AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?
ಜಯನಗರ, ಚಾಮರಾಜಪೇಟೆಯಯಲ್ಲಿ ಬಿಎಂಟಿಸಿ ಬಸ್​ಗಳು ಹೊತ್ತು ಉರಿದಿತ್ತು
TV9 Web
| Edited By: |

Updated on:Apr 10, 2022 | 11:18 AM

Share

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು?: * ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ. * ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ. * ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ. * ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ. * ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಕಳೆದಬಾರಿ ಚಾಮರಾಜಪೇಟೆ ಪೊಲೀಸ್ ಸ್ಟೇಶನ್ ಠಾಣೆ ವ್ಯಾಪ್ತಿಯಲ್ಲಿ (ಮಕ್ಕಳ ಕೂಟ) ಚಲಿಸುತ್ತಿದ್ದ ಬಿಎಂಟಿಸಿ  ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಂದರೆ ಶನಿವಾರ ಶೇಷಾದ್ರಿಪುರಂನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು. ಅದೃಷ್ಟದ ಸಂಗತಿಯೆಂದರೆ ಈ ಅನಾಹುತದಲ್ಲಿ ಯಾರೂ ತೊಂದರೆಗೊಳಗಾಗಿಲ್ಲ, ಗಾಯಗಳಾಗಿಲ್ಲ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡಕೂಡಲೇ ಜಾಗೃತರಾದ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದರು.

ಇದನ್ನೂ ಓದಿ

IPL 2022 Points Table: ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದ ಆರ್​​ಸಿಬಿ: ಪಾತಾಳದಲ್ಲಿ ಸಿಎಸ್​ಕೆ, ಮುಂಬೈ

ಪಾಕಿಸ್ತಾನದ ಪ್ರಧಾನಿ ಹುದ್ದೆಯಲ್ಲಿದ್ದು ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್: ತುಟಿದ ಜಾರಿದ ಈ 8 ಮಾತುಗಳಿಂದ ಸೃಷ್ಟಿಯಾಗಿತ್ತು ವಿವಾದ

Published On - 11:13 am, Sun, 10 April 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್