AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ಸೆಂ.ಮೀ ಉದ್ದದ ಗಣೇಶ ವಿಗ್ರಹವನ್ನು ನುಂಗಿದ 3 ವರ್ಷದ ಬಾಲಕ

ಆಟವಾಡುತ್ತಿದ್ದ ಬಾಲಕ ತಿಳಿಯದೇ 5 ಸೆಂಟಿ ಮೀಟರ್ ಉದ್ದದ ಗಣೇಶ ವಿಗ್ರಹವನ್ನು ನುಂಗಿದ್ದಾನೆ. ಗಂಟಲು ನೋವು ಮತ್ತು ಎಸೆದಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಹತ್ತಿರದ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಕಳೆದ ಶುಕ್ರವಾರ ದಾಖಲಿಸಲಾಯಿತು.

5 ಸೆಂ.ಮೀ ಉದ್ದದ ಗಣೇಶ ವಿಗ್ರಹವನ್ನು ನುಂಗಿದ 3 ವರ್ಷದ ಬಾಲಕ
TV9 Web
| Edited By: |

Updated on:Jul 26, 2021 | 11:56 AM

Share

ಮೂರು ವರ್ಷದ ಬಾಲಕ ಗಣೇಶ ವಿಗ್ರಹವನ್ನು ನುಂಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಆಹಾರ ಮತ್ತು ಲಾಲಾರಸವನ್ನು ನುಂಗಲು ಎದೆ ನೋವು ಎಂದು ಹೇಳುತ್ತಿದ್ದ ಬಾಲಕನನನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಎಕ್ಸರೆ ಮೂಲಕ ಗಣೇಶ ವಿಗ್ರಹ ಬಾಲಕನ ಎದೆ ಭಾಗದಲ್ಲಿ ಸಿಲುಕೊಂಡಿರುವುದು ತಿಳಿದು ಬಂದಿದೆ.

ಮಗುವಿನ ಹೆಸರು ಬಸವ. ಮೂರು ವರ್ಷದ ಬಾಲಕ. ಆಟವಾಡುತ್ತಿದ್ದ ಬಾಲಕ ತಿಳಿಯದೇ 5 ಸೆಂಟಿ ಮೀಟರ್ ಉದ್ದದ ಗಣೇಶ ವಿಗ್ರಹವನ್ನು ನುಂಗಿದ್ದಾನೆ. ಗಂಟಲು ನೋವು ಮತ್ತು ಎದೆಯಲ್ಲಿ ನೋವು ಕಾಣಿಸಿಕೊಂಡಿದ್ದರಿಂದ ಹತ್ತಿರದ ಓಲ್ಡ್ ಏರ್ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಗೆ ಕಳೆದ ಶುಕ್ರವಾರ ದಾಖಲಿಸಲಾಯಿತು. ಬಾಲಕ ಗಣೇಶ ವಿಗ್ರಹವನ್ನು ನುಂಗಿರುವುದು ತಿಳಿದು ಬಂದಿದೆ.

ಎಂಡಸ್ಕೋಪಿ ವಿಧಾನದ ಮೂಲಕ ವೈದ್ಯರು ವಿಗ್ರಹವನ್ನು ತೆಗೆದಿದ್ದಾರೆ. ಬಾಲಕನಿಗೆ ಯಾವುದೇ ಅಪಾಯವಾಗಿಲ್ಲ ಎಂಬುದು ತಿಳಿದು ಬಂದಿದೆ. ಬಾಲಕ ಸುರಕ್ಷಿತನಾಗಿದ್ದರಿಂದ ಶುಕ್ರವಾರ ಸಂಜೆಯ ವೇಳೆಗೆ ಬಾಲಕನನ್ನು ಡಿಸ್ಚಾರ್ಜ್ ಮಾಡಲಾಗಿದೆ.

ಬಾಲಕ ವಿಗ್ರಹವನ್ನು ನುಂಗಿದ್ದರಿಂದ ಆತನಿಗೆ ನೀರು ಕುಡಿಯಲೂ ಸಾಧ್ಯವಾಗತ್ತಿರಲಿಲ್ಲ. ಎದೆಯ ಭಾಗದಲ್ಲಿ ವಿಗ್ರಹ ಸಿಲುಕಿಕೊಂಡಿತ್ತು. ಇದರಿಂದ ಅನ್ನನಾಳಕ್ಕೆ ತೊಂದರೆಯುಂಟಾಗುತ್ತಿತ್ತು. ಜತೆಗೆ ಬಾಲಕ ಅಪಾಯವನ್ನು ಎದುರಿಸಬೇಕಾಗುವ ಸಂಭವವಿತ್ತು. ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಾದ್ದರಿಂದ ಚಿಕಿತ್ಸೆಯ ಮೂಲಕ ಬಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವೈದ್ಯರಾದ ಡಾ.ಶ್ರೀಕಾತ್ ಕೆ.ಪಿ ಹೇಳಿದ್ದಾರೆ.

ಇದನ್ನೂ ಓದಿ:

ಬಾಲಕಿಯ ಹತ್ಯೆಗೆ ಕಾರಣವಾದ ಜೀನ್ಸ್​​; ಅಜ್ಜ, ಇಬ್ಬರು ಚಿಕ್ಕಪ್ಪಂದಿರೇ ಆರೋಪಿಗಳು

Shocking News: ಬಾವಿಗೆ ಬಿದ್ದ 8 ವರ್ಷದ ಬಾಲಕಿಯನ್ನು ರಕ್ಷಿಸಲು ಹೋಗಿ ಬಾವಿ ಪಾಲಾದ 40 ಜನ; ಮೂವರು ಸಾವು, 11 ಮಂದಿ ಕಣ್ಮರೆ

(Three Years boy swallows lord Ganesha idol in Bangalore)

Published On - 11:43 am, Mon, 26 July 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು