AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನದ ನಾಣ್ಯ ಮಾರಾಟ: 1 ಕೆಜಿ ನಾಣ್ಯವನ್ನು 11 ಲಕ್ಷ ರೂ.ಗೆ ನೀಡಿ ರೈತರಿಬ್ಬರಿಗೆ ವಂಚನೆ

ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿಕೊಂಡು ರೈತರನ್ನು ವಂಚಿಸಿದ್ದಾರೆ.

ನಕಲಿ ಚಿನ್ನದ ನಾಣ್ಯ ಮಾರಾಟ: 1 ಕೆಜಿ ನಾಣ್ಯವನ್ನು 11 ಲಕ್ಷ ರೂ.ಗೆ ನೀಡಿ ರೈತರಿಬ್ಬರಿಗೆ ವಂಚನೆ
ಸಾಂದರ್ಭಿಕ ಚಿತ್ರ
TV9 Web
| Updated By: Pavitra Bhat Jigalemane|

Updated on:Dec 17, 2021 | 12:51 PM

Share

ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿಕೊಂಡು ರೈತರನ್ನು ವಂಚಿಸಿದ್ದಾರೆ. ಗಾಳಪ್ಪ (50), ರಾಜಣ್ಣ ವಂಚನೆಗೆ ಒಳಗಾದ ರೈತರು. ಈ ಕುರಿತು ಗಾಳಪ್ಪ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ. 

ಮೆಜೆಸ್ಟಿಕ್​ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ ಒಂದು ಕೆಜಿ ನಾಣ್ಯಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆಗೆ ನಿಮಗೆ ಕೊಡುತ್ತೇವೆ ಎಂದು ಹೇಳಿಕೊಂಡಿದ್ದಾರೆ. ನಾಣ್ಯಗಳನ್ನು ಹತ್ತಿರದ ಅಕ್ಕಸಾಲಿಗನ ಅಂಗಡಿಯಲ್ಲಿ ತೋರಿಸಿದಾಗ ಅದು ಅಸಲಿ ಚಿನ್ನದ ನಾಣ್ಯಗಳು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಳಪ್ಪ ಎನ್ನುವವರು ಉಳಿತಾಯ ಮಾಡಿದ್ದ 7 ಲಕ್ಷ ರೂಗಳನ್ನು ಹಾಗೂ ಸ್ನೇಹಿತ ರಾಜಣ್ಣನ ಬಳಿ 4 ಲಕ್ಷ ರೂಗಳನ್ನು ತೆಗೆದುಕೊಂಡು ವಂಚಕರಿಗೆ ನೀಡಿದ್ದಾರೆ.

ಬಳಿಕ ವಂಚಕರು ಬಟ್ಟೆಯಲ್ಲಿ ಸುತ್ತಿ ಚಿನ್ನದ ನಾಣ್ಯಗಳನ್ನು ನೀಡಿದ್ದಾರೆ. ನಾಣ್ಯಗಳಿರುವ ಬಟ್ಟೆಯ ಗಂಟನ್ನು ಪಡೆದ ಬಳಿಕ ರೈತರಿಬ್ಬರು ಹತ್ತಿರದ ತುಳಸಿ ಪಾರ್ಕ್​ನಲ್ಲಿ ಹೋಗಿ ನೋಡಿದಾಗ ಅದರಲ್ಲಿ ನಕಲಿ ನಾಣ್ಯಗಳಿರುವುದು ತಿಳಿದುಬಂದಿದೆ. ಈ ಕುರಿತು ಗಾಳಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ:

ನೂರು ರೂ ವಿಚಾರಕ್ಕೆ ಕೊಲೆ: ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸಿದ ಯಶವಂತಪುರ ಸಂಚಾರ ಪೊಲೀಸರು

Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು

Published On - 12:46 pm, Fri, 17 December 21

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?