AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿದ ಪುಂಡರು; ಕಾರಿನ ಗಾಜು ಒಡೆದುಹಾಕಿ ಪರಾರಿ

ಬೆಂಗಳೂರಿನಲ್ಲಿ ಪುಂಡರ ಗ್ಯಾಂಗ್​​​ ಅಟ್ಟಹಾಸ ಮುಂದುವರಿದಿದೆ. ಪೊಲೀಸರ ಭಯವಿಲ್ಲದಂತೆ ವರ್ತಿಸುತ್ತಿದ್ದು, ಇತ್ತೀಚಿಗೆ ವಿಲೀಂಗ್​ ಮಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಪುಂಡರು. ಇದೀಗ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ, ಚಾಲಕನ ಮೇಲೆ ದರ್ಪ ತೋರಿದ ಘಟನೆ ನಡೆದಿದೆ.

Bengaluru: ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿದ ಪುಂಡರು; ಕಾರಿನ ಗಾಜು ಒಡೆದುಹಾಕಿ ಪರಾರಿ
ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ
Shivaprasad B
| Edited By: |

Updated on: Jul 14, 2023 | 7:11 AM

Share

ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರ ಗ್ಯಾಂಗ್​​​ ಅಟ್ಟಹಾಸ ಮುಂದುವರಿದಿದೆ. ಪೊಲೀಸರ ಭಯವಿಲ್ಲದಂತೆ ವರ್ತಿಸುತ್ತಿದ್ದು, ಇತ್ತೀಚಿಗೆ ವಿಲೀಂಗ್​ ಮಾಡುತ್ತಾ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಪುಂಡರು. ಇದೀಗ ಹಾರ್ನ್​ ಮಾಡಿ ದಾರಿ ಕೇಳಿದ್ದಕ್ಕೆ ಕಾರು ಅಡ್ಡಗಟ್ಟಿ, ಚಾಲಕನ ಮೇಲೆ ದರ್ಪ ತೋರಿದ ಘಟನೆ ಇಂದು(ಜು.14) ರಾತ್ರಿ 2.30 ರ ಸಮಯದಲ್ಲಿ ವರ್ತೂರು(Varthur) ಬಳಿ ನಡೆದಿದೆ. ಹೌದು ರಸ್ತೆಯಲ್ಲಿ 3-4 ಬೈಕ್​​ ಸವಾರರು ಸೇರಿ ಅಡ್ಡಾದಿಡ್ಡಿ ಚಾಲನೆ ಮಾಡುತ್ತಿದ್ದರು. ಈ ವೇಳೆ ಕಾರು ಚಾಲಕ ದಾರಿ ಬಿಡುವಂತೆ ಹಿಂಬದಿಯಿಂದ ಹಾರ್ನ್ ಮಾಡಿದ್ದಾನೆ. ಇದಕ್ಕೆ ರೊಚ್ಚಿಗೆದ್ದ ಪುಂಡರು ಬೈಕ್ ನಿಲ್ಲಿಸಿ ಬಂದು ಚಾಲಕನ ಜತೆ ಗಲಾಟೆ ಮಾಡಿದ್ದಾರೆ.

ಕಾರಿನ ಗಾಜು ಒಡೆದುಹಾಕಿ ಪರಾರಿಯಾಗಿರುವ ಕಿಡಿಗೇಡಿಗಳು

ಇದೇ ವೇಳೆ ಮತ್ತೊಬ್ಬ ಪುಂಡ ಕಾರಿಗೆ ಬೈಕ್​​ನಿಂದ ಡಿಕ್ಕಿ ಹೊಡೆದು, ನಂತರ ಕಾರು ಫಾಲೋ ಮಾಡಿಕೊಂಡು ಬಂದಿದ್ದಾರೆ. ಗುಂಜೂರು ಗೇಟ್​​ನ ಅಪಾರ್ಟ್‌ಮೆಂಟ್ ಬಳಿ ಚಾಲಕನ ಜೊತೆ ಮತ್ತೆ ಗಲಾಟೆ ಶುರು ಮಾಡಿದ್ದು, ಕಾರಿನ ಗಾಜು ಒಡೆದಾಕಿ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಇನ್ನು ಕಿಡಿಗೇಡಿಗಳು ನಡೆಸಿರುವ ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಪುಂಡರ ಕೃತ್ಯದ ಬಗ್ಗೆ ಚಾಲಕ ಟ್ವೀಟ್​ ಮೂಲಕ ದೂರು ನೀಡಿದ್ದಾನೆ.

ಇದನ್ನೂ ಓದಿ:ಸಿಲಿಕಾನ್ ಸಿಟಿಯಲ್ಲಿ ನಿಲ್ಲದ ಪುಂಡರ ಅಟ್ಟಹಾಸ; ಬಿಬಿಎಂಪಿ ಕಸದ ಆಟೋ ಚಾಲಕನ ಮೇಲೆ ಮನಸೋ ಇಚ್ಚೆ ಥಳಿಸಿ ಹಲ್ಲೆ

ಓರ್ವನ ಜೊತೆಗೆ ಮತ್ತೆ ಮೂವರು ಜಮಾಯಿಸಿ ಗಲಾಟೆ

ಇನ್ನು ಹಾರ್ನ್ ಮಾಡಿದ್ದಕ್ಕೆ ನಡುರಸ್ತೆಯಲ್ಲಿ ಬೈಕ್ ನಿಲ್ಲಿಸಿ ಓರ್ವ ಅಸಾಮಿ ಬಂದಿದ್ದಾನೆ. ಇದಾದ ಬಳಿಕ ಆತನ ಜೊತೆಗೆ ಮತ್ತೆ ಮೂವರು ಜಮಾಯಿಸಿ ಕಾರು ಚಾಲಕನ ಮುಂದೆ ದರ್ಪ ತೋರಿದ್ದಾರೆ. ಅಷ್ಟೇ ಅಲ್ಲದೇ ಮತ್ತೊರ್ವ ಬೈಕ್​ನಿಂದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಅಪಾರ್ಟ್‌ಮೆಂಟ್​ವರೆಗೂ ಕಾರು ಫಾಲೋ ಮಾಡಿಕೊಂಡು ಬಂದ ಗ್ಯಾಂಗ್ ಅಲ್ಲಿಯೂ ಕಾರು ಜಗಳಕ್ಕೀಳಿದು ಕಾರಿನ ಗಾಜು ಒಡೆದು ಪುಂಡಾಟ ಮೆರೆದಿದ್ದಾರೆ. ಆದಷ್ಡು ಬೇಗ ಪೊಲೀಸರು ಈ ಕಿಡಿಗೇಡಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ವಿಭಜಕಕ್ಕೆ ಡಿಕ್ಕಿ ಹೊಡೆದು ಕಾರಿನ ಮೇಲೆ ಉರುಳಿದ ಲಾರಿ
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಕರ್ನಾಟಕವನ್ನೇ ಬೆಚ್ಚಿ ಬೀಳಿಸಿದ ದರೋಡೆ ಪ್ರಕರಣಗಳ ಲಿಸ್ಟ್ ಇಲ್ಲಿದೆ ನೋಡಿ!
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಅಬ್ಬರಿಸಿದ ಸಾಲ್ಟ್ ಅ್ಯಂಡ್ ಪೆಪ್ಪರ್: ಪ್ಲೇಆಫ್​ಗೆ ನೈಟ್ ರೈಡರ್ಸ್​
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಡಿಕೆಶಿ​ಗೆ 16 ಲಕ್ಷ ರೂ ಮೌಲ್ಯದ ಗಿಫ್ಟ್: ಅಂಥದ್ದೇನಿದೆ? ಇಲ್ಲಿದೆ ನೋಡಿ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು; ನಮ್ರತಾ-ಸಂಗೀತಾ ಪ್ರೀತಿಯ ಅಪ್ಪುಗೆ
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಮತ್ತೆ ಅಶ್ವಿನಿ-ಗಿಲ್ಲಿ ಮಧ್ಯೆ ದೊಡ್ಡ ಫೈಟ್; ಕೊಟ್ಟ ಶಿಕ್ಷೆ ಘನಘೋರ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
ಆಂಧ್ರಪ್ರದೇಶದಲ್ಲಿ 158 ಪ್ರಯಾಣಿಕರಿದ್ದ 2 ರೈಲು ಬೋಗಿಗಳಿಗೆ ಬೆಂಕಿ
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
104 ಮೀಟರ್​ ಸಿಕ್ಸರ್​ನೊಂದಿಗೆ ಹೊಸ ಮೈಲುಗಲ್ಲು ದಾಟಿದ ಮ್ಯಾಕ್ಸ್​ವೆಲ್
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು
ಮೊಸಳೆ ದಾಳಿ ತಡೆಯಲು ನೀರಿನಲ್ಲಿ ಈಜಿ ಹೊರಟ ಮಂಗಗಳು