AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನ ಮಾಡಿದ ಭಯದಲ್ಲಿ ಸಿಗ್ನಲ್​ ಜಂಪ್​ ಮಾಡಿ ಹೋದರು: ಟ್ರಾಫಿಕ್ ಫೈನ್​​ ಕೊಟ್ಟ ಸುಳಿವಿನ ಮೇಲೆ ಸಿಕ್ಕರು

ಬೆಂಗಳೂರಿನ ಮೊಬೈಲ್​ ಅಂಗಡಿಯಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಪದವಿ ವ್ಯಾಸಂಗ ಮಾಡುತ್ತಿರುವ ಬಂಧಿತ ಆರೋಪಿಗಳು ಸಿಕ್ಕಿಬಿದ್ದಿದ್ದೇ ಒಂದು ರೋಚಕ. ಹೌದು...ಟ್ರಾಫಿಕ್​ ಫೈನ್​ ಚಲನ್​ ಕೊಟ್ಟ ಸುಳಿವಿನ ಆಧಾರದ ಮೇಲೆ ಪೊಲೀಸರು ಕಳ್ಳತನ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಏನಿದು ಘಟನೆ? ಟ್ರಾಫಿಕ್​ ಫೈನ್​ ಚಲನ್​ ಮೇಲೆ ಪೊಲೀಸರು ಹಿಡಿದಿದ್ದೇಗೆ? ಎನ್ನುವ ರೋಚಕ ಸ್ಟೋರಿ ಈ ಕೆಳಗಿನಂತಿದೆ ನೋಡಿ.

ಕಳ್ಳತನ ಮಾಡಿದ ಭಯದಲ್ಲಿ ಸಿಗ್ನಲ್​ ಜಂಪ್​ ಮಾಡಿ ಹೋದರು: ಟ್ರಾಫಿಕ್ ಫೈನ್​​ ಕೊಟ್ಟ ಸುಳಿವಿನ ಮೇಲೆ ಸಿಕ್ಕರು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 04, 2023 | 12:54 PM

ಬೆಂಗಳೂರು, (ಅಕ್ಟೋಬರ್ 04): ಮೊಬೈಲ್ ಅಂಗಡಿಗೆ (Mobile Shop) ಕನ್ನ ಹಾಕಿ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿಗಳನ್ನು ಟ್ರಾಫಿಕ್ ಫೈನ್ ಚಲನ್​(traffic fine challan) ಆಧಾರದ ಮೇಲೆ ಬಂಧಿಸುವಲ್ಲಿ ಸಂಜಯನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಾದ ಪ್ರಭು (20), ಮೌನೇಶ (19) ಹಾಗೂ ಅಜಯ್ (19) ಬಂಧಿತರು. ಆರೋಪಿಗಳು ಬಿಕಾಂ ಮತ್ತು ಬಿಬಿಎ ವಿದ್ಯಾರ್ಥಿಗಳಾಗಿದ್ದು, ಇವರು ಸೆಪ್ಟೆಂಬರ್ 28ರಂದು ಬೆಂಗಳೂರಿನ (Bengaluru) ಸಂಜಯನಗರದ ನ್ಯೂ ಬಿಇಎಲ್ ರಸ್ತೆಯ ಗ್ಯಾಜೆಟ್ ಕ್ಲಬ್ ಮೊಬೈಲ್ ಅಂಗಡಿಯಲ್ಲಿ ಕಳ್ಳತನ ಮಾಡಿದ್ದರು. ಇದೀಗ ಆರೋಪಿಗಳು ಸಿಗ್ನಲ್​ ಜಂಪ್​ ಮಾಡಿ ಸಿಕ್ಕಿಬಿದ್ದಿದ್ದಾರೆ.

ಪ್ರಭು, ಮೌನೇಶ್ ಮತ್ತು ಅಜಯ್ ಸ್ನೇಹಿತರು. ಪ್ರಭು ಶೋಕಿಗಾಗಿ ಸಾಲ ಮಾಡಿಕೊಂಡಿದ್ದ. ಇದನ್ನು ತೀರಿಸಲು ಕಳ್ಳತನದ ಪ್ಲ್ಯಾನ್ ಮಾಡಿ ತನ್ನ ಸ್ನೇಹಿತರ ಜತೆಗೆ ಚರ್ಚೆ ನಡೆಸಿದ್ದ. ಗ್ಯಾಜೆಟ್ ಕ್ಲಬ್ ಮೊಬೈಲ್ ಅಂಗಡಿ ಮಾಲೀಕ ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಾನಿಕ್ ವಸ್ತುಗಳನ್ನು ಬಿಲ್ ಸಮೇತ ಖರೀದಿಸಿ ರಿಪೇರಿ ಮಾಡಿ ಮಾರಾಟ ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಪ್ರಭು ಖರಿದೀಸುವ ನೆಪದಲ್ಲಿ ಅಂಗಡಿಗೆ  ಹೋಗಿ ವಿಡಿಯೋ ಮಾಡಿಕೊಂಡು ಬಂದಿದ್ದ.  ಬಳಿಕ ಅಂಗಡಿ ಬಗ್ಗೆ ಸ್ನೇಹಿತರೊಂದಿಗೆ ಕಳ್ಳತನ ಕುರಿತು ಚರ್ಚೆ ನಡೆಸಿದ್ದ. ನಂತರ ಪ್ಲ್ಯಾನ್​ ಮಾಡಿಕೊಂಡು ಸೆಪ್ಟೆಂಬರ್ 28ರ ರಾತ್ರಿ 10.30ರ ಸುಮಾರಿಗೆ ಅಂಗಡಿಯ ಶೆಟ್ಟರ್ ಮುರಿದು ನುಗ್ಗಿ ಕೈಗೆ ಸಿಕ್ಕ ವಸ್ತುಗಳನ್ನು ದೋಚಿ ಅರ್ಧ ಗಂಟೆಯೊಳಗೆ ಅಲ್ಲಿಂದ ಪರಾರಿಯಾಗಿದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಬಾಲ ಬಿಚ್ಚಿದ ರೌಡಿಗಳು; ಉದ್ಯಮಿ ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ, ಬೆದರಿಕೆ ಆಡಿಯೋ ಇಲ್ಲಿದೆ

ಬಳಿಕ ಅಂಗಡಿ ಮಾಲೀಕರು ಸೆಪ್ಟೆಂಬರ್ 29ರಂದು ಸಂಜಯ್​ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಕೊಂಡು ತನಿಖೆಗೆ ಆರಂಭಿಸಿದ್ದ ಪೊಲೀಸರು ಮೊದಲು ಕಳ್ಳತನವಾದ ಅಂಗಡಿಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಹಾಗೇ ಅಕ್ಕ-ಪಕ್ಕದ ಸಿಸಿ ಟಿವಿಗಳನ್ನು ಚೆಕ್ ಮಾಡಿದ್ದು, ಅಂಗಡಿ ಮುಂದೆ ಕಾರು ನಿಂತಿರುವ ಪತ್ತೆಯಾಗಿದೆ. ಬಳಿಕ ಆ ಯಾವ ಕಡೆ ಹೋಗಿದೆ ಎನ್ನುವುದನ್ನು ನೋಡಿಕೊಂಡು ಆ ಮಾರ್ಗದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆ ಕಾರು ವೇಗವಾಗಿ ನಾಲ್ಕು ಸಿಗ್ನಲ್​ ಜಂಪ್ ಮಾಡಿಕೊಂಡು ಹೋಗಿದೆ. ಇದರಿಂದ ಪೊಲೀಸರಿಗೆ ಆ ಕಾರಿನ ಮೇಲೆಯೇ ಅನುಮಾನ ಬಂದಿದೆ.

ಸುಳಿವು ಕೊಟ್ಟ ಟ್ರಾಫಿಕ್ ಫೈನ್​ ಚಲನ್​

ಕಳವು ಮಾಡಿದ ವಸ್ತುಗಳನ್ನು ಕಾರಿನಲ್ಲಿ ತುಂಬಿಕೊಂಡು ಎಚ್‌ಎಸ್‌ಆರ್ ಲೇಔಟ್‌ಗೆ ಬರುವಾಗ ಮಾರ್ಗಮಧ್ಯೆ ಭಯದಲ್ಲಿ ನಾಲ್ಕು ಸಿಗ್ನಲ್ ಜಂಪ್ ಮಾಡಿದ್ದರು. ತನಿಖೆ ಕೈಗೊಂಡ ಪೊಲೀಸರಿಗೆ ಅಂಗಡಿ ಸಮೀಪದ ಸಿಸಿ ಕ್ಯಾಮರಾದಲ್ಲಿ ವಾಹನದ ನಂಬರ್ ಪ್ಲೇಟ್ ದೃಶ್ಯ ಸೆರೆಯಾಗಿತ್ತು. ಸಿಸಿ ಕ್ಯಾಮರಾಗಳ ಸಹಾಯದಿಂದ ಕಾರು ಜಾಡು ಹಿಡಿಯುತ್ತಾ ಸಾಗಿದಾಗ ಸಿಗ್ನಲ್ ಜಂಪ್ ಮಾಡಿರುವುದು ಗೊತ್ತಾಗಿತ್ತು.

ಸಂಚಾರ ನಿರ್ವಹಣಾ ಕೇಂದ್ರದಲ್ಲಿ ಕಾರಿನ ನಂಬರ್ ಪರಿಶೀಲನೆ ಮಾಡಿದಾಗ ಸ್ವಯಂ ಚಾಲಿತವಾಗಿ ದಂಡ ಜನರೇಟ್ ಆಗಿತ್ತು. ಅದರಲ್ಲಿನ ವಿಳಾಸ ಹುಡುಕಿ ಹೋದಾಗ, ಮನೆ ಸಮೀಪದ ಮೈದಾನದಲ್ಲಿ ಕಾರು ನಿಂತಿತ್ತು. ಬಳಿಕ ಸ್ವಲ್ಪ ಹೊತ್ತಿಗೆ  ಕಾರಿನ ಬಳಿಗೆ ಬಂದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳ್ಳತನ ಬಟಾಬಯಲಾಗಿದೆ. ಬಳಿಕ  ಅಜಯ್ ಮಾಹಿತಿ ಸಿಕ್ಕಿದೆ. ಆತನನ್ನು ವಶಕ್ಕೆ ಪಡೆದಾಗ ಇತರರು ಸಿಕ್ಕಿಬಿದ್ದಿದ್ದಾರೆ. ಬಂಧಿತರಿಂದ ಬಂಧಿತರಿಂದ 50 ಲಕ್ಷ ರೂ. ಮೌಲ್ಯದ ದುಬಾರಿ ಮೊಬೈಲ್, ಕೈಗಡಿಯಾರ, ಲ್ಯಾಪ್‌ಟಾಪ್, ಕ್ಯಾಮರಾ, ಸ್ಮಾರ್ಟ್ ವಾರ್ಚ್ ವಶಪಡಿಸಿಕೊಳ್ಳಲಾಗಿದೆ.

ಬೆಂಗಳೂರಿನ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ರೇಣುಕಾ ಸ್ವಾಮಿ ಕೊಲೆಯಾಗಿ ಒಂದು ವರ್ಷ, ಕುಟುಂಬದವರಿಂದ ಪೂಜೆ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
ಆಂಗ್ಲರ ನಾಡಿನಲ್ಲಿ ಸಮರಾಭ್ಯಾಸ ಶುರು ಮಾಡಿದ ಟೀಂ ಇಂಡಿಯಾ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು