AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?
ಜಯನಗರ, ಚಾಮರಾಜಪೇಟೆಯಯಲ್ಲಿ ಬಿಎಂಟಿಸಿ ಬಸ್​ಗಳು ಹೊತ್ತು ಉರಿದಿತ್ತು
TV9 Web
| Updated By: sandhya thejappa|

Updated on:Apr 10, 2022 | 11:18 AM

Share

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು?: * ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ. * ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ. * ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ. * ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ. * ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಕಳೆದಬಾರಿ ಚಾಮರಾಜಪೇಟೆ ಪೊಲೀಸ್ ಸ್ಟೇಶನ್ ಠಾಣೆ ವ್ಯಾಪ್ತಿಯಲ್ಲಿ (ಮಕ್ಕಳ ಕೂಟ) ಚಲಿಸುತ್ತಿದ್ದ ಬಿಎಂಟಿಸಿ  ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಂದರೆ ಶನಿವಾರ ಶೇಷಾದ್ರಿಪುರಂನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು. ಅದೃಷ್ಟದ ಸಂಗತಿಯೆಂದರೆ ಈ ಅನಾಹುತದಲ್ಲಿ ಯಾರೂ ತೊಂದರೆಗೊಳಗಾಗಿಲ್ಲ, ಗಾಯಗಳಾಗಿಲ್ಲ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡಕೂಡಲೇ ಜಾಗೃತರಾದ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದರು.

ಇದನ್ನೂ ಓದಿ

IPL 2022 Points Table: ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದ ಆರ್​​ಸಿಬಿ: ಪಾತಾಳದಲ್ಲಿ ಸಿಎಸ್​ಕೆ, ಮುಂಬೈ

ಪಾಕಿಸ್ತಾನದ ಪ್ರಧಾನಿ ಹುದ್ದೆಯಲ್ಲಿದ್ದು ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್: ತುಟಿದ ಜಾರಿದ ಈ 8 ಮಾತುಗಳಿಂದ ಸೃಷ್ಟಿಯಾಗಿತ್ತು ವಿವಾದ

Published On - 11:13 am, Sun, 10 April 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​