AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಸೆಂ.ಮೀ ಉದ್ದದ ಗಣೇಶ ವಿಗ್ರಹವನ್ನು ನುಂಗಿದ 3 ವರ್ಷದ ಬಾಲಕ

ಆಟವಾಡುತ್ತಿದ್ದ ಬಾಲಕ ತಿಳಿಯದೇ 5 ಸೆಂಟಿ ಮೀಟರ್ ಉದ್ದದ ಗಣೇಶ ವಿಗ್ರಹವನ್ನು ನುಂಗಿದ್ದಾನೆ. ಗಂಟಲು ನೋವು ಮತ್ತು ಎಸೆದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಹತ್ತಿರದ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಕಳೆದ ಶುಕ್ರವಾರ ದಾಖಲಿಸಲಾಯಿತು.

5 ಸೆಂ.ಮೀ ಉದ್ದದ ಗಣೇಶ ವಿಗ್ರಹವನ್ನು ನುಂಗಿದ 3 ವರ್ಷದ ಬಾಲಕ
TV9 Web
| Updated By: shruti hegde|

Updated on:Jul 26, 2021 | 11:56 AM

Share

ಮೂರು ವರ್ಷದ ಬಾಲಕ ಗಣೇಶ ವಿಗ್ರಹವನ್ನು ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಹಾರ ಮತ್ತು ಲಾಲಾರಸವನ್ನು ನುಂಗಲು ಎದೆ ನೋವು ಎಂದು ಹೇಳುತ್ತಿದ್ದ ಬಾಲಕನನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಕ್ಸರೆ ಮೂಲಕ ಗಣೇಶ ವಿಗ್ರಹ ಬಾಲಕನ ಎದೆ ಭಾಗದಲ್ಲಿ ಸಿಲುಕೊಂಡಿರುವುದು ತಿಳಿದು ಬಂದಿದೆ.

ಮಗುವಿನ ಹೆಸರು ಬಸವ. ಮೂರು ವರ್ಷದ ಬಾಲಕ. ಆಟವಾಡುತ್ತಿದ್ದ ಬಾಲಕ ತಿಳಿಯದೇ 5 ಸೆಂಟಿ ಮೀಟರ್ ಉದ್ದದ ಗಣೇಶ ವಿಗ್ರಹವನ್ನು ನುಂಗಿದ್ದಾನೆ. ಗಂಟಲು ನೋವು ಮತ್ತು ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಹತ್ತಿರದ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಕಳೆದ ಶುಕ್ರವಾರ ದಾಖಲಿಸಲಾಯಿತು. ಬಾಲಕ ಗಣೇಶ ವಿಗ್ರಹವನ್ನು ನುಂಗಿರುವುದು ತಿಳಿದು ಬಂದಿದೆ.

ಎಂಡಸ್ಕೋಪಿ ವಿಧಾನದ ಮೂಲಕ ವೈದ್ಯರು ವಿಗ್ರಹವನ್ನು ತೆಗೆದಿದ್ದಾರೆ. ಬಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂಬುದು ತಿಳಿದು ಬಂದಿದೆ. ಬಾಲಕ ಸುರಕ್ಷಿತನಾಗಿದ್ದರಿಂದ ಶುಕ್ರವಾರ ಸಂಜೆಯ ವೇಳೆಗೆ ಬಾಲಕನನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಬಾಲಕ ವಿಗ್ರಹವನ್ನು ನುಂಗಿದ್ದರಿಂದ ಆತನಿಗೆ ನೀರು ಕುಡಿಯಲೂ ಸಾಧ್ಯವಾಗತ್ತಿರಲಿಲ್ಲ. ಎದೆಯ ಭಾಗದಲ್ಲಿ ವಿಗ್ರಹ ಸಿಲುಕಿಕೊಂಡಿತ್ತು. ಇದರಿಂದ ಅನ್ನನಾಳಕ್ಕೆ ತೊಂದರೆಯುಂಟಾಗುತ್ತಿತ್ತು. ಜತೆಗೆ ಬಾಲಕ ಅಪಾಯವನ್ನು ಎದುರಿಸಬೇಕಾಗುವ ಸಂಭವವಿತ್ತು. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಾದ್ದರಿಂದ ಚಿಕಿತ್ಸೆಯ ಮೂಲಕ ಬಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವೈದ್ಯರಾದ ಡಾ.ಶ್ರೀಕಾತ್ ಕೆ.ಪಿ ಹೇಳಿದ್ದಾರೆ.

ಇದನ್ನೂ ಓದಿ:

ಬಾಲಕಿಯ ಹತ್ಯೆಗೆ ಕಾರಣವಾದ ಜೀನ್ಸ್​​; ಅಜ್ಜ, ಇಬ್ಬರು ಚಿಕ್ಕಪ್ಪಂದಿರೇ ಆರೋಪಿಗಳು

Shocking News: ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಬಾವಿ ಪಾಲಾದ 40 ಜನ; ಮೂವರು ಸಾವು, 11 ಮಂದಿ ಕಣ್ಮರೆ

(Three Years boy swallows lord Ganesha idol in Bangalore)

Published On - 11:43 am, Mon, 26 July 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ