AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್

ಮೀಸೆ‌ಚಿಗುರದ ಹುಡುಗರು ಗಾಂಜಾ ಮತ್ತಿನಲ್ಲಿ ಮಾಡುವ ಪುಂಡಾಟ ಒಂದೆರೆಡಲ್ಲ. ಸದಾ ಗಾಂಜಾ ಮತ್ತಿನಲ್ಲೇ ಇರುತ್ತಿದ್ದ ಅಪ್ರಾಪ್ತ ಹುಡುಗರು ರಾತ್ರಿ ವೇಳೆ ಮನೆಗಳ ಮೇಲೆ ಕಲ್ಲೆಸೆಯುವುದು. ಬೈಕ್‌ಗಳನ್ನು ಅಡ್ಡಗಟ್ಟಿ ರಾಬರಿ ಮಾಡುವುದು. ನಿರ್ಮಾಣ ಹಂತದ ಕಟ್ಟಡದೊಳಗೆ ನುಗ್ಗಿ ಪುಂಡಾಟ ಮಾಡುವುದು....

ಮೀಸೆ ಚಿಗುರದ ವಯಸ್ಸಲ್ಲೇ ಗಾಂಜಾ ಸೇವನೆ; ಮತ್ತಿನಲ್ಲಿ ಗೂಂಡಾಗಿರಿ, ಮೂವರು ಅಪ್ರಾಪ್ತರು ಅರೆಸ್ಟ್
ಗಾಂಜಾ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: ಆಯೇಷಾ ಬಾನು

Updated on: Dec 05, 2021 | 7:48 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡ ರಾತ್ರಿ ಗಾಂಜಾ ಮತ್ತಿನಲ್ಲಿ ಅಪ್ರಾಪ್ತ ಬಾಲಕರು ಗೂಂಡಾಗಿರಿ ನಡೆಸಿದ ಘಟನೆ ನಡೆದಿದೆ. ಸದ್ಯ ಗಾಂಜಾ ಮತ್ತಿನಲ್ಲಿ ಹಾವಳಿ ಕೊಡುತ್ತಿದ್ದ ಪುಂಡರನ್ನು ಪುಲಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮೀಸೆ‌ಚಿಗುರದ ಹುಡುಗರು ಗಾಂಜಾ ಮತ್ತಿನಲ್ಲಿ ಮಾಡುವ ಪುಂಡಾಟ ಒಂದೆರೆಡಲ್ಲ. ಸದಾ ಗಾಂಜಾ ಮತ್ತಿನಲ್ಲೇ ಇರುತ್ತಿದ್ದ ಅಪ್ರಾಪ್ತ ಹುಡುಗರು ರಾತ್ರಿ ವೇಳೆ ಮನೆಗಳ ಮೇಲೆ ಕಲ್ಲೆಸೆಯುವುದು. ಬೈಕ್‌ಗಳನ್ನು ಅಡ್ಡಗಟ್ಟಿ ರಾಬರಿ ಮಾಡುವುದು. ನಿರ್ಮಾಣ ಹಂತದ ಕಟ್ಟಡದೊಳಗೆ ನುಗ್ಗಿ ಪುಂಡಾಟ ಮಾಡುವುದು. ಹಗಲಿನ ವೇಳೆ ವೃದ್ಧರ ಮೇಲೆ ಲಾಂಗ್ ಬೀಸುವುದು. ಜನರ ಜೇಬಿನಲ್ಲಿ ಇದ್ದ ಹಣ ಎಗರಿಸಿ ಪರಾರಿಯಾಗುವುದು. ಬೇಕರಿಯ ಬೀಗ ಒಡೆದು ಒಳನುಗ್ಗಿ ಕಳ್ಳತನ ಮಾಡುವುದು. ಹೀಗೆ ಅನೇಕ ಅಪರಾದಗಳನ್ನು ಮಾಡುತ್ತಾ ಬಂದಿದ್ದಾರೆ.

ಸದ್ಯ ಗಾಂಜಾ ಮತ್ತಿನಲ್ಲಿ ಗೂಂಡಾಗಿರಿ ಮಾಡುತ್ತಿದ್ದ ಮೂವರು ಅಪ್ರಾಪ್ತರ ಗ್ಯಾಂಗ್ನನ್ನು ಪುಲಕೇಶಿನಗರ ಠಾಣೆ ಪೊಲೀಸರು ಅರೆಸ್ಟ್ ಮಾಡಿ ಆರೋಪಿಗಳನ್ನು ಬಾಲಮಂದಿರಕ್ಕೆ ಕಳಿಸಿದ್ದಾರೆ.

ಗಾಂಜಾ ಮತ್ತಿನಲ್ಲಿ ನಾಯಿಯನ್ನು ಕೊಂದ ಪುಂಡರು ಒಂದರ ನಂತರ ಮತ್ತೊಂದರಂತೆ ಗಾಂಜಾ ಮತ್ತಿನ ಕೃತ್ಯ ಬಯಲಾಗುತ್ತಿದೆ. ಅದಕ್ಕೆ ಉದಾಹರಣೆ ಎಂಬಂತೆ ಗಾಂಜಾ ಮತ್ತಿನಲ್ಲಿ ಯುವಕರು ನಾಯಿಯನ್ನು ಕೊಂದ ಘಟನೆ ಬೆಂಗಳೂರಿನ ದೇವಸಂದ್ರ ವಾರ್ಡ್‌ನ ಕಾಮದೇನು ಲೇಔಟ್​ನಲ್ಲಿ ನಡೆದಿದೆ. ಕರ್ಕಶ ಶಬ್ದದೊಂದಿಗೆ ವ್ಹೀಲಿಂಗ್ ಮಾಡುತ್ತಿದ್ದ ಯುವಕರನ್ನು ಕಂಡು ನಾಯಿ ಬೊಗಳಿದೆ. ಹೀಗಾಗಿ ನಶೆಯಲ್ಲಿದ್ದ ಯುವಕರು ನಾಯಿಯನ್ನು ಕೊಂದಿದ್ದಾರೆ. ನಾಯಿ ಸಾಯಿಸುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೈಕ್‌ಗಳ ಕರ್ಕಶ ಶಬ್ದಕ್ಕೆ ನಾಯಿ ಬೊಗಳಿದ ಹಿನ್ನೆಲೆ, ಅದೇ ರಸ್ತೆಯ ಕನ್ಟ್ರಕ್ಷನ್ ಬಿಲ್ಡಿಂಗ್​ನಿಂದ ರಾಡ್ ತಂದ ಸವರಾರು, ರಾಡ್‌ನಿಂದ ಹೊಡೆದು ನಾಯಿಯನ್ನು ಸಾಯಿಸಿದ್ದಾರೆ. ಬೈಕ್​ನಲ್ಲಿ ಹೋಗುತ್ತಿದ್ದಂತೆ ನಾಯಿ ಮೇಲೆ ರಾಡ್ ಬೀಸಿ ಹಲ್ಲೆ ಮಾಡಿದ್ದಾರೆ. ದುಷ್ಕರ್ಮಿಗಳ ಕೃತ್ಯಕ್ಕೆ ಸ್ಥಳದಲ್ಲೇ ಶ್ವಾನ ಸಾವನ್ನಪ್ಪಿದೆ.

ಇತ್ತಿಚಿಗೆ ಗಾಂಜಾ ಅಡ್ಡೆಯಾಗಿ ಈ ಸ್ಥಳ ಬದಲಾಗಿದೆ. ಆರೋಪಕ್ಕೆ ಪುಷ್ಟಿ ನೀಡುವಂತೆ ಒಂದರ ನಂತರ ಮತ್ತೊಂದು ಘಟನೆ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸದ್ಯ ನಾಯಿಯ ಮೇಲೆ ನಡೆದ ಭೀಕರ ಹಲ್ಲೆ ವಿಡಿಯೋ ಸಹ ವೈರಲ್ ಆಗಿದೆ.

ಇದನ್ನೂ ಓದಿ: Parappana Agrahara Jail: ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ; ಗಾಂಜಾ ಸೇದುವ ಚಿಲುಮೆ ಪತ್ತೆ!

Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily Devotional: ಪ್ರಸಾದವನ್ನ ಬಲಗೈಯಲ್ಲೇ ಯಾಕೆ ತೆಗೆದುಕೊಳ್ಳಬೇಕು?
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
Daily horoscope: ಸೂರ್ಯ ಭಗವಾನ್ ವೃಷಭ ರಾಶಿಗೆ ಪ್ರವೇಶ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ತಂಗಿ ಮದುವೆ ಮಾಡಿಸುತ್ತೇವೆ: ರಾಕೇಶ್ ಪೂಜಾರಿ ಕುಟುಂಬಕ್ಕೆ ಸ್ನೇಹಿತರ ಬೆಂಬಲ
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ