AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು

ಬೆಂಗಳೂರು: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವಿಗೀಡಾಗಿದ್ದು, ಮಾಲಿನ್ಯವೇ ಇದಕ್ಕೆ ಕಾರಣವೆಂದು ಸ್ಥಳೀಯರು ದೂರಿದ್ದಾರೆ. ಸತ್ತ ಮೀನುಗಳಿಂದ ದುರ್ವಾಸನೆ ಬರುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು, ಕೆರೆ ಸಂರಕ್ಷಣಾ ಹೋರಾಟಗಾರರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮತ್ತು ಸ್ಥಳೀಯ ಅಧಿಕಾರಿಗಳಿಗೆ ಶನಿವಾರ ದೂರು ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಸ್ಯಾಂಪಲ್ ಶೇಖರಿಸಿಕೊಂಡು ಹೋಗಿದ್ದಾರೆ. ಎಲೆಕ್ರ್ಟಾನಿಕ್​ ಸಿಟಿ ಚಂದಾಪುರದ ಬಳಿಯಿರುವ ಸುವಿಶಾಲ ಮುತ್ತನಲ್ಲೂರು ಕೆರೆ ಸದಾ ನೀರಿನಿಂದ ತುಂಬಿರುತ್ತದೆ. ಆದರೆ ಇದಕ್ಕೆ ಜಿಗಣಿ, […]

Oxygen Shortage: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು
Oxygen Shortage: ಮೊತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವು, ಮಾಲಿನ್ಯವೇ ಇದಕ್ಕೆ ಕಾರಣವೆಂದ ಸ್ಥಳೀಯರು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 17, 2021 | 4:16 PM

Share

ಬೆಂಗಳೂರು: ಮುತ್ತನಲ್ಲೂರು ಕೆರೆಯಲ್ಲಿ ನೂರಾರು ಮೀನುಗಳ ಸಾವಿಗೀಡಾಗಿದ್ದು, ಮಾಲಿನ್ಯವೇ ಇದಕ್ಕೆ ಕಾರಣವೆಂದು ಸ್ಥಳೀಯರು ದೂರಿದ್ದಾರೆ. ಸತ್ತ ಮೀನುಗಳಿಂದ ದುರ್ವಾಸನೆ ಬರುತ್ತಿದ್ದಂತೆ ಎಚ್ಚೆತ್ತ ಸ್ಥಳೀಯರು, ಕೆರೆ ಸಂರಕ್ಷಣಾ ಹೋರಾಟಗಾರರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮತ್ತು ಸ್ಥಳೀಯ ಅಧಿಕಾರಿಗಳಿಗೆ ಶನಿವಾರ ದೂರು ನೀಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಸ್ಯಾಂಪಲ್ ಶೇಖರಿಸಿಕೊಂಡು ಹೋಗಿದ್ದಾರೆ. ಎಲೆಕ್ರ್ಟಾನಿಕ್​ ಸಿಟಿ ಚಂದಾಪುರದ ಬಳಿಯಿರುವ ಸುವಿಶಾಲ ಮುತ್ತನಲ್ಲೂರು ಕೆರೆ ಸದಾ ನೀರಿನಿಂದ ತುಂಬಿರುತ್ತದೆ. ಆದರೆ ಇದಕ್ಕೆ ಜಿಗಣಿ, ಬೊಮ್ಮಸಂದ್ರ ಕೈಗಾರಿಕಾ ಪ್ರದೇಶ ಅಂಟಿಕೊಂಡಿರುವುದರಿಂದ ಕೈಗಾರಿಕೆಗಳ ತ್ಯಾಜ್ಯ, ಮಲಿನ ಪದಾರ್ಥಗಳು ಸೀದಾ ಕೆರೆಯನ್ನು ತುಂಬುತ್ತಿವೆ. ಚಂದಾಪುರ ಕೆರೆಯಿಂದಲೂ ನೀರು ಹರಿದುಬರುತ್ತಿದೆ. ಆದರೆ ಚಂದಾಪುರ ಕೆರೆಯೂ ಕೈಗಾರಿಕೆಗಳಿಂದಾಗಿ ತೀವ್ರವಾಗಿ ಮಲಿನಗೊಂಡಿದೆ ಅನ್ನುತ್ತಾರೆ ಸ್ಥಳೀಯರು.

ಮುತ್ತನಲ್ಲೂರು ಕೆರೆಯಲ್ಲಿಯೂ Oxygen Shortage!

thousands of dead fish float Muthanallur lake in South Bangalore localites blame industrial pollution

ಮುತ್ತನಲ್ಲೂರು ಕೆರೆಯಲ್ಲಿಯೂ Oxygen Shortage

ಅಧಿಕಾರಿಗಳಿಗೆ ಎಷ್ಟೇ ಹೇಳಿದರೂ ಇದರ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ಆಸುಪಾಸಿನ ಜನ ನಾವು ಮಾತ್ರ ಈ ಕೆಟ್ಟ ವಾಸನೆ ಸೇವಿಸಿಕೊಂಡು ಬದುಕು ನಡೆಸಬೇಕಿದೆ ಎನ್ನುತ್ತಾರೆ ಸ್ಥಳೀಯ ಜನ. ನೀರಿನಲ್ಲಿ ಆಕ್ಸಿಜನ್​ ಪ್ರಮಾಣ (dissolved oxygen -DO) ಕಡಿಮೆಯಾಗಿ ಮೀನುಗಳು ಸಾಮೂಹಿಕವಾಗಿ ಸತ್ತಿವೆ. ಜೊತೆಗೆ ಸಮೀಪದ ಕೈಗಾರಿಕೆಗಳಿಂದ ಮತ್ತು ಕೈಷಿ ಭೂಮಿಯಿಂದ ತ್ಯಾಜ್ಯಗಳು ಮತ್ತು ಕೀಟನಾಶಕಗಳು ಅಧಿಕ ಪ್ರಮಾಣದಲ್ಲಿ ಹರಿದುಬಂದು ಇಂತಹ ಪರಿಸ್ಥಿತಿ ಉದ್ಭವಿಸಿದೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧಿಕಾರಿಗಳು ವಿಶ್ಲೇಷಿಸಿದ್ದಾರೆ.

ಕಳೆದ ಎರಡು ದಶಕಗಳಿಂದ ಕೆಂಪೇಗೌಡರ ನಾಡು ಅಗಾಧವಾಗಿ ಬೆಳೆದುಬಿಟ್ಟಿದ್ದು, ಸ್ಥಳೀಯ ಕೈಗಾರಿಕೆಗಳು ಹೊರಸೂಸುವ ಮಲಿನಕಾರಕ ತ್ಯಾಜ್ಯಗಳಿಗೆ ಬೆಂಗಳೂರಿನಲ್ಲಿರುವ ನೂರಾರು ಕೆರೆಗಳು ಆಶ್ರಯತಾಣವಾಗಿವೆ. ಇದು ಕೆರೆಯಂಗಳದಲ್ಲಿನ ಜೀವವೈವಿಧ್ಯಕ್ಕೆ ಮಾರಕವಾಗಿದೆ. ಇದರ ಪರಿಣಾಮವೇ ಹೀಗೆ ಸಾವಿರಾರು ಮೀನುಗಳ ಮಾರಣವಾಗುತ್ತಿವೆ ಅನ್ನುತ್ತಾರೆ ಸ್ಥಳೀಯರು.

Muthanallur lake in South Bengaluru 1

ಚಂದಾಪುರ ಕೆರೆಯೂ ಕೈಗಾರಿಕೆಗಳಿಂದಾಗಿ ತೀವ್ರವಾಗಿ ಮಲಿನಗೊಂಡಿದೆ ಅನ್ನುತ್ತಾರೆ ಸ್ಥಳೀಯರು.

(thousands of dead fish float Muthanallur lake in South Bangalore localites blame industrial pollution)

ಆನೇಕಲ್: ಮದ್ದೂರಮ್ಮ ಜಾತ್ರೆಗಾಗಿ ಕೆರೆ ಶುದ್ಧಿ ಮಾಡುವಾಗ ಶಿವಲಿಂಗ ಪತ್ತೆ, ಶಿವಲಿಂಗ ನೋಡಲು ಮುಗಿಬಿದ್ದ ಜನ

Published On - 4:08 pm, Mon, 17 May 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು