AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ! ಮಗುವನ್ನು ರಕ್ಷಿಸುವುದಕ್ಕೆ ಕೆಳಗೆ ಎಸೆದ ಪೋಷಕರು

ಕುಸಿತಗೊಂಡ ಕಟ್ಟಡ 50 ವರ್ಷದ ಹಳೆಯದ್ದಾಗಿದೆ. ನಾಳೆ ಕೆಎಂಎಫ್​ನಲ್ಲಿ ಸಿಎಂ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.

ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿತ! ಮಗುವನ್ನು ರಕ್ಷಿಸುವುದಕ್ಕೆ ಕೆಳಗೆ ಎಸೆದ ಪೋಷಕರು
ಕುಸಿಯುತ್ತಿರುವ ಕಟ್ಟಡ
TV9 Web
| Updated By: sandhya thejappa|

Updated on:Sep 28, 2021 | 11:04 AM

Share

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಮೂರು ಅಂತಸ್ತಿತ ಕಟ್ಟಡ ಕುಸಿತವಾಗಿದೆ. ಡೇರಿ ಸರ್ಕಲ್ ಬಳಿಯ ಕೆಎಂಎಫ್ ಕ್ವಾಟ್ರರ್ಸ್ ಒಳಗಡೆ ಇರುವ ಮೂರು ಅಂತಸ್ತಿನ ಕಟ್ಟಡ ಕುಸಿದಿದ್ದು, ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕುಸಿತಗೊಂಡ ಕಟ್ಟಡ 50 ವರ್ಷದ ಹಳೆಯದ್ದಾಗಿದೆ. ನಾಳೆ ಕೆಎಂಎಫ್​ನಲ್ಲಿ ಸಿಎಂ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ನಿನ್ನೆ ಬಿದ್ದಿದ್ದ ಕಟ್ಟಡದಿಂದ ಅರ್ಧ ಕಿಮೀ ದೂರದಲ್ಲಿ ಇಂದು (ಸೆ.28) ಮತ್ತೊಂದು ಕಟ್ಟಡ ಕುಸಿತಗೊಂಡಿದೆ.

ಈ ಕಟ್ಟಡದಲ್ಲಿ 18 ಕುಟುಂಬ ವಾಸವಾಗಿತ್ತು. ಕೆಎಂಎಫ್ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಕಟ್ಟಡ ಕುಸಿಯಲು ಆರಂಭವಾಗುತ್ತಿದ್ದಂತೆ ಮನೆಯಿಂದ ಹೊರ ಓಡಿದ್ದಾರೆ. ಕಟ್ಟಡ ಕುಸಿಯುವ ಐದು ನಿಮಿಷ ಮುಂಚಿತವಷ್ಟೇ ನಾವು ಹೊರಗೆ ಬಂದವಿ. ಇಲ್ಲದಿದ್ದರೆ ನಮ್ಮ ಮೈ ಮೇಲೆ ಕಟ್ಟಡ ಬೀಳುತ್ತಿತ್ತು. ನಾಲ್ಕು ಜನರಿಗೆ ಗಾಯವಾಗಿದೆ. ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ನಾವು ತಿಂಡಿ ತಿನ್ನುವುದಕ್ಕೆ ರೆಡಿ ಆಗ್ತಾಯಿದ್ವಿ. ಅಷ್ಟರಲ್ಲಿ ಅಮ್ಮ ಹೊರ ಬನ್ನಿ ಅಂತಾ ಕೂಗಿದರು ಅಂತ ನಿವಾಸಿಯೊಬ್ಬರು ಹೇಳಿದ್ದಾರೆ.

ಕಟ್ಟಡದಲ್ಲಿ ಸಿಲುಕಿಕೊಂಡಿದ್ದ ತಂದೆ, ತಾಯಿ ಮತ್ತು ಮಗು ಕಟ್ಟಡದ ಎರಡನೇ ಅಂತಸ್ತಿನಲ್ಲಿ ತಂದೆ, ತಾಯಿ ಮತ್ತು ಮಗು ಸಿಲುಕಿಕೊಂಡಿದ್ದರು. ಮಗುವನ್ನ ಉಳಿಸಲು ಎರಡನೇ ಅಂತಸ್ತಿನಿಂದ ಕೆಳಗೆ ಎಸೆಯಲಾಗಿದೆ. ಕೆಳಗಡೆ ನಿಂತಿದ್ದ ಜನ ಮಗುವನ್ನ ತಕ್ಷಣ ಹಿಡಿದಿದ್ದಾರೆ ಅಂತ ತಿಳಿದುಬಂದಿದೆ.

ಹಳೆಯ ಕಟ್ಟಡ ಅಂತ ಗೊತ್ತಿದ್ದರು ಸಿಬ್ಬಂದಿಗಳಿಗೆ ವಾಸಮಾಡಲು ಬಮೂಲ್ ಅಧಿಕಾರಿಗಳು ಅವಕಾಶ ಕೊಟ್ಟಿದ್ದರು. ಬೆಳಗ್ಗೆ ಒಂಬತ್ತು ಮೂವತ್ತಕ್ಕೆ ಈ ಘಟನೆ ನಡೆದಿದೆ. 18 ಮನೆಗಳು ಇರುವ ಮೂರು ಫ್ಲೋರ್ ಕಟ್ಟಡವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಹಿರಿಯ ಅಧಿಕಾರಿಗಳು ಸಹ ಭೇಟಿ ನೀಡಿದ್ದಾರೆ.

ಅನಿಲ ಸೋರಿಕೆಯಿಂದ ಆತಂಕ ಕೆಎಂಅಫ್ ಕ್ವಾರ್ಟರ್ಸ್‌ನಲ್ಲಿ ಕಟ್ಟಡ ಕುಸಿದ ಬಳಿಯ ಮನೆಯೊಂದರಲ್ಲಿ ಗ್ಯಾಸ್​ ಲೀಕ್​ ಆಗಿದೆ. ಹೀಗಾಗಿ ಬೆಸ್ಕಾಂ ಸಿಬ್ಬಂದಿಗೆ ಪವರ್ ಕಟ್ ಮಾಡಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ

ಬೆಂಗಳೂರು: ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಕಟ್ಟಡ ಮಾಲೀಕನ ವಿರುದ್ಧ ಎಫ್​ಐಆರ್ ದಾಖಲು

ಹಾಸನದಲ್ಲಿ ಡೀಸೆಲ್ ಟ್ಯಾಂಕರ್, ಬೊಲೆರೊ ವಾಹನದ ನಡುವೆ ಡಿಕ್ಕಿ! ನೂರಾರು ಕೋಳಿಗಳ ಸಾವು

(Three Flour Building Collapse in dairy circle Bengaluru)

Published On - 10:23 am, Tue, 28 September 21

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು