AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿಮರಿಗಳ ಸಾವು

ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಮೂರು ಹುಲಿ ಮರಿಗಳು ಮೃತಪಟ್ಟಿವೆ. ಅಧಿಕಾರಿಗಳು ಮತ್ತು ವೈದ್ಯರ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಾಣಿಪ್ರಿಯರು ಅನುಭವಿ ವೈದ್ಯರ ನೇಮಕಕ್ಕೆ ಆಗ್ರಹಿಸಿದ್ದಾರೆ. ಇತ್ತೀಚೆಗೆ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳು ಮೃತಪಟ್ಟಿದ್ದವು.

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ 3 ಹುಲಿಮರಿಗಳ ಸಾವು
ಹುಲಿ ಮತ್ತು ಮರಿಗಳು
ರಾಮು, ಆನೇಕಲ್​
| Edited By: |

Updated on:Jul 13, 2025 | 6:09 PM

Share

ಆನೇಕಲ್​, 13: ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು (Tigers) ಮೃತಪಟ್ಟ ಬೆನ್ನಲ್ಲೇ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ (Bannerghatta Biological Park) ಮೂರು ಹುಲಿ ಮರಿಗಳು ಸಾವನ್ನಪ್ಪಿವೆ. ವಾರದ ಹಿಂದೆ ಹಿಮಾ ದಾಸ್​ ಎಂಬ ಏಳು ವರ್ಷದ ಹೆಣ್ಣು ಹುಲಿ ಎರಡು ಗಂಡು, ಒಂದು ಹೆಣ್ಣು ಸೇರಿದಂತೆ ಮೂರು ಮರಿಗಳಿಗೆ ಜನ್ಮ ನೀಡಿತ್ತು. ಆದರೆ, ತಾಯಿ ಹುಲಿ ಮರಿಗಳಿಗೆ ಹಾಲುಣಿಸಿ ಆರೈಕೆ ಮಾಡದ ಹಿನ್ನೆಲೆಯಲ್ಲಿ ಮೂರೂ ಹುಲಿಗಳು ಮೃತಪಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಮಾ ದಾಸ್​ ಹೆಣ್ಣು ಹುಲಿ ಮೊದಲು ಎರಡು ಮರಿಗಳಿಗೆ ಜನ್ಮನೀಡಿತ್ತು. ಈ ಮರಿಗಳಿಗೆ ಹಾಲುಣಿಸಿ ಆರೈಕೆ ಮಾಡಿತ್ತು. ಈ ಎರಡೂ ಹುಲಿಗಳು ಸದ್ಯ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿವೆ. ಎರಡನೇ ಬಾರಿ ಹಿಮಾ ದಾಸ್​ ಹುಲಿ ಮೂರು ಮರಿಗಳಿಗೆ ಜನ್ಮ ನೀಡಿತ್ತು. ಈ ಮರಿಗಳಿಗೆ ಹೆಣ್ಣು ಹಲಿ ಹಾಲುಣಿಸದೆ ದೂರ ಇಟ್ಟಿತ್ತು. ಆಗ, ಮೃಗಾಲಯದ ಅಧಿಕಾರಿಗಳು ಮತ್ತು ವೈದ್ಯರು ಎಚ್ಚೆತ್ತುಕೊಳ್ಳಬೇಕಿತ್ತು. ಆದರೆ, ಅಧಿಕಾರಿಗಳಲಾಗಲಿ ಅಥವಾ ವೈದ್ಯರಾಗಲಿ ಈ ಬಗ್ಗೆ ಗಮನ ಹರಿಸಲಿಲ್ಲ. ಇದರಿಂದ, ಮೂರೂ ಹುಲಿ ಮರಿಗಳು ಮೃತಪಟ್ಟಿವೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ

ಇದನ್ನೂ ಓದಿ
Image
ಚಾಮರಾಜನಗರ: ಹುಲಿ ಹಂತಕರು 3 ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ
Image
ಹುಲಿಗಳನ್ನು ಕೊಂದ ಅಪರಾಧಿಗಳಿಗೆ ಡಬಲ್ ಶಿಕ್ಷೆಯಾಗಲಿದೆ: ಅರಣ್ಯಾಧಿಕಾರಿ
Image
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
Image
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್

ಅನನುಭವಿ ಅಧಿಕಾರಿಗಳು ಮತ್ತು ವೈದ್ಯರ ನಿರ್ಲಕ್ಷ್ಯದ ಬಗ್ಗೆ ಪ್ರಾಣಿ‌ ಪ್ರಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನನುಭವಿ ವೈದ್ಯರಿಂದ ವನ್ಯಜೀವಿಗಳು ಸಾಯುತ್ತಿವೆ. ಅನುಭವಿ ವೈದ್ಯರನ್ನು ಸರ್ಕಾರ ನೇಮಿಸುವು ಬೇಡ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಇಡಿ ಸೂರ್ಯ ಸೇನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ ಎಂದು ಪ್ರಾಣಿ ಪ್ರಿಯರು ಆರೋಪ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:09 pm, Sun, 13 July 25

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ