AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಚಿನ್ನದ ನಾಣ್ಯ ಮಾರಾಟ: 1 ಕೆಜಿ ನಾಣ್ಯವನ್ನು 11 ಲಕ್ಷ ರೂ.ಗೆ ನೀಡಿ ರೈತರಿಬ್ಬರಿಗೆ ವಂಚನೆ

ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿಕೊಂಡು ರೈತರನ್ನು ವಂಚಿಸಿದ್ದಾರೆ.

ನಕಲಿ ಚಿನ್ನದ ನಾಣ್ಯ ಮಾರಾಟ: 1 ಕೆಜಿ ನಾಣ್ಯವನ್ನು 11 ಲಕ್ಷ ರೂ.ಗೆ ನೀಡಿ ರೈತರಿಬ್ಬರಿಗೆ ವಂಚನೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 17, 2021 | 12:51 PM

Share

ಬೆಂಗಳೂರು: ನಕಲಿ ಚಿನ್ನದ ನಾಣ್ಯಗಳನ್ನು ಮಾರಾಟಮಾಡಿ ಇಬ್ಬರು ರೈತರಿಗೆ 11 ಲಕ್ಷ ರೂ ವಂಚಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೂವರು ವಂಚಕರು 1 ಕೆಜಿ ಚಿನ್ನದ ನಾಣ್ಯಗಳನ್ನು 11 ಲಕ್ಷರೂ.ಗೆ ಮಾರಾಟ ಮಾಡಿದ್ದಾರೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದೇವೆ ಎಂದು ಹೇಳಿಕೊಂಡು ರೈತರನ್ನು ವಂಚಿಸಿದ್ದಾರೆ. ಗಾಳಪ್ಪ (50), ರಾಜಣ್ಣ ವಂಚನೆಗೆ ಒಳಗಾದ ರೈತರು. ಈ ಕುರಿತು ಗಾಳಪ್ಪ ಎನ್ನುವವರು ಪೊಲೀಸರಿಗೆ ದೂರು ನೀಡಿದ್ದಾರೆ. 

ಮೆಜೆಸ್ಟಿಕ್​ನಲ್ಲಿ ನಿಂತಿದ್ದಾಗ ದಿನಗೂಲಿ ಕಾರ್ಮಿಕರ ಸೋಗಿನಲ್ಲಿ ಬಂದ ಮೂವರು ನಾವು ಕೆಲಸ ಮಾಡುತ್ತಿದ್ದ ಜಾಗದಲ್ಲಿ 4 ಕೆಜಿ ಚಿನ್ನದ ನಾಣ್ಯಗಳು ದೊರೆತಿವೆ ಅದರಲ್ಲಿ ಒಂದು ಕೆಜಿ ನಾಣ್ಯಗಳನ್ನು ಮಾರುಕಟ್ಟೆ ಬೆಲೆಗಿಂತ ಕಡಿಮೆಗೆ ನಿಮಗೆ ಕೊಡುತ್ತೇವೆ ಎಂದು ಹೇಳಿಕೊಂಡಿದ್ದಾರೆ. ನಾಣ್ಯಗಳನ್ನು ಹತ್ತಿರದ ಅಕ್ಕಸಾಲಿಗನ ಅಂಗಡಿಯಲ್ಲಿ ತೋರಿಸಿದಾಗ ಅದು ಅಸಲಿ ಚಿನ್ನದ ನಾಣ್ಯಗಳು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಗಾಳಪ್ಪ ಎನ್ನುವವರು ಉಳಿತಾಯ ಮಾಡಿದ್ದ 7 ಲಕ್ಷ ರೂಗಳನ್ನು ಹಾಗೂ ಸ್ನೇಹಿತ ರಾಜಣ್ಣನ ಬಳಿ 4 ಲಕ್ಷ ರೂಗಳನ್ನು ತೆಗೆದುಕೊಂಡು ವಂಚಕರಿಗೆ ನೀಡಿದ್ದಾರೆ.

ಬಳಿಕ ವಂಚಕರು ಬಟ್ಟೆಯಲ್ಲಿ ಸುತ್ತಿ ಚಿನ್ನದ ನಾಣ್ಯಗಳನ್ನು ನೀಡಿದ್ದಾರೆ. ನಾಣ್ಯಗಳಿರುವ ಬಟ್ಟೆಯ ಗಂಟನ್ನು ಪಡೆದ ಬಳಿಕ ರೈತರಿಬ್ಬರು ಹತ್ತಿರದ ತುಳಸಿ ಪಾರ್ಕ್​ನಲ್ಲಿ ಹೋಗಿ ನೋಡಿದಾಗ ಅದರಲ್ಲಿ ನಕಲಿ ನಾಣ್ಯಗಳಿರುವುದು ತಿಳಿದುಬಂದಿದೆ. ಈ ಕುರಿತು ಗಾಳಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಂಚಕರಿಗೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ:

ನೂರು ರೂ ವಿಚಾರಕ್ಕೆ ಕೊಲೆ: ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸಿದ ಯಶವಂತಪುರ ಸಂಚಾರ ಪೊಲೀಸರು

Coronavirus: ಲಂಡನ್, ದುಬೈನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 6 ಜನರಿಗೆ ಕೊರೊನಾ ಸೋಂಕು

Published On - 12:46 pm, Fri, 17 December 21

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!