ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಕಾರ್ ಗ್ಲಾಸ್ ಒಡೆದು 4.5 ಲಕ್ಷ ರೂ. ಕಳವು

ಕಳ್ಳರು ಬ್ಯಾಂಕ್​ನಿಂದ 2 ಬೈಕ್​ಗಳಲ್ಲಿ ಫಾಲೋ ಮಾಡಿದ್ದಾರೆ. ಸ್ನೇಹಿತನ ಭೇಟಿಗೆ ಬಂದಾಗ ಕಾರಿನಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸದ್ಯ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿ ಬಳಿಯೇ ಕಾರ್ ಗ್ಲಾಸ್ ಒಡೆದು 4.5 ಲಕ್ಷ ರೂ. ಕಳವು
ಕಾರ್​ ಗ್ಲಾಸ್ ಒಡೆದು ಕಳ್ಳರು ಹಣ ದೋಚಿ ಪರಾರಿಯಾಗಿದ್ದಾರೆ
Edited By: sandhya thejappa

Updated on: Jul 23, 2022 | 9:44 AM

ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿ ಬಳಿ ಲಕ್ಷ್ಮೀಶ್ ಎಂಬುವವರ ಕಾರ್ ಗ್ಲಾಸ್ (Car Glass) ಒಡೆದು ಕಳ್ಳರು ಸುಮಾರು 4.5 ಲಕ್ಷ ರೂ. ಹಣ ಕದ್ದು ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ (CC Camera) ಸೆರೆಯಾಗಿದೆ. ಲಕ್ಷ್ಮೀಶ್ ಮನೆ ಸಾಲದ ಇಎಂಐ ಕಟ್ಟಲು ಬ್ಯಾಂಕ್​ನಿಂದ ಹಣ ತಂದಿದ್ದರು. ಈ ವೇಳೆ ಕಳ್ಳರು ಬ್ಯಾಂಕ್​ನಿಂದ 2 ಬೈಕ್​ಗಳಲ್ಲಿ ಫಾಲೋ ಮಾಡಿದ್ದಾರೆ. ಸ್ನೇಹಿತನ ಭೇಟಿಗೆ ಬಂದಾಗ ಕಾರಿನಲ್ಲಿದ್ದ ಹಣವನ್ನು ದೋಚಿ ಪರಾರಿಯಾಗಿದ್ದಾರೆ. ಸದ್ಯ ಈ ಬಗ್ಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇಬ್ಬರು ಆರೋಪಿಗಳ ಬಂಧನ:
ತುಮಕೂರು: ಮನೆ ಕಳ್ಳತನ ಹಾಗೂ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಸಿಎಸ್ ಪುರ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಸಿಗೇಹಳ್ಳಿ ಗ್ರಾಮಸ ಗಿರೀಶ್ (35), ಚಿನ್ನಾಯಕನಪಾಳ್ಯ ಗ್ರಾಮದ ಗೋವಿಂದರಾಜು (28) ಬಂಧಿತರು. ಇಬ್ಬರು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮನೆಗಳನ್ನ ಟಾರ್ಗೆಟ್ ಮಾಡಿ ಚಿನ್ನಾಭರಣ ನಗದು ದೋಚಿ ಪರಾರಿಯಾಗುತ್ತಿದ್ದರು. ಬಂಧಿತರಿಂದ ಒಂದು ಲಕ್ಷ ರೂ. ನಗದು ಸೇರಿದಂತೆ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ಒಂದು ಬೈಕ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ: ChandraShekhar Azad Birth Anniversary: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ 116ನೇ ಜನ್ಮದಿನ; ಆಜಾದ್​ರ ಆಸಕ್ತಿದಾಯಿಕ ಸಂಗತಿಗಳು ಇಲ್ಲಿವೆ

ಇದನ್ನೂ ಓದಿ
ಸೂರ್ಯ ಬರ್ತ್​ಡೇಗೆ ಸಿಕ್ತು ಅತಿ ದೊಡ್ಡ ಗಿಫ್ಟ್​; ಇದನ್ನು ಎಂದಿಗೂ ಅವರು ಮರೆಯೋಕಾಗಲ್ಲ
Murder: ವ್ಯಕ್ತಿಯನ್ನು ಕೊಂದು, ಅವರದೇ ಮನೆಯ ಫ್ರಿಡ್ಜ್​ನಲ್ಲಿ ಶವವಿಟ್ಟು ಹೋದ ಹಂತಕರು!
ChandraShekhar Azad Birth Anniversary: ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಚಂದ್ರಶೇಖರ್ ಆಜಾದ್ 116ನೇ ಜನ್ಮದಿನ; ಆಜಾದ್​ರ ಆಸಕ್ತಿದಾಯಿಕ ಸಂಗತಿಗಳು ಇಲ್ಲಿವೆ
ವ್ಯಾಕ್ಸಿಂಗ್ ಬಳಿಕ ಮುಖದಲ್ಲಿ ದದ್ದುಗಳು ಮೂಡಿದರೆ ಏನು ಮಾಡಬೇಕು?

ವ್ಯಕ್ತಿಯ ಶವ ಪತ್ತೆ:
ಕಲಬುರಗಿ: ಕಡಣಿ ಬಳಿ ಹಳ್ಳದ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಶವ ಪತ್ತೆಯಾಗಿದೆ. ಟ್ರ್ಯಾಕ್ಟರ್​ನಲ್ಲಿದ್ದ ಇಬ್ಬರು ನಿನ್ನೆ ರಾತ್ರಿ ಕೊಚ್ಚಿ ಹೋಗಿದ್ದರು. ಇಬ್ಬರ ಪೈಕಿ ಚಾಲಕ ಮುಳ್ಳು ಕಂಟಿ ಹಿಡಿದು ಬಚಾವ್ ಆಗಿದ್ದರು. 1 ಕಿ.ಮೀ. ದೂರದಲ್ಲಿ ಇನ್ನೊರ್ವ ವ್ಯಕ್ತಿಯ ಶವ ಪತ್ತೆಯಾಗಿದೆ.

ಬಾಂಗ್ಲಾದೇಶದ ನಾಲ್ವರು ಪ್ರಜೆಗಳು ಪತ್ತೆ:
ಚಿಕ್ಕಮಗಳೂರಿನಲ್ಲಿ ಬಾಂಗ್ಲಾದೇಶದ ನಾಲ್ವರು ಪ್ರಜೆಗಳು ಪತ್ತೆಯಾಗಿದ್ದು, 3 ವರ್ಷಗಳಿಂದ‌ ಅಕ್ರಮವಾಗಿ ವಾಸಿಸುತ್ತಿದ್ದ ನಾಲ್ವರನ್ನ ಬಂಧಿಸಲಾಗಿದೆ. ಅಬ್ದುಲ್, ರಹುಲ್, ಮೋಮಿನ್ ಅಲಿ, ಸಲೀಂ ಬಂಧಿತರು. ಎನ್.ಆರ್.ಪುರ ತಾಲೂಕಿನ ಸಿಂಸೆಬೋವಿ ಕಾಲೋನಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಪ್ರಜೆಗಳು ದಾಖಲೆಗಳಿಂದ ಬಾಂಗ್ಲಾದೇಶದವರು ಎನ್ನುವುದು ಖಚಿತವಾಗಿದೆ.

ಇದನ್ನೂ ಓದಿ: Monkeypox: ಮಕ್ಕಳಿಗೂ ವಕ್ಕರಿಸಿದ ಮಂಕಿಪಾಕ್ಸ್; ಯುಎಸ್​ನಲ್ಲಿ ಅಂಬೆಗಾಲಿಡುವ ಮಗುವಿನಲ್ಲಿ ಮಂಕಿಪಾಕ್ಸ್ ಪತ್ತೆ

Published On - 9:24 am, Sat, 23 July 22

Web contact

TV9 Kannada

Read More
Follow Us