, ಮತ್ತೆ ತನ್ನ ಹಳೆ ಚಾಳಿಯನ್ನ ಮುಂದುವರೆಸಿದ್ದ. ಹೌದು ನೆಲಮಂಗಲ ಹಾಗೂ ರಾಜಾಜಿನಗರದಲ್ಲಿ ಕಳ್ಳತನ ಮಾಡಿದ್ದ ಇತನನ್ನ ಇದೀಗ ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.

ಬರೊಬ್ಬರಿ 20 ಪ್ರಕರಣಗಳಲ್ಲಿ ಜೈಲು ಸೇರಿದ್ದ ಆರೋಪಿ

ಇನ್ನು ಇತ ಬರೊಬ್ಬರಿ 20 ಪ್ರಕರಣಗಳಲ್ಲಿ ಜೈಲು ಸೇರಿದ್ದ. ಬೀಗ ಹಾಕಿದ ಮನೆ, ಅಂಗಡಿಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ. ಒಂದು ಅಂಗಡಿ ಕಳ್ಳತನ ಪ್ರಕರಣ ಕುರಿತು ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣದ ತನಿಖೆ ವೇಳೆ ಆರೋಪಿ ರಫೀಕ್​ ಸಿಕ್ಕಿಬಿದ್ದಿದ್ದಾನೆ. ಇನ್ನು ವಿಚಾರಣೆ ವೇಳೆ ನೆಲಮಂಗಲದ ಮೀನಿನ ಟೆಂಡರ್ ಮಾಡುವ ವ್ಯಕ್ತಿ ಮನೆಯ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಎರಡು ಪ್ರಕರಣ ಸಂಬಂಧ ಇತನಿಂದ22 ಲಕ್ಷ ಮೌಲ್ಯದ 409 ಗ್ರಾಂ ಚಿನ್ನ, ಹಾಗೂ 425 ಗ್ರಾಂ ಬೆಳ್ಳಿ, 189 ಗ್ರಾಂ ನಕಲಿ ಚಿನ್ನವನ್ನ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ:Tax Evasion: ತೆರಿಗೆ ಕಳ್ಳತನದಲ್ಲಿ ಎಚ್​ಡಿಎಫ್​ಸಿ ಲೈಫ್, ಬಜಾಜ್ ಅಲಾಯನ್ಸ್, ಆದಿತ್ಯ ಬಿರ್ಲಾ ಸನ್ ಲೈಫ್ ಸೇರಿ 15 ಕಂಪನಿಗಳು

ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿರುವ ಆರೋಪಿ

ಇನ್ನು ಆರೋಪಿ ರಫೀಕ್ ಕಳ್ಳತನವನ್ನೇ ವೃತ್ತಿಯನ್ನಾಗಿ ಮಾಡಿಕೊಂಡಿದ್ದು,​ ಬೆಂಗಳೂರು ಸೇರಿದಂತೆ ಹಲವು ಕಡೆ ಕಳ್ಳತನ ಕೃತ್ಯವೆಸಗಿದ್ದಾನೆ. ಕಳೆದ ತಿಂಗಳಷ್ಟೇ ಜೈಲಿನಿಂದ ಹೊರಬಂದಿದ್ದ ಇತ. ಮತ್ತೇ ಕಳ್ಳತನ ಕೃತ್ಯ ಎಸಗಿ ರಾಜಾಜಿನಗರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನ ಬಂಧಿಸಿ ತನಿಖೆ ನಡೆಸುತ್ತಿರುವ ರಾಜಾಜಿನಗರ ಪೊಲೀಸರು, ಇತನಿಂದ ಇನ್ನಷ್ಟು ಕಳ್ಳತನ ಪ್ರಕರಣಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ