AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್

ಮೀಸೆ‌ಚಿಗುರದ ಹುಡುಗರು ಗಾಂಜಾ ಮತ್ತಿನಲ್ಲಿ ಮಾಡುವ ಪುಂಡಾಟ ಒಂದೆರೆಡಲ್ಲ. ಸದಾ ಗಾಂಜಾ ಮತ್ತಿನಲ್ಲೇ ಇರುತ್ತಿದ್ದ ಅಪ್ರಾಪ್ತ ಹುಡುಗರು ರಾತ್ರಿ ವೇಳೆ ಮನೆಗಳ ಮೇಲೆ ಕಲ್ಲೆಸೆಯುವುದು. ಬೈಕ್‌ಗಳನ್ನು ಅಡ್ಡಗಟ್ಟಿ ರಾಬರಿ ಮಾಡುವುದು. ನಿರ್ಮಾಣ ಹಂತದ ಕಟ್ಟಡದೊಳಗೆ ನುಗ್ಗಿ ಪುಂಡಾಟ ಮಾಡುವುದು....

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್
ಗಾಂಜಾ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on: Dec 05, 2021 | 7:48 AM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡ ರಾತ್ರಿ ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕರು ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ. ಸದ್ಯ ಗಾಂಜಾ ಮತ್ತಿನಲ್ಲಿ ಹಾವಳಿ ಕೊಡುತ್ತಿದ್ದ ಪುಂಡರನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೀಸೆ‌ಚಿಗುರದ ಹುಡುಗರು ಗಾಂಜಾ ಮತ್ತಿನಲ್ಲಿ ಮಾಡುವ ಪುಂಡಾಟ ಒಂದೆರೆಡಲ್ಲ. ಸದಾ ಗಾಂಜಾ ಮತ್ತಿನಲ್ಲೇ ಇರುತ್ತಿದ್ದ ಅಪ್ರಾಪ್ತ ಹುಡುಗರು ರಾತ್ರಿ ವೇಳೆ ಮನೆಗಳ ಮೇಲೆ ಕಲ್ಲೆಸೆಯುವುದು. ಬೈಕ್‌ಗಳನ್ನು ಅಡ್ಡಗಟ್ಟಿ ರಾಬರಿ ಮಾಡುವುದು. ನಿರ್ಮಾಣ ಹಂತದ ಕಟ್ಟಡದೊಳಗೆ ನುಗ್ಗಿ ಪುಂಡಾಟ ಮಾಡುವುದು. ಹಗಲಿನ ವೇಳೆ ವೃದ್ಧರ ಮೇಲೆ ಲಾಂಗ್ ಬೀಸುವುದು. ಜನರ ಜೇಬಿನಲ್ಲಿ ಇದ್ದ ಹಣ ಎಗರಿಸಿ ಪರಾರಿಯಾಗುವುದು. ಬೇಕರಿಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡುವುದು. ಹೀಗೆ ಅನೇಕ ಅಪರಾದಗಳನ್ನು ಮಾಡುತ್ತಾ ಬಂದಿದ್ದಾರೆ.

ಸದ್ಯ ಗಾಂಜಾ ಮತ್ತಿನಲ್ಲಿ ಗೂಂಡಾಗಿರಿ ಮಾಡುತ್ತಿದ್ದ ಮೂವರು ಅಪ್ರಾಪ್ತರ ಗ್ಯಾಂಗ್ನನ್ನು ಪುಲಕೇಶಿನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿ ಆರೋಪಿಗಳನ್ನು ಬಾಲಮಂದಿರಕ್ಕೆ ಕಳಿಸಿದ್ದಾರೆ.

ಗಾಂಜಾ ಮತ್ತಿನಲ್ಲಿ ನಾಯಿಯನ್ನು ಕೊಂದ ಪುಂಡರು ಒಂದರ ನಂತರ ಮತ್ತೊಂದರಂತೆ ಗಾಂಜಾ ಮತ್ತಿನ ಕೃತ್ಯ ಬಯಲಾಗುತ್ತಿದೆ. ಅದಕ್ಕೆ ಉದಾಹರಣೆ ಎಂಬಂತೆ ಗಾಂಜಾ ಮತ್ತಿನಲ್ಲಿ ಯುವಕರು ನಾಯಿಯನ್ನು ಕೊಂದ ಘಟನೆ ಬೆಂಗಳೂರಿನ ದೇವಸಂದ್ರ ವಾರ್ಡ್‌ನ ಕಾಮದೇನು ಲೇಔಟ್​ನಲ್ಲಿ ನಡೆದಿದೆ. ಕರ್ಕಶ ಶಬ್ದದೊಂದಿಗೆ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡು ನಾಯಿ ಬೊಗಳಿದೆ. ಹೀಗಾಗಿ ನಶೆಯಲ್ಲಿದ್ದ ಯುವಕರು ನಾಯಿಯನ್ನು ಕೊಂದಿದ್ದಾರೆ. ನಾಯಿ ಸಾಯಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೈಕ್‌ಗಳ ಕರ್ಕಶ ಶಬ್ದಕ್ಕೆ ನಾಯಿ ಬೊಗಳಿದ ಹಿನ್ನೆಲೆ, ಅದೇ ರಸ್ತೆಯ ಕನ್ಟ್ರಕ್ಷನ್ ಬಿಲ್ಡಿಂಗ್​ನಿಂದ ರಾಡ್ ತಂದ ಸವರಾರು, ರಾಡ್‌ನಿಂದ ಹೊಡೆದು ನಾಯಿಯನ್ನು ಸಾಯಿಸಿದ್ದಾರೆ. ಬೈಕ್​ನಲ್ಲಿ ಹೋಗುತ್ತಿದ್ದಂತೆ ನಾಯಿ ಮೇಲೆ ರಾಡ್ ಬೀಸಿ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳದಲ್ಲೇ ಶ್ವಾನ ಸಾವನ್ನಪ್ಪಿದೆ.

ಇತ್ತಿಚಿಗೆ ಗಾಂಜಾ ಅಡ್ಡೆಯಾಗಿ ಈ ಸ್ಥಳ ಬದಲಾಗಿದೆ. ಆರೋಪಕ್ಕೆ ಪುಷ್ಟಿ ನೀಡುವಂತೆ ಒಂದರ ನಂತರ ಮತ್ತೊಂದು ಘಟನೆ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ನಾಯಿಯ ಮೇಲೆ ನಡೆದ ಭೀಕರ ಹಲ್ಲೆ ವಿಡಿಯೋ ಸಹ ವೈರಲ್ ಆಗಿದೆ.

ಇದನ್ನೂ ಓದಿ: Parappana Agrahara Jail: ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ; ಗಾಂಜಾ ಸೇದುವ ಚಿಲುಮೆ ಪತ್ತೆ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್