AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?
ಜಯನಗರ, ಚಾಮರಾಜಪೇಟೆಯಯಲ್ಲಿ ಬಿಎಂಟಿಸಿ ಬಸ್​ಗಳು ಹೊತ್ತು ಉರಿದಿತ್ತು
TV9 Web
| Edited By: sandhya thejappa|

Updated on:Apr 10, 2022 | 11:18 AM

Share

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು?: * ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ. * ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ. * ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ. * ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ. * ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಕಳೆದಬಾರಿ ಚಾಮರಾಜಪೇಟೆ ಪೊಲೀಸ್ ಸ್ಟೇಶನ್ ಠಾಣೆ ವ್ಯಾಪ್ತಿಯಲ್ಲಿ (ಮಕ್ಕಳ ಕೂಟ) ಚಲಿಸುತ್ತಿದ್ದ ಬಿಎಂಟಿಸಿ  ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಂದರೆ ಶನಿವಾರ ಶೇಷಾದ್ರಿಪುರಂನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು. ಅದೃಷ್ಟದ ಸಂಗತಿಯೆಂದರೆ ಈ ಅನಾಹುತದಲ್ಲಿ ಯಾರೂ ತೊಂದರೆಗೊಳಗಾಗಿಲ್ಲ, ಗಾಯಗಳಾಗಿಲ್ಲ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡಕೂಡಲೇ ಜಾಗೃತರಾದ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದರು.

ಇದನ್ನೂ ಓದಿ

IPL 2022 Points Table: ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದ ಆರ್​​ಸಿಬಿ: ಪಾತಾಳದಲ್ಲಿ ಸಿಎಸ್​ಕೆ, ಮುಂಬೈ

ಪಾಕಿಸ್ತಾನದ ಪ್ರಧಾನಿ ಹುದ್ದೆಯಲ್ಲಿದ್ದು ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್: ತುಟಿದ ಜಾರಿದ ಈ 8 ಮಾತುಗಳಿಂದ ಸೃಷ್ಟಿಯಾಗಿತ್ತು ವಿವಾದ

Published On - 11:13 am, Sun, 10 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು