Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ ಪ್ರಕರಣ; ಬಂಧನದ ಹಿಂದೆ ಇದೆ ರೋಚಕ ಸ್ಟೋರಿ

ಸರಗಳ್ಳರು ನಗರದಲ್ಲಿ ಹತ್ತಾರು ಕಡೆ ಸರಗಳ್ಳತನ ಮಾಡಿ ಪೊಲೀಸರನ್ನೇ ಯಾಮಾರಿಸಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಸರಗಳ್ಳತನ ಮಾಡಿ ಎಸ್ಕೇಪ್ ಆಗಿದ್ದರು.

ಕುಖ್ಯಾತ ಸರಗಳ್ಳರ ಗ್ಯಾಂಗ್ ಬಂಧನ ಪ್ರಕರಣ; ಬಂಧನದ ಹಿಂದೆ ಇದೆ ರೋಚಕ ಸ್ಟೋರಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: sandhya thejappa

Updated on: Aug 26, 2021 | 9:42 AM

ಬೆಂಗಳೂರು: ಕುಖ್ಯಾತ ಸರಗಳ್ಳ ಬವಾರಿಯ ಗ್ಯಾಂಗ್​ನ ಬಂಧಿಸಲು ಹಲವು ತಿಂಗಳಿಂದ ಕಾರ್ಯಾಚರಣೆ ನಡೆದಿದೆ. ರಾಹುಲ್, ಗೌರವ್, ನಿತೀನ್, ರಿಯಾಜ್ ಸೇರಿ ಐವರನ್ನು ಬಂಧನ ಮಾಡಿದ್ದ ಪೊಲೀಸರು, ಸಿನಿಮೀಯ ರೀತಿಯಲ್ಲಿ ಬವಾರಿಯ ಗ್ಯಾಂಗ್ನ ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಸೆರೆಗೆ ನೂರಾರು ಸಿಸಿ ಟಿವಿಗಳ ದೃಶ್ಯಗಳನ್ನು ಪರಿಶೀಲನೆ ಮಾಡಿದ್ದಾರೆ. ಆದರೆ ಸಿಸಿ ಟಿವಿ ದೃಶ್ಯದಲ್ಲಿಯೂ ಆರೋಪಿಗಳ ಜಾಡು ಪತ್ತೆಯಾಗಿರಲಿಲ್ಲ. ಆರೋಪಿಗಳು ಕೊನೆಯದಾಗಿ ಪತ್ತೆಯಾದ ಸ್ಥಳದಲ್ಲಿ ಶೋಧ ಕಾರ್ಯ ನಡೆಸಿ, ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಸರಗಳ್ಳರು ನಗರದಲ್ಲಿ ಹತ್ತಾರು ಕಡೆ ಸರಗಳ್ಳತನ ಮಾಡಿ ಪೊಲೀಸರನ್ನೇ ಯಾಮಾರಿಸಿದ್ದರು. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಸರಗಳ್ಳತನ ಮಾಡಿ ಎಸ್ಕೇಪ್ ಆಗಿದ್ದರು. ಪೊಲೀಸರು ಘಟನೆ ನಡೆದ ಸ್ಥಳದಿಂದ 12 ಕಿಲೋಮೀಟರ್ ದೂರ ಕಾರ್ಯಚರಣೆ ನಡೆಸಿದ್ದರು. ಸರ ಕದ್ದು ಹೋಗಿರುವ ವಿಜಯನಗರದಿಂದ ಸುಬ್ರಮಣ್ಯ ನಗರದವರೆಗೆ ಸಿಸಿ ಟಿವಿ ದೃಶ್ಯಗಳನ್ನು ಪರಿಶೀಲನೆ ಮಾಡುತ್ತಾರೆ. 12 ಕಿಲೋಮೀಟರ್ ವ್ಯಾಪ್ತಿಯಲ್ಲಿ ಸುಮಾರು 100 ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಗಳನ್ನು ಗಮನಿಸಿದ ಪೊಲೀಸರಿಗೆ, ಸುಬ್ರಮಣ್ಯ ನಗರದ ಬಳಿಯಿಂದ ಸರಗಳ್ಳರು ಮುಂದೆ ಹೋಗಿರುವ ದೃಶ್ಯ ಸಿಗುವುದಿಲ್ಲ.

ಪೊಲೀಸರು ಅನುಮಾನ ಬಂದು ಸುಬ್ರಮಣ್ಯ ನಗರ ಸುತ್ತಾಮುತ್ತ ಹುಡುಕಾಟ ನಡೆಸುತ್ತಾರೆ. ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಖಾಕಿ ಪಡೆ ಜಾಲಾಡುತ್ತದೆ. ಸುಬ್ರಮಣ್ಯ ನಗರದ ಸ್ಲಂನಲ್ಲಿ ಪಲ್ಸರ್ ಬೈಕ್ ಮೇಲೆ ಟಾರ್ಪಲ್ ಹಾಕಿ ಮುಚ್ಚಿಟ್ಟಿರುವುದು ಪೊಲೀಸರಿಗೆ ಕಾಣಿಸುತ್ತೆ. ಬೈಕ್ಗೆ ನಂಬರ್ ಪ್ಲೇಟ್ ಇರೋದಿಲ್ಲ. ಬೈಕ್ ಕಳ್ಳರದ್ದೇ ಇರಬಹುದು ಎನ್ನುವ ಅನುಮಾನ ಬಲವಾಗುತ್ತೆ.

ಈ ವೇಳೆ ವಿಜಯನಗರ ಪೊಲೀಸರಿಂದ ಅಕ್ಕ ಪಕ್ಕ ಮನೆಯವರ ಬಳಿ ವಿಚಾರಿಸಿದಾಗ ಕಳ್ಳರು ಮನೆಯೊಂದರಲ್ಲಿ ಇರುವ ಮಾಹಿತಿ ಸಿಗುತ್ತೆ. ಮಾರನೆ ದಿನ ವಿಜಯನಗರ ಪೊಲೀಸ್ ತಂಡ ಮನೆ ಮೇಲೆ ದಾಳಿ ಮಾಡಿದಾಗ ಆರೋಪಿಗಳು ಸಿಕ್ಕಿಹಾಕಿಕೊಳ್ಳುತ್ತಾರೆ.

ಇದನ್ನೂ ಓದಿ

ಕತ್ತು ಕುಯ್ದು, ಸಿಕ್ಕಸಿಕ್ಕಲ್ಲೆಲ್ಲಾ ಚಾಕುವಿನಿಂದ ಚುಚ್ಚಿ ಹತ್ಯೆಗೈದ ಕಿರಾತಕರು; ಕುರಿಕೋಟಾ ಸೇತುವೆ ಬಳಿ ಗುರುತು ಸಿಗದ ಶವ ಪತ್ತೆ

‘ಮೊಘಲರೇ ನಿಜವಾಗಿ ಈ ದೇಶ ಕಟ್ಟಿದ್ದು; ಅವರ ಬಗ್ಗೆ ಕೆಟ್ಟ ಮಾತು ಸರಿಯಲ್ಲ’: ನಿರ್ದೇಶಕ ಕಬೀರ್​ ಖಾನ್​

(thrilling story of that police had been working on arresting the burglars at Bengaluru)

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್