AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ

ಡ್ಡಗುಬ್ಬಿ ಕೆರೆಯಲ್ಲಿ ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ.

ದೊಡ್ಡಗುಬ್ಬಿ ಕೆರೆಯಲ್ಲಿ ನೀರು ಪಾಲಾಗಿದ್ದ ಮೂವರು ಬಾಲಕರು; ಓರ್ವ ಬಾಲಕನ ಶವ ಪತ್ತೆ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on:May 27, 2022 | 10:29 AM

ಬೆಂಗಳೂರು: ದೊಡ್ಡಗುಬ್ಬಿ ಕೆರೆಯಲ್ಲಿ (Doddagubbi lake) ಮೂವರು ಬಾಲಕರು ನೀರುಪಾಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕನ ಶವ ಪತ್ತೆಯಾಗಿದೆ. ನೀರುಪಾಲಾಗಿದ್ದ ಬಾಲಕ ಸಾಹಿಲ್ ಶವ ಪತ್ತೆಯಾಗಿದೆ. ೨ ಎಸ್ ಡಿ ಆರ್ ಎಫ್ (SDRF) ೧ ಅಗ್ನಿಶಾಮಕ  ಸಿಬ್ಬಂದಿಯಿಂದ (Fire Department) ಶೋಧ ಕಾರ್ಯ ನಡೆಸುತ್ತಿದ್ದಾರೆ. ನೀರುಪಾಲಾದ ಇಮ್ರಾನ್ ಮತ್ತು ಮುಬಾರಕ್​ಗಾಗಿ ಶೋಧ ಕಾರ್ಯ ಆರಂಭಗೊಂಡಿದೆ. ನಿನ್ನೆ ಮಧ್ಯಾಹ್ನ ಕೆರೆಯಲ್ಲಿ ಈಜಲು ತೆರಳಿದ್ದಾಗ ನೀರುಪಾಲಾಗಿದ್ದರು.  ಸದ್ಯ ದೊಡ್ಡಗುಬ್ಬಿ ಕೆರೆಯಲ್ಲಿ  ಇಮ್ರಾನ್, ಮುಬಾರಕ್ ಮೃತದೇಹಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಇದನ್ನು ಓದಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದಕ್ಕೆ ದಲಿತ ಯುವಕನ ಕೊಲೆ; ಯುವತಿ ಸಹೋದರ ಸೇರಿ ಇಬ್ಬರು ಅರೆಸ್ಟ್

ನಿನ್ನೆ (ಮೇ 26)ರಂದು ಮಧ್ಯಾಹ್ನ ಮೂವರು ಯುವಕರು ನಾಗವಾರದ ದೊಡ್ಡಗುಬ್ಬಿ ಕೆರೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ  ಮೂವರು ಯುವಕರು ನಾಪತ್ತೆಯಾಗಿದ್ದರು. ಮಧ್ಯಾಹ್ನ 1 ಗಂಟೆಯಿಂದ ಇಮ್ರಾನ್(17), ಮುಭಾರಕ್ (17), ಸಾಹಿಲ್(15) ನಾಪತ್ತೆಯಾದವರು. ನಾಪತ್ತೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನು ಓದಿ: 20 ನಿಮಿಷ ಮೊದಲೇ ರೈಲು ನಿಲ್ದಾಣ ತಲುಪಿದ್ದಕ್ಕೆ ಪ್ಲಾಟ್​ಫಾರ್ಮ್​ನಲ್ಲೇ ಡ್ಯಾನ್ಸ್​ ಮಾಡಿದ ಪ್ರಯಾಣಿಕರು; ವಿಡಿಯೋ ವೈರಲ್

ಘಟನೆ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಯೂ.ಡಿ.ಆರ್ ದಾಖಲಾಗಿದೆ. ಸರಾಯಿಪಾಳ್ಯದ ಫಾತಿಮಾ ಲೇಔಟ್ ನಿವಾಸಿ ಇಮ್ರಾನ್ ಪಾಷ (17) ಎಲಿಮೆಂಟ್ಸ್ ಮಾಲ್ ಪಿವಿಆರ್ ನಲ್ಲಿ ಹೆಲ್ಪರ್ ಕೆಲಸ ಮಾಡುತಿದ್ದ. ಮುಬಾರಕ್ (17) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ ಬಳಿ ವಾಸವಾಗಿದ್ದು ವೆಲ್ಡಿಂಗ್ ಕೆಲಸ ಮಾಡುತಿದ್ದ. ಸಾಹಿಲ್ (15) ಫಾತೀಮಾ ಲೇಔಟ್ ನ ಅಬೂಬ್ ಕರ್ ಮಸೀದಿ ರಸ್ತೆ, ಫಾತೀಮಾ ಲೇಔಟ್ ನಲ್ಲಿ ವಾಸವಾಗಿದ್ದ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಎಂಬ ಮಾಹಿತಿ ಸಿಕ್ಕಿದೆ.

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:29 am, Fri, 27 May 22

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ