AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ಕೊಡಿಸುವುದಾಗಿ ಜಾಹೀರಾತು ನೀಡಿ ಜನರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್

ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಿದ್ದ ಆರೋಪಿಗಳು ಸಾಲ ಕೊಡಿಸುವುದಾಗಿ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಿದ್ದರು. ಬಳಿಕ ಜಾಹೀರಾತು ನೋಡಿ ಸಾಲ ಪಡೆಯಲು ಬಂದವರಿಗೆ ಖೋಟಾ ನೋಟು ತೋರಿಸಿ ಸಾಲ ಕೊಡಿಸಲು ಪ್ರೊಸೆಸಿಂಗ್ ಫೀಸ್ ಪಡೆದು ಜನರಿಗೆ ವಂಚಿಸಿ ತಲೆ ಮರೆಸಿಕೊಳ್ಳುತ್ತಿದ್ದರು.

ಸಾಲ ಕೊಡಿಸುವುದಾಗಿ ಜಾಹೀರಾತು ನೀಡಿ ಜನರನ್ನು ವಂಚಿಸುತ್ತಿದ್ದ ಮೂವರು ಆರೋಪಿಗಳು ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Aug 22, 2021 | 1:05 PM

Share

ಬೆಂಗಳೂರು: ಸಾಲ ಕೊಡಿಸುವುದಾಗಿ ಜಾಹೀರಾತು ನೀಡಿ ಜನರಿಗೆ ವಂಚಿಸಿದ್ದ ಮೂವರು ಆರೋಪಿಗಳನ್ನು ಬೇಗೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕೊಯಮತ್ತೂರು ಮೂಲದ ಸುರೇಶ್, ಮನೋಜ್, ಅನೂಪ್ ಕುಮಾರ್‌ ಬಂಧಿತ ಆರೋಪಿಗಳು.

ಐಷಾರಾಮಿ ಕಾರುಗಳಲ್ಲಿ ಓಡಾಡುತ್ತಿದ್ದ ಆರೋಪಿಗಳು ಸಾಲ ಕೊಡಿಸುವುದಾಗಿ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಿದ್ದರು. ಬಳಿಕ ಜಾಹೀರಾತು ನೋಡಿ ಸಾಲ ಪಡೆಯಲು ಬಂದವರಿಗೆ ಖೋಟಾ ನೋಟು ತೋರಿಸಿ ಸಾಲ ಕೊಡಿಸಲು ಪ್ರೊಸೆಸಿಂಗ್ ಫೀಸ್ ಪಡೆದು ಜನರಿಗೆ ವಂಚಿಸಿ ತಲೆ ಮರೆಸಿಕೊಳ್ಳುತ್ತಿದ್ದರು. ಈ ಆರೋಪಿಗಳು ತಮ್ಮ ಬಿಎಂಡಬ್ಲ್ಯು ಕಾರಿಗೆ ಅಡ್ವೊಕೇಟ್ ಚಿಹ್ನೆ ಹಾಕಿಕೊಂಡು ಓಡಾಡ್ತಿದ್ದರು.

ಮೈಸೂರು, ಕೊಯ್ಮುತ್ತೂರಿನ ಠಾಣಾ ವ್ಯಾಪ್ತಿಗಳಲ್ಲಿ ಈ ಹಿಂದೆ ಆರೋಪಿಗಳ ಮೇಲೆ ಪ್ರಕರಣ ದಾಖಲಾಗಿತ್ತು. ಬಿಎಂಡಬ್ಲ್ಯು ಕಾರಿನ ಮಾಲೀಕ ಅರವಿಂದ್ ಕೂಡ ವಂಚನೆ ಪ್ರಕರಣದಲ್ಲಿ ಜೈಲಿನಲ್ಲಿದ್ದ. ಜೈಲಿನಲ್ಲಿದ್ದ ಅರವಿಂದನ ಬಿಎಂಡಬ್ಲ್ಯು ಕಾರನ್ನೇ ಬಳಸಿಕೊಂಡೇ ಉಳಿದ ಆರೋಪಿಗಳು ವಂಚನೆ ಮಾಡುತ್ತಿದ್ದರು.

ಹೆಚ್ಚುತ್ತಿವೆ ವಂಚನೆ ಪ್ರಕರಣಗಳು ಇನ್ನು ರಾಜಧಾನಿಯಲ್ಲಿ ನಿವೇಶನ ಮಾರಾಟ ನೆಪದಲ್ಲಿ ವಂಚನೆ ಎಸಗಿರುವ ಮತ್ತೊಂದು ಪ್ರಕರಣ ವರದಿಯಾಗಿತ್ತು. ರಾಜಾಜಿನಗರದ ಮೂರನೆ ಹಂತದ ಬೃಂದಾವನ ಪ್ರಾಪರ್ಟಿಸ್ ಸಂಸ್ಥೆಯಿಂದ ನೂರಾರು ಜನರಿಗೆ ವಂಚನೆ ನಡೆದಿತ್ತು. ಐದಾರು ಲಕ್ಷ ರೂಪಾಯಿಗೆ ನಗರದ ಹೊರವಲಯದಲ್ಲಿ ಸೈಟ್ ನೀಡುವುದಾಗಿ ಸಂಸ್ಥೆಯು ಹಣ ಹೂಡಿಕೆ ಮಾಡಿಸಿಕೊಳ್ಳುತ್ತಿತ್ತು.

ದಿನೇಶ್ ಗೌಡ ಎಂಬಾತ ಬೃಂದಾವನ ಪ್ರಾಪರ್ಟಿಸ್ ಕಂಪನಿ ಹೆಸರಿನಲ್ಲಿ ಕಳೆದ ಐದು ವರ್ಷಗಳಿಂದ ರಿಯಲ್ ಎಸ್ಟೇಟ್ ವ್ಯವಹಾರ ನಡೆಸುತ್ತಿದ್ದ. ಇದೀಗ ವಂಚನೆ ಆರೋಪ ಬೆಳಕಿಗೆ ಬರುತ್ತಿದ್ದಂತೆ ಬೃಂದಾವನ ಪ್ರಾಪರ್ಟಿ ಕಚೇರಿ ಕ್ಲೋಸ್ ಮಾಡಿ ಎಸ್ಕೇಪ್ ಆಗಿದ್ದ. ಹಣ ಹೂಡಿಕೆ ಮಾಡಿರುವ ಸಾರ್ವಜನಿಕರು ಕಂಪನಿಯ ಕಚೇರಿ ಎದುರು ಪ್ರತಿಭಟನೆ ನಡೆಸಿ ಪ್ರಕರಣ ದಾಖಲಿಸಿದ್ದರು.

ಕ್ಯಾಬ್ ಚಾಲಕರು, ಪ್ಲಂಬರ್, ಹೋಟೆಲ್ ಸಪ್ಲೈಯರ್ ಮುಂತಾದವರು ಬೃಂದಾವನ ಪ್ರಾಪರ್ಟಿಸ್ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದ್ದರು. ತಾವರೆಕರೆ, ಹೆಸರಘಟ್ಟ, ನೆಲಮಂಗಲ ಭಾಗಗಳಲ್ಲಿ ನಿವೇಶನ ತೋರಿಸಿ, ದಿನೇಶ್ ಗೌಡ ಸಂಸ್ಥೆ ವಂಚನೆ ಎಸಗಿದೆ. ಇಂತಹ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿದ್ದು ಆದಷ್ಟು ಜನ ಎಚ್ಚೆತ್ತುಕೊಳ್ಳಬೇಕಿದೆ.

ಇದನ್ನೂ ಓದಿ: ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗೆ ವಂಚನೆ? ಸಿನಿಮಾ ನಿರ್ದೇಶಕ ಕರಮಲ ಬಾಲರವೀಂದ್ರನಾಥ್ ಬಂಧನ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​