AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?
ಜಯನಗರ, ಚಾಮರಾಜಪೇಟೆಯಯಲ್ಲಿ ಬಿಎಂಟಿಸಿ ಬಸ್​ಗಳು ಹೊತ್ತು ಉರಿದಿತ್ತು
TV9 Web
| Edited By: |

Updated on:Apr 10, 2022 | 11:18 AM

Share

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು?: * ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ. * ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ. * ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ. * ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ. * ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಕಳೆದಬಾರಿ ಚಾಮರಾಜಪೇಟೆ ಪೊಲೀಸ್ ಸ್ಟೇಶನ್ ಠಾಣೆ ವ್ಯಾಪ್ತಿಯಲ್ಲಿ (ಮಕ್ಕಳ ಕೂಟ) ಚಲಿಸುತ್ತಿದ್ದ ಬಿಎಂಟಿಸಿ  ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಂದರೆ ಶನಿವಾರ ಶೇಷಾದ್ರಿಪುರಂನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು. ಅದೃಷ್ಟದ ಸಂಗತಿಯೆಂದರೆ ಈ ಅನಾಹುತದಲ್ಲಿ ಯಾರೂ ತೊಂದರೆಗೊಳಗಾಗಿಲ್ಲ, ಗಾಯಗಳಾಗಿಲ್ಲ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡಕೂಡಲೇ ಜಾಗೃತರಾದ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದರು.

ಇದನ್ನೂ ಓದಿ

IPL 2022 Points Table: ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದ ಆರ್​​ಸಿಬಿ: ಪಾತಾಳದಲ್ಲಿ ಸಿಎಸ್​ಕೆ, ಮುಂಬೈ

ಪಾಕಿಸ್ತಾನದ ಪ್ರಧಾನಿ ಹುದ್ದೆಯಲ್ಲಿದ್ದು ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್: ತುಟಿದ ಜಾರಿದ ಈ 8 ಮಾತುಗಳಿಂದ ಸೃಷ್ಟಿಯಾಗಿತ್ತು ವಿವಾದ

Published On - 11:13 am, Sun, 10 April 22

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್