AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thyagaraja Aradhana 2022: ಬೆಂಗಳೂರಿನಲ್ಲಿ ತ್ಯಾಗರಾಜ ಸ್ವಾಮಿ ಆರಾಧನಾ ಮಹೋತ್ಸವ ರದ್ದು

ಕರ್ನಾಟಕ ಸಂಗೀತ ಪ್ರಿಯರು ಆಸಕ್ತಿಯಿಂದ ಎದುರು ನೋಡುತ್ತಿದ್ದ ಸಂಗೀತ ಕಾರ್ಯಕ್ರಮ ನಡೆಯುವುದಿಲ್ಲ ಎನ್ನುವುದು ಕಲಾಪ್ರಿಯರಲ್ಲಿ ನಿರಾಸೆ ಉಂಟು ಮಾಡಿದೆ

Thyagaraja Aradhana 2022: ಬೆಂಗಳೂರಿನಲ್ಲಿ ತ್ಯಾಗರಾಜ ಸ್ವಾಮಿ ಆರಾಧನಾ ಮಹೋತ್ಸವ ರದ್ದು
ವಾಗ್ಗೇಯಕಾರ ಸಂತ ತ್ಯಾಗರಾಜರು
TV9 Web
| Edited By: |

Updated on: Jan 13, 2022 | 8:55 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊರೊನಾ ನೆರಳು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ರದ್ದಾಗುತ್ತಿವೆ. ಇದೇ ಕಾರಣಕ್ಕೆ ಬೆಂಗಳೂರಿನಲ್ಲಿ ಪ್ರತಿವರ್ಷ ನಡೆಯುತ್ತಿದ್ದ ತ್ಯಾಗರಾಜ ಆರಾಧನಾ ಮಹೋತ್ಸವವನ್ನು ಈ ವರ್ಷವೂ ರದ್ದುಪಡಿಸಲಾಗಿದೆ. ಕರ್ನಾಟಕ ಸಂಗೀತ ಪ್ರಿಯರು ಆಸಕ್ತಿಯಿಂದ ಎದುರು ನೋಡುತ್ತಿದ್ದ ಸಂಗೀತ ಕಾರ್ಯಕ್ರಮ ನಡೆಯುವುದಿಲ್ಲ ಎನ್ನುವುದು ಕಲಾಪ್ರಿಯರಲ್ಲಿ ನಿರಾಸೆ ಉಂಟು ಮಾಡಿದೆ.

ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿರುವ ಕಾರಣ ಹಾಗೂ ಸರ್ಕಾರ ವಿಧಿಸಿರುವ ನಿರ್ಬಂಧಗಳಿಂದಾಗಿ 175ನೇ ವಾರ್ಷಿಕ ತ್ಯಾಗರಾಜರ ಆರಾಧನಾ ಮಹೋತ್ಸವ ಹಾಗೂ ಸಂಗೀತೋತ್ಸವವನ್ನು ರದ್ದುಗೊಳಿಸಲಾಗಿದೆ ಎಂದು ಸದ್ಗುರು ಶ್ರೀ ತ್ಯಾಗಬ್ರಹ್ಮ ಆರಾಧನಾ ಕೈಂಕರ್ಯ ಟ್ರಸ್ಟ್‌ನ ಮ್ಯಾನೇಜಿಂಗ್ ಟ್ರಸ್ಟಿ ರಾಧಾಕೃಷ್ಣ ಜಿ.ಶೇಷಪ್ಪ ತಿಳಿಸಿದ್ದಾರೆ. ಬೆಂಗಳೂರಿನ ಚಾಮರಾಜಪೇಟೆಯ ಶೃಂಗೇರಿ ಶಂಕರ ಮಠದಲ್ಲಿ ಟ್ರಸ್ಟ್‌ನ ಆಶ್ರಯದಲ್ಲಿ ಜನವರಿ 16ರಿಂದ 22ರವರೆಗೆ ತ್ಯಾಗರಾಜರ ಆರಾಧನಾ ಮಹೋತ್ಸವ ಆಯೋಜಿಸಲಾಗಿತ್ತು.

ಕೊರೊನಾ ಹಿನ್ನೆಲೆ ಕೊಪ್ಪಳದ ಗವಿಮಠ ಜಾತ್ರೆ ರದ್ದು ಕೊರೊನಾ ಹಿನ್ನೆಲೆ ಕೊಪ್ಪಳದ ಗವಿಮಠ ಜಾತ್ರೆ ರದ್ದು ಮಾಡಲಾಗಿದೆ. ದಕ್ಷಿಣ ಭಾರತದ ಮಹಾಕುಂಭ ಮೇಳ ಎಂದು ಖ್ಯಾತಿ ಪಡೆದ ಕೊಪ್ಪಳದ ಗವಿಮಠ ಜಾತ್ರೆಯನ್ನು ಕೊರೊನಾ ಹೆಚ್ಚಳ ಹಾಗೂ ಸರ್ಕಾರದ ನಿಯಮಾವಳಿಗಳ ಹಿನ್ನೆಲೆ ರದ್ದುಗೊಳಿಸಿ ಆದೇಶಿಸಲಾಗಿದೆ. ಸಾಂಪ್ರದಾಯಿಕ ವಿಧಿ ವಿಧಾನಗಳು ಮಾತ್ರ ನಡೆಯುತ್ತದೆ ಎಂದು ಗವಿಮಠದ ಆಡಳಿತ ಮಂಡಳಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ.

ಇದನ್ನೂ ಓದಿ: Kanakadasa Jayanti 2021: ಕನಕದಾಸ ಜಯಂತಿಯ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ? ಇದನ್ನೂ ಓದಿ: Coronavirus: ಬೆಂಗಳೂರು ಅಪಾರ್ಟ್​ಮೆಂಟ್ ನಿವಾಸಿಗಳಿಗೆ ಕೊರೊನಾ ಮಾರ್ಗಸೂಚಿ ಬಿಡುಗಡೆ

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!