AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ

ಡ್ಡಗುಬ್ಬಿ ಕೆರೆಯಲ್ಲಿ ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ
ಸಾಂಧರ್ಬಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on:May 27, 2022 | 10:29 AM

Share

ಬೆಂಗಳೂರು: ದೊಡ್ಡಗುಬ್ಬಿ ಕೆರೆಯಲ್ಲಿ (Doddagubbi lake) ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ. ನೀರುಪಾಲಾಗಿದ್ದ ಬಾಲಕ ಸಾಹಿಲ್ ಶವ ಪತ್ತೆಯಾಗಿದೆ. ೨ ಎಸ್ ಡಿ ಆರ್ ಎಫ್ (SDRF) ೧ ಅಗ್ನಿಶಾಮಕ  ಸಿಬ್ಬಂದಿಯಿಂದ (Fire Department) ಶೋಧ ಕಾರ್ಯ ನಡೆಸುತ್ತಿದ್ದಾರೆ. ನೀರುಪಾಲಾದ ಇಮ್ರಾನ್ ಮತ್ತು ಮುಬಾರಕ್​ಗಾಗಿ ಶೋಧ ಕಾರ್ಯ ಆರಂಭಗೊಂಡಿದೆ. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರುಪಾಲಾಗಿದ್ದರು.  ಸದ್ಯ ದೊಡ್ಡಗುಬ್ಬಿ ಕೆರೆಯಲ್ಲಿ  ಇಮ್ರಾನ್, ಮುಬಾರಕ್ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇದನ್ನು ಓದಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಕೊಲೆ; ಯುವತಿ ಸಹೋದರ ಸೇರಿ ಇಬ್ಬರು ಅರೆಸ್ಟ್

ನಿನ್ನೆ (ಮೇ 26)ರಂದು ಮಧ್ಯಾಹ್ನ ಮೂವರು ಯುವಕರು ನಾಗವಾರದ ದೊಡ್ಡಗುಬ್ಬಿ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಮೂವರು ಯುವಕರು ನಾಪತ್ತೆಯಾಗಿದ್ದರು. ಮಧ್ಯಾಹ್ನ 1 ಗಂಟೆಯಿಂದ ಇಮ್ರಾನ್(17), ಮುಭಾರಕ್ (17), ಸಾಹಿಲ್(15) ನಾಪತ್ತೆಯಾದವರು. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್

ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಯೂ.ಡಿ.ಆರ್ ದಾಖಲಾಗಿದೆ. ಸರಾಯಿಪಾಳ್ಯದ ಫಾತಿಮಾ ಲೇಔಟ್ ನಿವಾಸಿ ಇಮ್ರಾನ್ ಪಾಷ (17) ಎಲಿಮೆಂಟ್ಸ್ ಮಾಲ್ ಪಿವಿಆರ್ ನಲ್ಲಿ ಹೆಲ್ಪರ್ ಕೆಲಸ ಮಾಡುತಿದ್ದ. ಮುಬಾರಕ್ (17) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ ಬಳಿ ವಾಸವಾಗಿದ್ದು ವೆಲ್ಡಿಂಗ್ ಕೆಲಸ ಮಾಡುತಿದ್ದ. ಸಾಹಿಲ್ (15) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ, ಫಾತೀಮಾ ಲೇಔಟ್ ನಲ್ಲಿ ವಾಸವಾಗಿದ್ದ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Fri, 27 May 22

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ