AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸಿಬಿ ದಾಳಿಗೊಳಗಾಗಿದ್ದ ಬಿಡಿಎ ಅಧಿಕಾರಿಗಳನ್ನು ಆರೋಪ ಮುಕ್ತ ಮಾಡುವುದಾಗಿ 10 ಲಕ್ಷ ರೂ ವಂಚನೆ, ಮೂವರು ಅರೆಸ್ಟ್

ಆರೋಪಿಗಳು, ಬಿಡಿಎ ಕೇಂದ್ರ ಕಚೇರಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿಕೊಂಡಿದ್ದಾರೆ. ದಾಳಿ ನಡೆಸಿರೋ ಎಸಿಬಿ ಅಧಿಕಾರಿಗಳು ಗೊತ್ತು 10 ಲಕ್ಷ ಕೊಟ್ಟರೆ ಆರೋಪ ಮುಕ್ತಗೊಳಿಸಬಹುದು ಎಂದು ನಂಬಿಸಿದ್ದಾರೆ. ಆರೋಪಿಗಳು, ಸದಾಶಿವನಗರದ ಕಾಫಿ ಡೇ ಒಂದರಲ್ಲಿ ಮೂವರು ಅಧಿಕಾರಿಗಳಿಂದ ಒಟ್ಟು10 ಲಕ್ಷ ಪಡೆದಿದ್ದಾರೆ.

ಎಸಿಬಿ ದಾಳಿಗೊಳಗಾಗಿದ್ದ ಬಿಡಿಎ ಅಧಿಕಾರಿಗಳನ್ನು ಆರೋಪ ಮುಕ್ತ ಮಾಡುವುದಾಗಿ 10 ಲಕ್ಷ ರೂ ವಂಚನೆ, ಮೂವರು ಅರೆಸ್ಟ್
ಪ್ರಾತಿನಿಧಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Mar 17, 2022 | 3:29 PM

Share

ಬೆಂಗಳೂರು: ಎಸಿಬಿ ಆಫೀಸರ್ಸ್ ಜೊತೆ ಮಾತುಕತೆ ಮಾಡುವುದಾಗಿ ನಂಬಿಸಿ ಹೆಚ್ಎಸ್ಆರ್ ಲೇಔಟ್ನ ಬಿಡಿಎ ಸಹಾಯಕ ಇಂಜಿನಿಯರ್ ಅರವಿಂದ್ ಎಂಬುವವರಿಗೆ ಮೋಸ ಮಾಡಿರುವ ಘಟನೆ ನಡೆದಿದೆ. ಘಟನೆ ಸಂಬಂಧ ಹೈಗ್ರೌಂಡ್ಸ್ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರವೀಣ್, ಚೇತನ್, ಮನೋಜ್ ಎಂಬ ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು ಮತ್ತೊಬ್ಬ ಆರೋಪಿ ವಿಜಯ್ ಕುಮಾರ್ಗಾಗಿ ಹುಡುಕಾಟ ನಡೆಯುತ್ತಿದೆ.

ಕಳೆದ ನವೆಂಬರ್ 19ರಂದು ಬಿಡಿಎ ಕಚೇರಿಗಳ ಮೇಲೆ ಎಸಿಬಿ ದಾಳಿ ನಡೆದಿತ್ತು. ಈ ವೇಳೆ ಹಲವು ಬಿಡಿಎ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿತ್ತು. ಅಸಿಸ್ಟೆಂಟ್ ಎಂಜಿನಿಯರ್ ಅರವಿಂದ್ ವಿರುದ್ಧವೂ ಆರೋಪ ಕೇಳಿ ಬಂದಿತ್ತು. ಕಾಡುಬೀಸನಹಳ್ಳಿಯ 1.18ಎಕರೆ ಜಮೀನಿನ ಕಡತದ ವಿಚಾರವಾಗಿ ಅರವಿಂದ್ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. ಎಸಿಬಿ ಅಧಿಕಾರಿಗಳು ಇದಕ್ಕೆ ಸಂಬಂಧಪಟ್ಟ ದಾಖಲೆಗಳನ್ನ ವಶಕ್ಕೆ ಪಡೆದಿದ್ದರು. ಹೀಗಾಗಿ ಆರೋಪ ಮುಕ್ತರಾಗುವ ಬಗ್ಗೆ ಅರವಿಂದ್ ಮೇಲಾಧಿಕಾರಿಗಳ ಜೊತೆ ಚರ್ಚಿಸಿದ್ದರು. ಮೇಲಾಧಿಕಾರಿಗಳಾದ ಮಹದೇವ ಮತ್ತು ಗೋವಿಂದರಾಜು ಜೊತೆ ಮಾತುಕತೆ ನಡೆಸಿದ್ದರು. ಇದೇ ಸಂದರ್ಭದಲ್ಲಿ ಮೂವರಿಗೂ ಪರಿಚಯವಾಗಿದ್ದ ಚೇತನ್ ಹಾಗೂ ಪ್ರವೀಣ್ ಎಂಬ ಆರೋಪಿಗಳು, ಬಿಡಿಎ ಕೇಂದ್ರ ಕಚೇರಿಯಲ್ಲಿ ಕೆಲಸ ಮಾಡ್ತಿರೋದಾಗಿ ಹೇಳಿಕೊಂಡಿದ್ದಾರೆ. ದಾಳಿ ನಡೆಸಿರೋ ಎಸಿಬಿ ಅಧಿಕಾರಿಗಳು ಗೊತ್ತು 10 ಲಕ್ಷ ಕೊಟ್ಟರೆ ಆರೋಪ ಮುಕ್ತಗೊಳಿಸಬಹುದು ಎಂದು ನಂಬಿಸಿದ್ದಾರೆ.

ಆರೋಪಿಗಳು, ಸದಾಶಿವನಗರದ ಕಾಫಿ ಡೇ ಒಂದರಲ್ಲಿ ಮೂವರು ಅಧಿಕಾರಿಗಳಿಂದ ಒಟ್ಟು10 ಲಕ್ಷ ಪಡೆದಿದ್ದಾರೆ. ಹಣ ಪಡೆದು ಕೆಲಸ ಮಾಡಿಕೊಡದಿದ್ದಾಗ ಅಸಿಸ್ಟೆಂಟ್ ಎಂಜಿನಿಯರ್ ಅರವಿಂದ್ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಈ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ‘ಕುಟುಂಬಸ್ಥರ ಜತೆ ಚರ್ಚಿಸಿ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವ ದಿನಾಂಕ ಘೋಷಿಸುತ್ತೇವೆ’; ಬಸವರಾಜ ಬೊಮ್ಮಾಯಿ

ನೀವು ವಕೀಲರಾಗಿ ಹೀಗೆ ಹೇಳಬಾರದು: ಸಿದ್ದರಾಮಯ್ಯಗೆ ಜಗದೀಶ್ ಶೆಟ್ಟರ್, ಸಿಟಿ ರವಿ ತರಾಟೆ

Published On - 3:27 pm, Thu, 17 March 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?