AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?

ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ.

ಬಬಿಎಂಟಿಸಿ ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು? ಪ್ರಯಾಣಿಕರ ಆತಂಕಕ್ಕೆ ಮುಕ್ತಿ ಯಾವಾಗ?
ಜಯನಗರ, ಚಾಮರಾಜಪೇಟೆಯಯಲ್ಲಿ ಬಿಎಂಟಿಸಿ ಬಸ್​ಗಳು ಹೊತ್ತು ಉರಿದಿತ್ತು
TV9 Web
| Edited By: |

Updated on:Apr 10, 2022 | 11:18 AM

Share

ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ ಬಸ್​ಗಳು (BMTC Buses) ಹೊತ್ತಿ ಉರಿಯುತ್ತಿವೆ. ಮೂರು ನಾಲ್ಕು ತಿಂಗಳುಗಳಿಂದ ಬಸ್ಗಳು ಬೆಂಕಿಗಾಹುತಿಯಾಗುತ್ತಿವೆ. ಕಳೆದ ಎರಡು ತಿಂಗಳಲ್ಲಿ ಮೂರು ಬಸ್​ಗಳು ಸುಟ್ಟು ಹೋಗಿವೆ. ನಿತ್ಯ ಲಕ್ಷಾಂತರ ಪ್ರಯಾಣಿಕರು (Passengers) ಸಂಚಾರ ಮಾಡುವ ಬಿಎಂಟಿಸಿ ಬಸ್​ಗಳು ಸುರಕ್ಷಿತ ಅಲ್ವಾ? ಎಂಬ ಅನುಮಾನ ಮೂಡಿದೆ. ಜೊತೆಗೆ ಬಿಎಂಟಿಸಿ ಬಸ್​ಗಳ ನಿರ್ವಹಣೆಯಲ್ಲಿ ಪದೇ ಪದೇ ನಿರ್ಲಕ್ಷ್ಯ ವಹಿಸಿದ್ಯಾ ಎಂಬ ಶಂಕೆ ವ್ಯಕ್ತವಾಗುತ್ತಿದೆ.

ಅಧಿಕಾರಿಗಳ ಬೇಜವಾಬ್ದಾರಿನೇ ಇದಕ್ಕೆ ಕಾರಣ ಆಯಿತಾ? ಅಧಿಕಾರಿಗಳ ಕಮಿಷನ್ ಧನದಾಹಕ್ಕೆ ಬಿಎಂಟಿಸಿ ಬಸ್​ಗಳು ಬೆಂಕಿ ಆಹುತಿ ಆಗುತ್ತಿದ್ಯಾ? ಈ ಹಿಂದೆ ಎರಡು ಬಸ್​ಗಳಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೂ ಅಧಿಕಾರಿಗಳು ಯಾಕೆ ಎಚ್ಚೆತ್ತುಕೊಂಡಿಲ್ಲ? ಎಂಬ ಪ್ರಶ್ನೆಗಳ ಸರಮಾಲೆ ಹುಟ್ಟಿಕೊಂಡಿದ್ದು, ಸಾಲು ಸಾಲು ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಆತಂಕ ಹೆಚ್ಚಾಗಿದೆ.

ಬಿಎಂಟಿಸಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು?: * ಅಶೋಕ್ ಲೇಲ್ಯಾಂಡ್ ಕಂಪನಿಯಲ್ಲಿ ಬಸ್​ಗಳ ವಿನ್ಯಾಸ ಲೋಪದೋಷ. * ನಗರದ 48 ಡಿಪೋಗಳಲ್ಲಿ ಬಸ್ ನಿರ್ವಹಣೆಯಲ್ಲಿ ವೈಫಲ್ಯ. * ಬಸ್ ಡಿಪೋಗಳಿಂದ ಹೊರಬರುವ ಮುನ್ನ ಬಸ್​ಗಳನ್ನ ಪರಿಶೀಲನೆ ಮಾಡುತ್ತಿಲ್ಲ. * ಕಳಪೆ ಗುಣಮಟ್ಟದ ಸ್ಪೇರ್ ಪಾರ್ಟ್ಸ್ ಖರೀದಿ. * ಬಿಸಿಲಿನ ಧಗೆಯಿಂದ ಇಂಜಿನ್ನಲ್ಲಿ ತಾಂತ್ರಿಕ ದೋಷ.

ಕಳೆದಬಾರಿ ಚಾಮರಾಜಪೇಟೆ ಪೊಲೀಸ್ ಸ್ಟೇಶನ್ ಠಾಣೆ ವ್ಯಾಪ್ತಿಯಲ್ಲಿ (ಮಕ್ಕಳ ಕೂಟ) ಚಲಿಸುತ್ತಿದ್ದ ಬಿಎಂಟಿಸಿ  ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಈ ಬಾರಿ ಅಂದರೆ ಶನಿವಾರ ಶೇಷಾದ್ರಿಪುರಂನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ಬೆಂಕಿ ಹೊತ್ತಿಕೊಂಡಿತು. ಅದೃಷ್ಟದ ಸಂಗತಿಯೆಂದರೆ ಈ ಅನಾಹುತದಲ್ಲಿ ಯಾರೂ ತೊಂದರೆಗೊಳಗಾಗಿಲ್ಲ, ಗಾಯಗಳಾಗಿಲ್ಲ. ಇಂಜಿನ್ನಿಂದ ಹೊಗೆ ಬರುತ್ತಿರುವುದನ್ನು ಕಂಡಕೂಡಲೇ ಜಾಗೃತರಾದ ಬಸ್ಸಿನ ಡ್ರೈವರ್ ಮತ್ತು ಕಂಡಕ್ಟರ್ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿದರು.

ಇದನ್ನೂ ಓದಿ

IPL 2022 Points Table: ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಜಿಗಿದ ಆರ್​​ಸಿಬಿ: ಪಾತಾಳದಲ್ಲಿ ಸಿಎಸ್​ಕೆ, ಮುಂಬೈ

ಪಾಕಿಸ್ತಾನದ ಪ್ರಧಾನಿ ಹುದ್ದೆಯಲ್ಲಿದ್ದು ನಾಲಿಗೆ ಹರಿಬಿಟ್ಟ ಇಮ್ರಾನ್ ಖಾನ್: ತುಟಿದ ಜಾರಿದ ಈ 8 ಮಾತುಗಳಿಂದ ಸೃಷ್ಟಿಯಾಗಿತ್ತು ವಿವಾದ

Published On - 11:13 am, Sun, 10 April 22

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ