AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?
ಜಯನಗರ, ಚಾಮರಾಜಪೇಟೆಯಯಲ್ಲಿ ಬಿಎಂಟಿಸಿ ಬಸ್​ಗಳು ಹೊತ್ತು ಉರಿದಿತ್ತು
TV9 Web
| Edited By: sandhya thejappa|

Updated on:Apr 10, 2022 | 11:18 AM

Share

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು?: * ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ. * ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ. * ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ. * ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ. * ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಕಳೆದಬಾರಿ ಚಾಮರಾಜಪೇಟೆ ಪೊಲೀಸ್ ಸ್ಟೇಶನ್ ಠಾಣೆ ವ್ಯಾಪ್ತಿಯಲ್ಲಿ (ಮಕ್ಕಳ ಕೂಟ) ಚಲಿಸುತ್ತಿದ್ದ ಬಿಎಂಟಿಸಿ  ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಂದರೆ ಶನಿವಾರ ಶೇಷಾದ್ರಿಪುರಂನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು. ಅದೃಷ್ಟದ ಸಂಗತಿಯೆಂದರೆ ಈ ಅನಾಹುತದಲ್ಲಿ ಯಾರೂ ತೊಂದರೆಗೊಳಗಾಗಿಲ್ಲ, ಗಾಯಗಳಾಗಿಲ್ಲ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡಕೂಡಲೇ ಜಾಗೃತರಾದ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದರು.

ಇದನ್ನೂ ಓದಿ

IPL 2022 Points Table: ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದ ಆರ್​​ಸಿಬಿ: ಪಾತಾಳದಲ್ಲಿ ಸಿಎಸ್​ಕೆ, ಮುಂಬೈ

ಪಾಕಿಸ್ತಾನದ ಪ್ರಧಾನಿ ಹುದ್ದೆಯಲ್ಲಿದ್ದು ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್: ತುಟಿದ ಜಾರಿದ ಈ 8 ಮಾತುಗಳಿಂದ ಸೃಷ್ಟಿಯಾಗಿತ್ತು ವಿವಾದ

Published On - 11:13 am, Sun, 10 April 22

Follow Us
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ