AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಡೋಸ್ ಲಸಿಕೆ ಪಡೆದವರಿಗೂ ಕೊರೊನಾ ದೃಢ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

2 ಡೋಸ್ ಲಸಿಕೆ ಪಡೆದವರಿಗೂ ಕೊರೊನಾ ದೃಢಪಟ್ಟಿದೆ. ಆದರೆ ಅವರಲ್ಲಿ ಲಕ್ಷಣಗಳು ಮತ್ತು ಸೋಂಕಿನ ತೀವ್ರತೆ ಕಡಿಮೆ ಇರುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

2 ಡೋಸ್ ಲಸಿಕೆ ಪಡೆದವರಿಗೂ ಕೊರೊನಾ ದೃಢ: ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ
TV9 Web
| Edited By: |

Updated on:Aug 14, 2021 | 11:22 AM

Share

ಬೆಂಗಳೂರು: ಸದ್ಯ ಕೊವಿಡ್ ಪ್ರಕರಣಗಳು ಸ್ವಲ್ಪ ಕಡಿಮೆಯಾಗಿದೆ. ಆದರೂ ಎಲ್ಲಾ ಪರಿಸ್ಥಿತಿ ನಿಭಾಯಿಸಲು ಸಿದ್ಧರಾಗಿರಬೇಕು. ಹೀಗಾಗಿ ಸರ್ಕಾರ ಕಠಿಣ ನಿರ್ದೇಶನಗಳನ್ನು ನೀಡಿದೆ. ಕೊವಿಡ್ (Covid 19) ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯವಿದೆ. ಏಕೆಂದರೆ 2 ಡೋಸ್ ಲಸಿಕೆ ಪಡೆದವರಿಗೂ ಕೊರೊನಾ ದೃಢಪಟ್ಟಿದೆ. ಆದರೆ ಅವರಲ್ಲಿ ಲಕ್ಷಣಗಳು ಮತ್ತು ಸೋಂಕಿನ ತೀವ್ರತೆ ಕಡಿಮೆ ಇರುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ಶಾಲೆ ಆರಂಭದ ಬಗ್ಗೆ ತಜ್ಞರ ಜತೆ ಚರ್ಚಿಸಿ ಸಿಎಂ ತೀರ್ಮಾನ ಶಾಲೆ ಆರಂಭದ ವಿಚಾರವಾಗಿ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ, ಆಗಸ್ಟ್ 23ರಿಂದ ಹಂತ ಹಂತವಾಗಿ ಶಾಲೆ ಆರಂಭಕ್ಕೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಈ ಸಂಬಂಧ ತಜ್ಞರ ಜತೆ ಚರ್ಚಿಸಿ ಸಿಎಂ ತೀರ್ಮಾನ ಮಾಡಲಾಗುತ್ತದೆ. ಶಿಕ್ಷಕರಿಗೆ ವ್ಯಾಕ್ಸಿನ್ ಪಡೆದಿರಬೇಕೆಂದು ಷರತ್ತು ಹಾಕಲಾಗಿದೆ. ಮಕ್ಕಳಿಗೆ ಇನ್ನೂ ವ್ಯಾಕ್ಸಿನ್ ನೀಡುವ ನಿಯಮ ಬಂದಿಲ್ಲ. ಮುಂದೆ ಮಕ್ಕಳಿಗೆ ವ್ಯಾಕ್ಸಿನ್ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 400ಕ್ಕಿಂತ ಕಡಿಮೆ ಪ್ರಕರಣಗಳಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಆದರೆ ಬೆಂಗಳೂರಿನಲ್ಲಿ ನಿರ್ಬಂಧಗಳು ಮುಂದುವರಿಯಬೇಕು. ನೈಟ್ ಕರ್ಫ್ಯೂ ಜಾರಿಯಲ್ಲಿದೆ, ಅದು ಮುಂದುವರಿಯುತ್ತಿದೆ. ಸಭೆ, ಸಮಾರಂಭಗಳಿಗೆ ಇರುವ ನಿರ್ಬಂಧ ಮುಂದುವರಿಕೆಯಾಗಲಿದೆ. ದೇವಸ್ಥಾನಗಳ ಭೇಟಿಗೆ ಈಗಾಗಲೇ ನಿರ್ಬಂಧ ಜಾರಿ ಇದೆ. ಜನರು ಇದನ್ನು ಪಾಲಿಸಿದರೆ ಮತ್ತಷ್ಟು ನಿರ್ಬಂಧ ಅಗತ್ಯವಿಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸದ್ಯಕ್ಕೆ ವಿಕೇಂಡ್ ಕರ್ಫ್ಯೂ ಜಾರಿ ಅನುಮಾನ ಬೆಂಗಳೂರಿನಲ್ಲಿ ವಿಕೇಂಡ್ ಕರ್ಫ್ಯೂ ಜಾರಿ ಅಷ್ಟು ಸುಲಭವಲ್ಲ. ವಿಕೇಂಡ್ ಕರ್ಫ್ಯೂ ಜಾರಿ ಮಾಡಿದರೆ, ಸರ್ಕಾರಕ್ಕೆ ದೊಡ್ಡ ಹೊಡೆತ ಬೀಳುವ ಆತಂಕ ಶುರುವಾಗಿದೆ. ಹೀಗಾಗಿ ಸದ್ಯಕ್ಕೆ ವಿಕೇಂಡ್ ಕರ್ಫ್ಯೂ ಜಾರಿ ಅನುಮಾನವಾಗಿದೆ. ಸೋಂಕಿನ ಪ್ರಮಾಣ ಮತ್ತಷ್ಟು ಏರಿಕೆ ಆದರೆ, ವಿಕೇಂಡ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ.

ಪಾಸಿಟಿವಿಟಿ ರೇಟ್ ಶೇ. 2 ರಷ್ಟು ಬಂದಲ್ಲಿ ಮಾತ್ರ ವಿಕೇಂಡ್ ಕರ್ಫ್ಯೂ ಜಾರಿ ಮಾಡುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕೆಲ ವಾಣಿಜ್ಯ ಚಟುವಟಿಕೆಗಳು, ವ್ಯಾಪಾರ ವಹಿವಾಟು ವಿಕೇಂಡ್ ನಂಬಿಕೊಂಡಿದ್ದು, ಸದ್ಯಕ್ಕೆ ವಿಕೇಂಡ್ ಕರ್ಫ್ಯೂ ಜಾರಿ ಅಸಾಧ್ಯ. ಅಲ್ಲದೆ ಕೆಲ ಅಧಿಕಾರಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ಬಂದಿದ್ದು, ಹಬ್ಬ ಹರಿದಿನಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡರೆ ಸಾಕು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಕೊರೊನಾ ಮೂರನೇ ಅಲೆಯ ಆತಂಕದ ನಡುವೆಯೂ ಶಾಲೆ ಓಪನ್; ಇಂದೇ ನಿರ್ಧಾರವಾಗುತ್ತೆ ಶಾಲೆಗಳ ಭವಿಷ್ಯ

Lockdown: ನಿಯಂತ್ರಣಕ್ಕೆ ಬಾರದ ಕೊರೊನಾ; ಬೆಂಗಳೂರಿಗೆ ಭಾಗಶಃ ಬೀಗ ಹಾಕಲು ಬಹುತೇಕ ತಯಾರಿ – ಇಂದು ಸಿಎಂ ಸಭೆ

Published On - 10:45 am, Sat, 14 August 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ