AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಂಡ್​​ ಬ್ರೇಕ್ ಹಾಕದೇ ಇಳಿದ ಚಾಲಕ, ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ

ಮನುಷ್ಯ ಈಗ ಚೆನ್ನಾಗಿ ಇದ್ದವನು ಇನ್ನು ಸ್ವಲ್ಪ ಹೊತ್ತಿಗೆ ಇರಲ್ಲ. ಹೀಗಾಗಿ ಮನಷ್ಯನಿಗೆ ಸಾವು ಹೇಗೆ ಯಾವ ರೂಪದಲ್ಲಿ ಬರುತ್ತೆ ಎನ್ನುವುದು ಗೊತ್ತಾಗಲ್ಲ. ಅದರಂತೆ ಗುಜರಾತ್​ನಲ್ಲಿ ಕೆಟ್ಟು ನಿಂತ ಗಾಡಿಯನ್ನು ನೋಡಲು ಚಾಲಕ ಕಾರು ಇಳಿದು ಹೋಗಿದ್ದಾನೆ. ಆದ್ರೆ, ಇತ್ತ ಕಾರಿನಲ್ಲಿದ್ದ ಬೆಂಗಳೂರು ಮೂಲದ ಮೂವರು ದುರಂತ ಸಾವನ್ನಪ್ಪಿದ್ದಾರೆ.

ಹ್ಯಾಂಡ್​​ ಬ್ರೇಕ್ ಹಾಕದೇ ಇಳಿದ ಚಾಲಕ, ಕಾರು ಕಂದಕಕ್ಕೆ ಬಿದ್ದು ಬೆಂಗಳೂರಿನ ಮೂವರು ದುರ್ಮರಣ
ರಾಚಪ್ಪಾಜಿ ನಾಯ್ಕ್
| Edited By: |

Updated on: Jul 16, 2024 | 8:28 PM

Share

ಬೆಂಗಳೂರು, (ಜುಲೈ 16): ಪ್ರವಾಸಕ್ಕೆಂದು ತೆರಳಿದ್ದ ಬೆಂಗಳೂರು ಮೂಲದ ಒಂದೇ ಕುಟುಂಬದ ಮೂವರು ಜಮ್ಮು-ಕಾಶ್ಮೀರದಲ್ಲಿ ದುರ್ಮರಣ ಹೊಂದಿದ್ದಾರೆ. ತಂದ್ರ ದಾಸ್(67), ಮೊನಾಲಿಸಾ ದಾಸ್(41) ಸೇರಿದಂತೆ ಮೂವರ  ಮೃತಪಟ್ಟಿದ್ದಾರೆ. ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದು, ಅಮರನಾಥ ಯಾತ್ರೆ ಸಮೀಪದ ಝೋಜಿಲ್ ಪಾಸ್ ಬಳಿ ಕಾರು ಪ್ರಪಾತಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ. ದುರಂತ ಅಂದ್ರೆ ಚಾಲಕ ಹ್ಯಾಂಡ್​ ಬ್ರೇಕ್ ಹಾಕದೇ ಇಳಿದು ಹೋಗಿದ್ದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ಕಂದಕಕ್ಕೆ ಉರುಳಿಬಿದ್ದಿದೆ.

ಮೃತಪಟ್ಟ ಕುಟುಂಬ ಜಮ್ಮು-ಕಾಶ್ಮೀರದಲ್ಲಿ ಬಾಡಿಗೆ ಕಾರಿನಲ್ಲಿ ಪ್ರಯಾಣಿಸುತ್ತಿತ್ತು. ಆದ್ರೆ, ಮಾರ್ಗಮಧ್ಯೆ ಅಮರನಾಥ ಸಮೀಪದ ಝೋಜಿಲ್ ಪಾಸ್ ಬಳಿ ಬೇರೊಂದು ಕಾರು ರಸ್ತೆಯಲ್ಲಿ ಕೆಟ್ಟು ನಿಂತಿದೆ. ಅದನ್ನು ನೋಡಲು ಕುಟುಂಬವನ್ನು ಕರೆದುಕೊಂಡು ಹೋಗುತ್ತಿದ್ದ ಚಾಲಕ ಕಾರು ನಿಲ್ಲಿಸಿದ್ದಾನೆ. ಅಲ್ಲದೇ ಏನಾಗಿದೆ ಎಂದು ಕಾರು ಇಳಿದು ಹೋಗಿದ್ದಾರೆ. ಆದ್ರೆ, ಇಳಿದು ಹೋಗುವ ಮುನ್ನ ಕಾರಿನ ಹ್ಯಾಂಡ್​ ಬ್ರೇಕ್ ಹಾಕುವುದನ್ನು ಮರೆತಿದ್ದಾನೆ. ಇದರಿಂದ ಕಾರು ತನ್ನಷ್ಟಕ್ಕೆ ತಾನೇ ಮೂವ್ ಆಗಿ ರಸ್ತೆ ಪಕ್ಕದಲ್ಲಿದ್ದ ಪ್ರಪಾತಕ್ಕೆ ಬಿದ್ದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಪತ್ನಿ ಡ್ರೆಸ್, ಮೇಕಪ್ ಬಗ್ಗೆ ಗಲಾಟೆ: ಆತ್ಮಹತ್ಯೆಗೆ ಶರಣಾದ ಪತಿ 

ಪರಿಣಾಮ ಘಟನೆಯಲ್ಲಿ ಬೆಂಗಳೂರಿನ ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್​ನ ಕುಟುಂಬ ದುರಂತ ಸಾವು ಕಂಡಿದ್ದಾರೆ. ಇನ್ನು CRPF, ಜಮ್ಮು-ಕಾಶ್ಮೀರ ಪೊಲೀಸರು, ಮೂವರ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಅದೃಷ್ಟವಶಾತ್ ಘಟನೆಯಲ್ಲಿ 9 ವರ್ಷ ಬಾಲಕಿ ಅದ್ರಿತಾ ದಾಸ್​ ಬದುಕುಳಿದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ನೋಡಿ ಒಂದು ಸಣ್ಣ ತಪ್ಪಿನಿಂದಾಗಿ ಮೂವರ ಪ್ರಾಣ ಹೋಗಿದೆ. ಹೀಗಾಗ ವಾಹನ ಚಾಲಕರು ಯಾವುದೇ ಕಾರಣಕ್ಕೂ ಒಂದು ಸಣ್ಣ ವಿಚಾರಕ್ಕೂ ಮೈಮರೆಯಬಾರದು.  ಮೈಯಲ್ಲ ಕಣ್ಣಾಗಿಟ್ಟುಕೊಂಡು ವಾಹನ ಚಲಿಸಬೇಕು ಎನ್ನುವುದು ಇದಕ್ಕೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್