AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ

ಡ್ಡಗುಬ್ಬಿ ಕೆರೆಯಲ್ಲಿ ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:May 27, 2022 | 10:29 AM

Share

ಬೆಂಗಳೂರು: ದೊಡ್ಡಗುಬ್ಬಿ ಕೆರೆಯಲ್ಲಿ (Doddagubbi lake) ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ. ನೀರುಪಾಲಾಗಿದ್ದ ಬಾಲಕ ಸಾಹಿಲ್ ಶವ ಪತ್ತೆಯಾಗಿದೆ. ೨ ಎಸ್ ಡಿ ಆರ್ ಎಫ್ (SDRF) ೧ ಅಗ್ನಿಶಾಮಕ  ಸಿಬ್ಬಂದಿಯಿಂದ (Fire Department) ಶೋಧ ಕಾರ್ಯ ನಡೆಸುತ್ತಿದ್ದಾರೆ. ನೀರುಪಾಲಾದ ಇಮ್ರಾನ್ ಮತ್ತು ಮುಬಾರಕ್​ಗಾಗಿ ಶೋಧ ಕಾರ್ಯ ಆರಂಭಗೊಂಡಿದೆ. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರುಪಾಲಾಗಿದ್ದರು.  ಸದ್ಯ ದೊಡ್ಡಗುಬ್ಬಿ ಕೆರೆಯಲ್ಲಿ  ಇಮ್ರಾನ್, ಮುಬಾರಕ್ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇದನ್ನು ಓದಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಕೊಲೆ; ಯುವತಿ ಸಹೋದರ ಸೇರಿ ಇಬ್ಬರು ಅರೆಸ್ಟ್

ನಿನ್ನೆ (ಮೇ 26)ರಂದು ಮಧ್ಯಾಹ್ನ ಮೂವರು ಯುವಕರು ನಾಗವಾರದ ದೊಡ್ಡಗುಬ್ಬಿ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಮೂವರು ಯುವಕರು ನಾಪತ್ತೆಯಾಗಿದ್ದರು. ಮಧ್ಯಾಹ್ನ 1 ಗಂಟೆಯಿಂದ ಇಮ್ರಾನ್(17), ಮುಭಾರಕ್ (17), ಸಾಹಿಲ್(15) ನಾಪತ್ತೆಯಾದವರು. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್

ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಯೂ.ಡಿ.ಆರ್ ದಾಖಲಾಗಿದೆ. ಸರಾಯಿಪಾಳ್ಯದ ಫಾತಿಮಾ ಲೇಔಟ್ ನಿವಾಸಿ ಇಮ್ರಾನ್ ಪಾಷ (17) ಎಲಿಮೆಂಟ್ಸ್ ಮಾಲ್ ಪಿವಿಆರ್ ನಲ್ಲಿ ಹೆಲ್ಪರ್ ಕೆಲಸ ಮಾಡುತಿದ್ದ. ಮುಬಾರಕ್ (17) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ ಬಳಿ ವಾಸವಾಗಿದ್ದು ವೆಲ್ಡಿಂಗ್ ಕೆಲಸ ಮಾಡುತಿದ್ದ. ಸಾಹಿಲ್ (15) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ, ಫಾತೀಮಾ ಲೇಔಟ್ ನಲ್ಲಿ ವಾಸವಾಗಿದ್ದ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Fri, 27 May 22

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ