AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಎಸ್​ಎಸ್​ ಕಂಟ್ರೋಲ್​ನಲ್ಲಿ ಈ ಸರ್ಕಾರ ನಡೆಯುತ್ತಿದೆ, ಬೊಮ್ಮಾಯಿ ಸಾಹೇಬರ ಕೈಯಲ್ಲೇನಿಲ್ಲ: ಪ್ರಿಯಾಂಕ್ ಖರ್ಗೆ

ಬೊಮ್ಮಾಯಿ ಸಾಹೇಬರ ಕಂಟ್ರೋಲ್​ನಲ್ಲಿ ಈ ಸರ್ಕಾರ ಇಲ್ಲ. ಕೇಶವಕೃಪ ಕಂಟ್ರೋಲ್​ನಲ್ಲಿ ಈ ಸರ್ಕಾರ ನಡೆಯುತ್ತಿದೆ ಎಂದು ನಗರದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದರು.

ಆರ್​ಎಸ್​ಎಸ್​ ಕಂಟ್ರೋಲ್​ನಲ್ಲಿ ಈ ಸರ್ಕಾರ ನಡೆಯುತ್ತಿದೆ, ಬೊಮ್ಮಾಯಿ ಸಾಹೇಬರ ಕೈಯಲ್ಲೇನಿಲ್ಲ: ಪ್ರಿಯಾಂಕ್ ಖರ್ಗೆ
ಮಾಜಿ ಸಚಿವ ಪ್ರಿಯಾಂಕ್ ಖರ್ಗೆ
TV9 Web
| Edited By: |

Updated on:Nov 05, 2022 | 3:18 PM

Share

ಬೆಂಗಳೂರು: ಬೊಮ್ಮಾಯಿ ಸಾಹೇಬರ ಕಂಟ್ರೋಲ್​ನಲ್ಲಿ ಈ ಸರ್ಕಾರ ಇಲ್ಲ. ಕೇಶವಕೃಪ ಕಂಟ್ರೋಲ್​ನಲ್ಲಿ ಈ ಸರ್ಕಾರ ನಡೆಯುತ್ತಿದೆ ಎಂದು ನಗರದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ಮಾಡಿದರು.​ ಅವರ ಕಂಟ್ರೋಲ್​ನಲ್ಲಿ ಇದ್ದಿದ್ದರೆ ಸ್ಪಂದಿಸುತ್ತಿದ್ದರು. ಕ್ಯಾಬಿನೆಟ್​ ಸಹ ಸಿಎಂ ಬೊಮ್ಮಾಯಿ ಕಂಟ್ರೋಲ್​ನಲ್ಲಿ ಇಲ್ಲ. ಆರ್​ಎಸ್​ಎಸ್​ ಕಂಟ್ರೋಲ್​ನಲ್ಲಿ ಎಲ್ಲ ನಡೆಯುತ್ತಿದೆ. ಸುಧಾಕರ್​ಗೆ ಸ್ವಲ್ಪವೂ ಮಾನವೀಯತೆ ಇಲ್ಲ. ಈ ಬಿಜೆಪಿ ಸರ್ಕಾರಕ್ಕೆ ಭ್ರಷ್ಟಾಚಾರದ ಸೋಂಕು ತಗುಲಿದೆ. ಬಿಮ್ಸ್ ಸಾವು ಪ್ರಕರಣ, ಕೋವಿಡ್ ಪ್ರಕರಣ ಎಲ್ಲ ನಡೆದರೂ ಸುಧಾಕರ ರಾಜೀನಾಮೆ ಕೊಡಬೇಕಿತ್ತು. ಇಂಥವರು ರಾಜೀನಾಮೆ ಕೊಡುತ್ತಾರೆ ಈಗ ಅಂತ ನಿರೀಕ್ಷೆ ಮಾಡಬಹುದಾ? ಮೂರು ವರ್ಷದಲ್ಲಿ ಏನು ನಿಮ್ಮ ಸಾಧನೆ ಎಂದು ಕಿಡಿಕಾರಿದರು.

ಸಸ್ಪೆಂಡ್​ ಮಾಡಿದರೆ ಸಾಲದು ವೈದ್ಯರ ಲೈಸೆನ್ಸ್​ ರದ್ದು ಮಾಡಬೇಕು: ಪ್ರಿಯಾಂಕ್ ಖರ್ಗೆ 

ಜಿಲ್ಲಾಸ್ಪತ್ರೆಯ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ, ಶಿಶುಗಳ ಸಾವು ಕೇಸ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು. ಸರ್ಕಾರ ಮಾನವೀಯತೆ ಕಳೆದುಕೊಂಡಿದೆ. ಬಿಜೆಪಿ ನಾಯಕರಿಗೆ ದುಡ್ಡು ಗಳಿಸುವುದು ಮಾತ್ರ ಗೊತ್ತಿದೆ. PSI ಅಭ್ಯರ್ಥಿಗಳು ಸಚಿವರ ಬಳಿ ಹೋದರೆ DySP ಹೊಡೀತಾರೆ. ಆಸ್ಪತ್ರೆಯಲ್ಲಿ ದುಡ್ಡು ಕೊಡಿ ಅಂತಾ ಹಿಂಸೆ ಕೊಟ್ಟು ಹೊರ ಹಾಕುತ್ತಾರೆ. ತುಮಕೂರಿನಲ್ಲಿ ನಡೆದ ಘಟನೆ ಸರ್ಕಾರದ ಪ್ರಾಯೋಜಿತ ಕೊಲೆ. ಸಸ್ಪೆಂಡ್​ ಮಾಡಿದರೆ ಸಾಲದು ವೈದ್ಯರ ಲೈಸೆನ್ಸ್​ ರದ್ದು ಮಾಡಬೇಕು. ದುಡ್ಡು ಪಡೆದು ಪೋಸ್ಟಿಂಗ್​ ಆಗುತ್ತಿರುವುದಕ್ಕೆ ಹೀಗೆ ಆಗುತ್ತಿದೆ. ಚಾಮರಾಜನಗರದಲ್ಲೂ ದಾಖಲೆ ತಿದ್ದಿ ಯಾರೂ ಸತ್ತಿಲ್ಲ ಅಂದರು.  ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿಗೆ ಈವರೆಗೆ 21 ಜನ ಸತ್ತಿದ್ದಾರೆ. ಇದನ್ನು ಪ್ರಶ್ನೆ ಮಾಡಿದರೆ ನಿಮ್ಮ ಸರ್ಕಾರದಲ್ಲಿ ಸತ್ತಿಲ್ವಾ ಅಂತಾರೆ ಎಂದು ಹೇಳಿದರು.

ಘಟನೆ ಹಿನ್ನೆಲೆ:

ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮೂವರು ಬಲಿ (death) ಯಾಗಿರುವಂತಹ ಘಟನೆ ಜಿಲ್ಲೆಯ ಭಾರತಿನಗರದ ಆಂಜನೇಯ ದೇಗುಲ ಬಳಿ ನಡೆದಿದೆ. ಬಾಣಂತಿ ಕಸ್ತೂರಿ(30), ಅವಳಿ ಮಕ್ಕಳು ಮೃತಪಟ್ಟಿದ್ದಾರೆ. ತಮಿಳುನಾಡು ಮೂಲದ ಕಸ್ತೂರಿ 1 ತಿಂಗಳಿಂದ ಓರ್ವ ಪುತ್ರಿ ಜತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಗರ್ಭಿಣಿ ಕಸ್ತೂರಿಗೆ ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಸ್ಥಳೀಯರು ಆಟೋದಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆತಂದಿದ್ದರು. ತಾಯಿ ಕಾರ್ಡ್​, ಆಧಾರ್​ ಕಾರ್ಡ್​ ಇಲ್ಲವೆಂದು ದಾಖಲಿಸಿಕೊಳ್ಳಲು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರಾಕರಿಸಿದ್ದು, ನಾವು ಚಿಕಿತ್ಸೆ ನೀಡಲ್ಲ ಎಂದು ವೈದ್ಯರು ಕೂಡ ನಿರಾಕರಿಸಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಸಿಬ್ಬಂದಿ ಹೇಳಿದ್ದು, ಬೆಂಗಳೂರಿಗೆ ತೆರಳಲು ಹಣವಿಲ್ಲದೆ ಕಸ್ತೂರಿ ಮನೆಗೆ ಹಿಂದಿರುಗಿದ್ದರು.

ನ.3ರಂದು ಮುಂಜಾನೆ ಒಂದು ಮಗುವಿಗೆ ಜನ್ಮ ನೀಡಿದ್ದು, ಮತ್ತೊಂದು ಮಗುವಿಗೆ ಜನ್ಮನೀಡುವಾಗ ರಕ್ತಸ್ರಾವವಾಗಿ ಅವಳಿ ಗಂಡು ಮಕ್ಕಳು, ತಾಯಿ ಕಸ್ತೂರಿ(30) ಸಾವನ್ನಪ್ಪಿದ್ದರು. ತಾಯಿ, ಮಕ್ಕಳ ಸಾವಿಗೆ ಜಿಲ್ಲಾಸ್ಪತ್ರೆ ವೈದ್ಯರೇ ಕಾರಣವೆಂದು ಸ್ಥಳೀಯರು ಆರೋಪಿಸಿದ್ದು, ತುಮಕೂರಿನ ಎನ್​ಇಪಿಎಸ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:14 pm, Sat, 5 November 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ